<p><strong>ದುಬೈ:</strong> ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಹಾಯ ಮಾಡಲು ಜೆಡ್ಡಾದಲ್ಲಿರುವ ಭಾರತ ಕಾನ್ಸುಲೇಟ್ ಜನರಲ್ ಮದೀನಾದಲ್ಲಿ ತಾತ್ಕಾಲಿಕ ಕಚೇರಿ ಸ್ಥಾಪಿಸಿದೆ ಎಂದು ದೂತವಾಸ ಕಚೇರಿ ಮಂಗಳವಾರ ತಿಳಿಸಿದೆ.</p>.ಸೌದಿಯಲ್ಲಿ ಬಸ್ ಅಪಘಾತ; ಬೀದರ್ ಮಹಿಳೆ ಸಾವು.<p>ಸೋಮವಾರ ಮದೀನಾ ಸಮೀಪ ಬಸ್ ಹಾಗೂ ಇಂಧನ ಟ್ಯಾಂಕರ್ ನಡುವೆ ನಡೆದ ಅಪಘಾತದಲ್ಲಿ ತೆಲಂಗಾಣದ 42 ಸೇರಿದಂತೆ 44 ಮಂದಿ ಉಮ್ರಾ ಯಾತ್ರಿಕರು ಮೃತಪಟ್ಟಿದ್ದರು.</p><p>ಅಪಘಾತದಲ್ಲಿ ಬದುಕುಳಿದವರಲ್ಲಿ ಭಾರತದ ಓರ್ವ ಮಾತ್ರ ಇದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.</p><p>ಮದೀನಾದಲ್ಲಿರುವ ಭಾರತದ ಹಜ್ ಯಾತ್ರಿಕರ ಕಚೇರಿಯಲ್ಲಿ ಈ ತಾತ್ಕಾಲಿಕ ಕಚೇರಿ ತೆರೆಯಲಾಗಿದೆ ಎಂದು ಕಾನ್ಸುಲೇಟ್ ಜನರಲ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.</p>.ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತ: ಹುಬ್ಬಳ್ಳಿ ವ್ಯಕ್ತಿ ಮೃತ.<p>ಅಪಘಾತದಲ್ಲಿ ಬದುಕುಳಿದು ಮದೀನಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶೋಯಬ್ ಮೊಹಮ್ಮದ್ ಅವರನ್ನು ಕಾನ್ಸಲ್ ಜನರಲ್ ಫಹದ್ ಅಹ್ಮದ್ ಖಾನ್ ಸೂರಿ ಭೇಟಿಯಾಗಿದ್ದಾರೆ ಎಂದು ದೂತವಾಸ ಕಚೇರಿ ಮತ್ತೊಂದು ಪೋಸ್ಟ್ನಲ್ಲಿ ತಿಳಿಸಿದೆ.</p><p>‘ಗಾಯಾಳುವಿಗೆ ಲಭ್ಯ ಇರುವ ಎಲ್ಲಾ ಉತ್ತಮ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಅವರು ಶೀಘ್ರ ಗುಣಮುಖರಾಗಲು ಕಾನ್ಸುಲೇಟ್ ಆಶಿಸುತ್ತದೆ’ ಎಂದು ಅದು ಹೇಳಿದೆ.</p> .ಸೌದಿ ಬಸ್ ಅಪಘಾತ: ಒಂದೇ ಕುಟುಂಬದ ಮೂರು ತಲೆಮಾರಿನ 18 ಜನರು ಸಜೀವ ದಹನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಹಾಯ ಮಾಡಲು ಜೆಡ್ಡಾದಲ್ಲಿರುವ ಭಾರತ ಕಾನ್ಸುಲೇಟ್ ಜನರಲ್ ಮದೀನಾದಲ್ಲಿ ತಾತ್ಕಾಲಿಕ ಕಚೇರಿ ಸ್ಥಾಪಿಸಿದೆ ಎಂದು ದೂತವಾಸ ಕಚೇರಿ ಮಂಗಳವಾರ ತಿಳಿಸಿದೆ.</p>.ಸೌದಿಯಲ್ಲಿ ಬಸ್ ಅಪಘಾತ; ಬೀದರ್ ಮಹಿಳೆ ಸಾವು.<p>ಸೋಮವಾರ ಮದೀನಾ ಸಮೀಪ ಬಸ್ ಹಾಗೂ ಇಂಧನ ಟ್ಯಾಂಕರ್ ನಡುವೆ ನಡೆದ ಅಪಘಾತದಲ್ಲಿ ತೆಲಂಗಾಣದ 42 ಸೇರಿದಂತೆ 44 ಮಂದಿ ಉಮ್ರಾ ಯಾತ್ರಿಕರು ಮೃತಪಟ್ಟಿದ್ದರು.</p><p>ಅಪಘಾತದಲ್ಲಿ ಬದುಕುಳಿದವರಲ್ಲಿ ಭಾರತದ ಓರ್ವ ಮಾತ್ರ ಇದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.</p><p>ಮದೀನಾದಲ್ಲಿರುವ ಭಾರತದ ಹಜ್ ಯಾತ್ರಿಕರ ಕಚೇರಿಯಲ್ಲಿ ಈ ತಾತ್ಕಾಲಿಕ ಕಚೇರಿ ತೆರೆಯಲಾಗಿದೆ ಎಂದು ಕಾನ್ಸುಲೇಟ್ ಜನರಲ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.</p>.ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತ: ಹುಬ್ಬಳ್ಳಿ ವ್ಯಕ್ತಿ ಮೃತ.<p>ಅಪಘಾತದಲ್ಲಿ ಬದುಕುಳಿದು ಮದೀನಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶೋಯಬ್ ಮೊಹಮ್ಮದ್ ಅವರನ್ನು ಕಾನ್ಸಲ್ ಜನರಲ್ ಫಹದ್ ಅಹ್ಮದ್ ಖಾನ್ ಸೂರಿ ಭೇಟಿಯಾಗಿದ್ದಾರೆ ಎಂದು ದೂತವಾಸ ಕಚೇರಿ ಮತ್ತೊಂದು ಪೋಸ್ಟ್ನಲ್ಲಿ ತಿಳಿಸಿದೆ.</p><p>‘ಗಾಯಾಳುವಿಗೆ ಲಭ್ಯ ಇರುವ ಎಲ್ಲಾ ಉತ್ತಮ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಅವರು ಶೀಘ್ರ ಗುಣಮುಖರಾಗಲು ಕಾನ್ಸುಲೇಟ್ ಆಶಿಸುತ್ತದೆ’ ಎಂದು ಅದು ಹೇಳಿದೆ.</p> .ಸೌದಿ ಬಸ್ ಅಪಘಾತ: ಒಂದೇ ಕುಟುಂಬದ ಮೂರು ತಲೆಮಾರಿನ 18 ಜನರು ಸಜೀವ ದಹನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>