<p><strong>ಮುಂಬೈ</strong>: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ವೈದ್ಯೆಯ ಕುಟುಂಬ ಸದಸ್ಯರೊಂದಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಮಾತುಕತೆ ನಡೆಸಿದ್ದಾರೆ.</p><p>ದೂರವಾಣಿ ಮೂಲಕ ಸಂತ್ರಸ್ತೆಯ ಕುಟುಂಬದವರೊಂದಿಗೆ ಮಾತುಕತೆ ನಡೆಸಿದ ರಾಹುಲ್ ನ್ಯಾಯಕ್ಕಾಗಿ ನಿಮ್ಮ ಪರವಾಗಿ ನಿಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ.</p><p>ಈ ವೇಳೆ ಸಂತ್ರಸ್ತೆಯ ತಾಯಿ ಮಾತನಾಡಿ, ನಮ್ಮ ಮಗಳಿಗೆ ಆದ ಘೋರ ಅನ್ಯಾಯದ ವಿರುದ್ಧ ಧ್ವನಿಗೂಡಿಸುವಂತೆ, ಆರೋಪಿಗಳಿಗೆ ಶಿಕ್ಷೆಯಾಗುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ರಾಹುಲ್ ಅವರನ್ನು ಒತ್ತಾಯಿಸಿದ್ದಾರೆ.</p>.ನೀ ಬಂದಾಗಲೇ ಕಾಮಿಡಿ ಪೀಸ್ ಆಗಿಬಿಟ್ಟೆ: ರಿಷಾ–ಗಿಲ್ಲಿ ಮಧ್ಯೆ ಮಾತಿನ ಚಕಮಕಿ.ICC Ranking: ಅಗ್ರಸ್ಥಾನದೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ದಾಖಲೆ ಬರೆದ ರೋಹಿತ್. <p>ಈ ಪ್ರಕರಣದಲ್ಲಿ ನಮ್ಮ ಮಗಳ ಸಾವಿಗೆ ನ್ಯಾಯ ಸಿಗಬೇಕೆಂದರೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಸರ್ಕಾರಕ್ಕೆ ತಿಳಿಸಿ ಎಂದೂ ಕುಟುಂಬಸ್ಥರು ರಾಹುಲ್ ಬಳಿ ಮನವಿ ಮಾಡಿದ್ದಾರೆ. ಈ ವೇಳೆ ಎಸ್ಐಟಿ ರಚನೆಗೆ ಸಂಬಂಧಿಸಿದಂತೆ ಸರ್ಕಾರ ಮೇಲೆ ಒತ್ತಡ ಹೇರುವುದಾಗಿ ಭರವಸೆ ನೀಡಿದ್ದಾರೆ.</p><p>ಈ ಕೃತ್ಯದಲ್ಲಿ ಭಾಗಿಯಾಗಿದ್ದರೆ ಎಂದು ಆರೋಪಿಸಲಾದ ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಘಟನೆ ನಡೆದು ಒಂದು ವಾರ ಕಳೆದಿದೆ. ಸಾಕ್ಷ್ಯಗಳು ನಾಶವಾಗುವ ಸಾಧ್ಯತೆ ಇದೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.</p><p>ಇದೇ ವೇಳೆ ಸಂತ್ರಸ್ತೆಯ ಚಿಕ್ಕಪ್ಪ, ನಮ್ಮ ಮಗಳು ಮೃತಪಟ್ಟ ಬಳಿಕ ಆಕೆಯ ಬೆರಳಚ್ಚು ಸಹಾಯದಿಂದಾಗಿ ಮೊಬೈಲ್ ಫೋನ್ನಲ್ಲಿರುವ ಎಲ್ಲಾ ಡೇಟಾವನ್ನು ಅಳಿಸಿ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.</p>.ಪುನೀತ್ ರಾಜಕುಮಾರ್ಗೂ, ಕಾಫಿನಾಡಿಗೂ ವಿಶೇಷ ನಂಟು: ಇಲ್ಲಿವೆ ಚಿತ್ರಗಳು.ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರ: ಏರ್ ಪ್ಯೂರಿಫೈರ್ಗೆ ಹೆಚ್ಚಿದ ಬೇಡಿಕೆ. <p>ಸತಾರಾ ಜಿಲ್ಲೆಯ ಸರ್ಕಾರಿ ವೈದ್ಯೆಯ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕಾರಣಿಯೊಬ್ಬರ ಹೆಸರು ಕೇಳಿಬರುತ್ತಿದ್ದಂತೆ ಪೊಲೀಸರು ಕಾರ್ಯಪ್ರವರ್ತರಾಗಿದ್ದು, ಪುಣೆ ಮೂಲದ ಟೆಕಿಯನ್ನು ಬಂಧಿಸಿದ್ದಾರೆ. </p><p>ಸತಾರಾ ಜಿಲ್ಲೆಯ ಫಲ್ಟಣ್ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 28 ವರ್ಷದ ವೈದ್ಯೆಯು ಪಟ್ಟಣದ ಹೋಟೆಲ್ನ ಕೊಠಡಿಯೊಂದರಲ್ಲಿ ಗುರುವಾರ ನೇಣು ಹಾಕಿಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ ಅವರು ಅಂಗೈನಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ ಪೊಲೀಸ್ ಸಬ್ ಇನ್ಸ್ಪೆಪೆಕ್ಟರ್ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಹೆಸರುಗಳನ್ನು ಬರೆದಿಟ್ಟಿದ್ದರು.</p> .ಮತ್ತೆ ರಕ್ಷಿತಾ ಜೊತೆ ಜಗಳಕ್ಕಿಳಿದ ಅಶ್ವಿನಿ ಗೌಡ, ರಾಶಿಕಾ: ಏನಿದು ಕಿಚನ್ ಕದನ?.ಪ್ರಧಾನಮಂತ್ರಿ ಮುದ್ರಾ ಯೋಜನೆ: ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ವೈದ್ಯೆಯ ಕುಟುಂಬ ಸದಸ್ಯರೊಂದಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಮಾತುಕತೆ ನಡೆಸಿದ್ದಾರೆ.</p><p>ದೂರವಾಣಿ ಮೂಲಕ ಸಂತ್ರಸ್ತೆಯ ಕುಟುಂಬದವರೊಂದಿಗೆ ಮಾತುಕತೆ ನಡೆಸಿದ ರಾಹುಲ್ ನ್ಯಾಯಕ್ಕಾಗಿ ನಿಮ್ಮ ಪರವಾಗಿ ನಿಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ.</p><p>ಈ ವೇಳೆ ಸಂತ್ರಸ್ತೆಯ ತಾಯಿ ಮಾತನಾಡಿ, ನಮ್ಮ ಮಗಳಿಗೆ ಆದ ಘೋರ ಅನ್ಯಾಯದ ವಿರುದ್ಧ ಧ್ವನಿಗೂಡಿಸುವಂತೆ, ಆರೋಪಿಗಳಿಗೆ ಶಿಕ್ಷೆಯಾಗುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ರಾಹುಲ್ ಅವರನ್ನು ಒತ್ತಾಯಿಸಿದ್ದಾರೆ.</p>.ನೀ ಬಂದಾಗಲೇ ಕಾಮಿಡಿ ಪೀಸ್ ಆಗಿಬಿಟ್ಟೆ: ರಿಷಾ–ಗಿಲ್ಲಿ ಮಧ್ಯೆ ಮಾತಿನ ಚಕಮಕಿ.ICC Ranking: ಅಗ್ರಸ್ಥಾನದೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ದಾಖಲೆ ಬರೆದ ರೋಹಿತ್. <p>ಈ ಪ್ರಕರಣದಲ್ಲಿ ನಮ್ಮ ಮಗಳ ಸಾವಿಗೆ ನ್ಯಾಯ ಸಿಗಬೇಕೆಂದರೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಸರ್ಕಾರಕ್ಕೆ ತಿಳಿಸಿ ಎಂದೂ ಕುಟುಂಬಸ್ಥರು ರಾಹುಲ್ ಬಳಿ ಮನವಿ ಮಾಡಿದ್ದಾರೆ. ಈ ವೇಳೆ ಎಸ್ಐಟಿ ರಚನೆಗೆ ಸಂಬಂಧಿಸಿದಂತೆ ಸರ್ಕಾರ ಮೇಲೆ ಒತ್ತಡ ಹೇರುವುದಾಗಿ ಭರವಸೆ ನೀಡಿದ್ದಾರೆ.</p><p>ಈ ಕೃತ್ಯದಲ್ಲಿ ಭಾಗಿಯಾಗಿದ್ದರೆ ಎಂದು ಆರೋಪಿಸಲಾದ ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಘಟನೆ ನಡೆದು ಒಂದು ವಾರ ಕಳೆದಿದೆ. ಸಾಕ್ಷ್ಯಗಳು ನಾಶವಾಗುವ ಸಾಧ್ಯತೆ ಇದೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.</p><p>ಇದೇ ವೇಳೆ ಸಂತ್ರಸ್ತೆಯ ಚಿಕ್ಕಪ್ಪ, ನಮ್ಮ ಮಗಳು ಮೃತಪಟ್ಟ ಬಳಿಕ ಆಕೆಯ ಬೆರಳಚ್ಚು ಸಹಾಯದಿಂದಾಗಿ ಮೊಬೈಲ್ ಫೋನ್ನಲ್ಲಿರುವ ಎಲ್ಲಾ ಡೇಟಾವನ್ನು ಅಳಿಸಿ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.</p>.ಪುನೀತ್ ರಾಜಕುಮಾರ್ಗೂ, ಕಾಫಿನಾಡಿಗೂ ವಿಶೇಷ ನಂಟು: ಇಲ್ಲಿವೆ ಚಿತ್ರಗಳು.ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರ: ಏರ್ ಪ್ಯೂರಿಫೈರ್ಗೆ ಹೆಚ್ಚಿದ ಬೇಡಿಕೆ. <p>ಸತಾರಾ ಜಿಲ್ಲೆಯ ಸರ್ಕಾರಿ ವೈದ್ಯೆಯ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕಾರಣಿಯೊಬ್ಬರ ಹೆಸರು ಕೇಳಿಬರುತ್ತಿದ್ದಂತೆ ಪೊಲೀಸರು ಕಾರ್ಯಪ್ರವರ್ತರಾಗಿದ್ದು, ಪುಣೆ ಮೂಲದ ಟೆಕಿಯನ್ನು ಬಂಧಿಸಿದ್ದಾರೆ. </p><p>ಸತಾರಾ ಜಿಲ್ಲೆಯ ಫಲ್ಟಣ್ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 28 ವರ್ಷದ ವೈದ್ಯೆಯು ಪಟ್ಟಣದ ಹೋಟೆಲ್ನ ಕೊಠಡಿಯೊಂದರಲ್ಲಿ ಗುರುವಾರ ನೇಣು ಹಾಕಿಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ ಅವರು ಅಂಗೈನಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ ಪೊಲೀಸ್ ಸಬ್ ಇನ್ಸ್ಪೆಪೆಕ್ಟರ್ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಹೆಸರುಗಳನ್ನು ಬರೆದಿಟ್ಟಿದ್ದರು.</p> .ಮತ್ತೆ ರಕ್ಷಿತಾ ಜೊತೆ ಜಗಳಕ್ಕಿಳಿದ ಅಶ್ವಿನಿ ಗೌಡ, ರಾಶಿಕಾ: ಏನಿದು ಕಿಚನ್ ಕದನ?.ಪ್ರಧಾನಮಂತ್ರಿ ಮುದ್ರಾ ಯೋಜನೆ: ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>