<p><strong>ಚೆನ್ನೈ:</strong> ಹೊಸ ರಾಜಕೀಯ ಪಕ್ಷ ಸ್ಥಾಪಿಸಿರುವ ವಿ.ಕೆ.ಶಶಿಕಲಾ ಅವರು, ಪಕ್ಷದ ಹೆಸರು ‘ಆಲ್ ಇಂಡಿಯಾ ಪುರಚ್ಚಿ ತಲೈವರ್ ಮಕ್ಕಳ್ ಮುನ್ನೇತ್ರ ಕಳಗಂ’(ಎಐಪಿಟಿಎಂಎಂಕೆ) ಎಂದು ಶುಕ್ರವಾರ ಘೋಷಿಸಿದ್ದಾರೆ.</p><p>ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡಿರುವ ಶಶಿಕಲಾ ನೂತನ ಪಕ್ಷ ಸ್ಥಾಪಿಸುವುದಾಗಿ ಇತ್ತೀಚೆಗೆ ಘೋಷಿಸಿದ್ದರು. ಎಐಎಡಿಎಂಕೆ ನಾಯಕಿ, ದಿವಂಗತ ಜೆ.ಜಯಲಲಿತಾ ಅವರ ಜನ್ಮದಿನದ ಅಂಗವಾಗಿ ರಾಮನಾಥಪುರಂ ಜಿಲ್ಲೆಯ ಕಮುದಿಯಲ್ಲಿ ಫೆಬ್ರುವರಿ 24ರಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಬಾವುಟವನ್ನು ಅನಾವರಣಗೊಳಿಸಿದ್ದರು. ಈಗ, ಪಕ್ಷದ ಹೆಸರನ್ನು ಘೋಷಿಸಿದ್ದಾರೆ.</p><p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಪಕ್ಷದ ಚಿಹ್ನೆ ತೆಂಗಿನ ತೋಟ ಆಗಿದ್ದು, ಇದು ಏಕತೆಯನ್ನು ಸೂಚಿಸುತ್ತದೆ. ಈ ಉದ್ದೇಶ ಸಾಧನೆಗಾಗಿ ನಾನು ಯಾವಾಗಲೂ ಶ್ರಮಿಸುತ್ತಿದ್ದೇನೆ’ ಎಂದು ಹೇಳಿದರು.</p><p>‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ತಮಿಳುನಾಡು ಜನರ ಏಳಿಗೆಗಾಗಿ ನಾವು ಒಳ್ಳೆಯ ಕೆಲಸ ಮಾಡಬೇಕು. ಇದಕ್ಕಾಗಿ ನಮ್ಮ ಆಲೋಚನೆ ಮತ್ತು ಸಿದ್ಧಾಂತಗಳಿಗೆ ಹೊಂದಿಕೆಯಾಗುವ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು’ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಹೊಸ ರಾಜಕೀಯ ಪಕ್ಷ ಸ್ಥಾಪಿಸಿರುವ ವಿ.ಕೆ.ಶಶಿಕಲಾ ಅವರು, ಪಕ್ಷದ ಹೆಸರು ‘ಆಲ್ ಇಂಡಿಯಾ ಪುರಚ್ಚಿ ತಲೈವರ್ ಮಕ್ಕಳ್ ಮುನ್ನೇತ್ರ ಕಳಗಂ’(ಎಐಪಿಟಿಎಂಎಂಕೆ) ಎಂದು ಶುಕ್ರವಾರ ಘೋಷಿಸಿದ್ದಾರೆ.</p><p>ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡಿರುವ ಶಶಿಕಲಾ ನೂತನ ಪಕ್ಷ ಸ್ಥಾಪಿಸುವುದಾಗಿ ಇತ್ತೀಚೆಗೆ ಘೋಷಿಸಿದ್ದರು. ಎಐಎಡಿಎಂಕೆ ನಾಯಕಿ, ದಿವಂಗತ ಜೆ.ಜಯಲಲಿತಾ ಅವರ ಜನ್ಮದಿನದ ಅಂಗವಾಗಿ ರಾಮನಾಥಪುರಂ ಜಿಲ್ಲೆಯ ಕಮುದಿಯಲ್ಲಿ ಫೆಬ್ರುವರಿ 24ರಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಬಾವುಟವನ್ನು ಅನಾವರಣಗೊಳಿಸಿದ್ದರು. ಈಗ, ಪಕ್ಷದ ಹೆಸರನ್ನು ಘೋಷಿಸಿದ್ದಾರೆ.</p><p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಪಕ್ಷದ ಚಿಹ್ನೆ ತೆಂಗಿನ ತೋಟ ಆಗಿದ್ದು, ಇದು ಏಕತೆಯನ್ನು ಸೂಚಿಸುತ್ತದೆ. ಈ ಉದ್ದೇಶ ಸಾಧನೆಗಾಗಿ ನಾನು ಯಾವಾಗಲೂ ಶ್ರಮಿಸುತ್ತಿದ್ದೇನೆ’ ಎಂದು ಹೇಳಿದರು.</p><p>‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ತಮಿಳುನಾಡು ಜನರ ಏಳಿಗೆಗಾಗಿ ನಾವು ಒಳ್ಳೆಯ ಕೆಲಸ ಮಾಡಬೇಕು. ಇದಕ್ಕಾಗಿ ನಮ್ಮ ಆಲೋಚನೆ ಮತ್ತು ಸಿದ್ಧಾಂತಗಳಿಗೆ ಹೊಂದಿಕೆಯಾಗುವ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು’ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>