<p><strong>ಛತ್ರಪತಿ ಸಂಭಾಜಿನಗರ:</strong> ಸರಪಂಚ್ ಸಂತೋಷ್ ದೇಶಮುಖ್ ಹತ್ಯೆಗೆ ಸಂಬಂಧಿಸಿದಂತೆ ಸುಲಿಗೆಗಾಗಿ ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಸಭೆಯ ಕುರಿತು ಧನಂಜಯ ಮುಂಡೆ ವಿವರಿಸಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಸುರೇಶ್ ದಾಸ್ ಮಂಗಳವಾರ ಹೇಳಿದ್ದಾರೆ.</p><p>ಸಂತೋಷ್ ದೇಶಮುಖ್ ಹತ್ಯೆ ಪ್ರಕರಣದಲ್ಲಿ ತಮ್ಮ ಆಪ್ತ ಸಹಾಯಕ ವಾಲ್ಮಿಕ್ ಕರಡ್ ಅವರನ್ನು ಮಾಸ್ಟರ್ ಮೈಂಡ್ ಎಂದು ಹೆಸರಿಸಿದ ಕೆಲವು ದಿನಗಳ ನಂತರ, ಇಂದು ಮುಂಡೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.</p><p>ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದಾಸ್, ಸುಲಿಗೆ ಬಗ್ಗೆ ಮುಂಡೆ ಅವರ 'ಸತ್ಪುರ' ಬಂಗಲೆಯಲ್ಲಿ ಸಭೆ ನಡೆದಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಮುಂಡೆ ಈ ಬಗ್ಗೆ ವಿವರಣೆ ನೀಡಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.</p><p>ಎನ್ಸಿಪಿ ನಾಯಕ ಧನಂಜಯ ಮುಂಡೆ ಅವರು ವಾಲ್ಮಿಕ್ ಕರಡ್ ಅವರನ್ನು ಸಂಪೂರ್ಣವಾಗಿ ಅವಲಂಬಿಸಿದ್ದಾರೆ ಎಂದು ಅವರ ಸೋದರಸಂಬಂಧಿ, ಸಚಿವೆ ಪಂಕಜಾ ಮುಂಡೆ ಹೇಳಿದ್ದರು. ಹಾಗಾದರೆ, ಮುಂಡೆ ಅವರಿಗೆ ತಿಳಿಯದೆ ಸರಪಂಚರ ಕೊಲೆ ಹೇಗೆ ನಡೆದಿರಬಹುದು? ಎಂದು ದಾಸ್ ಪ್ರಶ್ನಿಸಿದ್ದಾರೆ.</p><p>ಬೀಡ್ನ ಮಸಾಜೋಗ್ ಗ್ರಾಮದ ಸರಪಂಚ್ ದೇಶಮುಖ್ ಅವರನ್ನು ಕಳೆದ ವರ್ಷ ಡಿಸೆಂಬರ್ 9ರಂದು ಜಿಲ್ಲೆಯ ಇಂಧನ ಕಂಪನಿಯನ್ನು ಗುರಿಯಾಗಿಸಿಕೊಂಡು ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ಅಪಹರಿಸಿ, ಚಿತ್ರಹಿಂಸೆ ನೀಡಿ, ಕೊಲೆ ಮಾಡಲಾಗಿತ್ತು.</p><p>ಹತ್ಯೆಗೆ ಸಂಬಂಧಿಸಿದ ಭೀಕರ ಫೋಟೊಗಳು ಮತ್ತು ನ್ಯಾಯಾಲಯದ ಆರೋಪಪಟ್ಟಿ ಮುಂಡೆ ಆಪ್ತನ ಹೆಸರಿರುವ ವಿವರಗಳು ಹೊರಬಂದ ನಂತರ ಪ್ರತಿಪಕ್ಷಗಳು ಮುಂಡೆ ಅವರ ರಾಜೀನಾಮೆಗೆ ಒತ್ತಾಯವನ್ನು ತೀವ್ರಗೊಳಿಸಿದ್ದವು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛತ್ರಪತಿ ಸಂಭಾಜಿನಗರ:</strong> ಸರಪಂಚ್ ಸಂತೋಷ್ ದೇಶಮುಖ್ ಹತ್ಯೆಗೆ ಸಂಬಂಧಿಸಿದಂತೆ ಸುಲಿಗೆಗಾಗಿ ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಸಭೆಯ ಕುರಿತು ಧನಂಜಯ ಮುಂಡೆ ವಿವರಿಸಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಸುರೇಶ್ ದಾಸ್ ಮಂಗಳವಾರ ಹೇಳಿದ್ದಾರೆ.</p><p>ಸಂತೋಷ್ ದೇಶಮುಖ್ ಹತ್ಯೆ ಪ್ರಕರಣದಲ್ಲಿ ತಮ್ಮ ಆಪ್ತ ಸಹಾಯಕ ವಾಲ್ಮಿಕ್ ಕರಡ್ ಅವರನ್ನು ಮಾಸ್ಟರ್ ಮೈಂಡ್ ಎಂದು ಹೆಸರಿಸಿದ ಕೆಲವು ದಿನಗಳ ನಂತರ, ಇಂದು ಮುಂಡೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.</p><p>ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದಾಸ್, ಸುಲಿಗೆ ಬಗ್ಗೆ ಮುಂಡೆ ಅವರ 'ಸತ್ಪುರ' ಬಂಗಲೆಯಲ್ಲಿ ಸಭೆ ನಡೆದಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಮುಂಡೆ ಈ ಬಗ್ಗೆ ವಿವರಣೆ ನೀಡಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.</p><p>ಎನ್ಸಿಪಿ ನಾಯಕ ಧನಂಜಯ ಮುಂಡೆ ಅವರು ವಾಲ್ಮಿಕ್ ಕರಡ್ ಅವರನ್ನು ಸಂಪೂರ್ಣವಾಗಿ ಅವಲಂಬಿಸಿದ್ದಾರೆ ಎಂದು ಅವರ ಸೋದರಸಂಬಂಧಿ, ಸಚಿವೆ ಪಂಕಜಾ ಮುಂಡೆ ಹೇಳಿದ್ದರು. ಹಾಗಾದರೆ, ಮುಂಡೆ ಅವರಿಗೆ ತಿಳಿಯದೆ ಸರಪಂಚರ ಕೊಲೆ ಹೇಗೆ ನಡೆದಿರಬಹುದು? ಎಂದು ದಾಸ್ ಪ್ರಶ್ನಿಸಿದ್ದಾರೆ.</p><p>ಬೀಡ್ನ ಮಸಾಜೋಗ್ ಗ್ರಾಮದ ಸರಪಂಚ್ ದೇಶಮುಖ್ ಅವರನ್ನು ಕಳೆದ ವರ್ಷ ಡಿಸೆಂಬರ್ 9ರಂದು ಜಿಲ್ಲೆಯ ಇಂಧನ ಕಂಪನಿಯನ್ನು ಗುರಿಯಾಗಿಸಿಕೊಂಡು ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ಅಪಹರಿಸಿ, ಚಿತ್ರಹಿಂಸೆ ನೀಡಿ, ಕೊಲೆ ಮಾಡಲಾಗಿತ್ತು.</p><p>ಹತ್ಯೆಗೆ ಸಂಬಂಧಿಸಿದ ಭೀಕರ ಫೋಟೊಗಳು ಮತ್ತು ನ್ಯಾಯಾಲಯದ ಆರೋಪಪಟ್ಟಿ ಮುಂಡೆ ಆಪ್ತನ ಹೆಸರಿರುವ ವಿವರಗಳು ಹೊರಬಂದ ನಂತರ ಪ್ರತಿಪಕ್ಷಗಳು ಮುಂಡೆ ಅವರ ರಾಜೀನಾಮೆಗೆ ಒತ್ತಾಯವನ್ನು ತೀವ್ರಗೊಳಿಸಿದ್ದವು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>