<p><strong>ಕೋಲ್ಕತ್ತ:</strong> ತೃಣಮೂಲ ಕಾಂಗ್ರೆಸ್ನ(ಟಿಎಂಸಿ) 20 ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದರೆ, ಅವರು ಪಕ್ಷಾಂತರ ಮಾಡಲು ಸಿದ್ಧರಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಸೌಮಿತ್ರ ಖಾನ್ ಹೇಳಿದ್ದಾರೆ. </p><p>ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲಿ 29 ಸಂಸದರು ಟಿಎಂಸಿ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಬಿಜೆಪಿಯ 12, ಕಾಂಗ್ರೆಸ್ನ ಒಬ್ಬ ಸಂಸದರಿದ್ದಾರೆ. </p><p>ಟಿಎಂಸಿಯ ಬಹುತೇಕ ಸಂಸದರು ನಮ್ಮ ಪಕ್ಷದ ಕಡೆಗೆ ಒಲವು ಹೊಂದಿದ್ದಾರೆ. ಬಿಜೆಪಿ ಬಯಸಿದರೆ, ಸಂಪೂರ್ಣ ಟಿಎಂಸಿಯು ಕೆಲವೇ ದಿನಗಳಲ್ಲಿ ಇಲ್ಲವಾಗಲಿದೆ ಎಂದು ಸಂಸದರಾಗಿರುವ ಸೌಮಿತ್ರ ಖಾನ್ ಹೇಳಿದ್ದಾರೆ. </p><p>ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹತೆಯನ್ನು ತಪ್ಪಿಸಲು ಸಂಸದೀಯ ಪಕ್ಷದ ಕನಿಷ್ಠ ಮೂರನೇ ಎರಡರಷ್ಟು ಸದಸ್ಯರು ಒಟ್ಟಿಗೆ ಪಕ್ಷ ಬದಲಾಯಿಸಬೇಕಾಗುತ್ತದೆ. ಟಿಎಂಸಿಯ ಪ್ರಕರಣದಲ್ಲಿ ಅವರ 29 ಸದಸ್ಯರಲ್ಲಿ 19ರಿಂದ 20 ಸಂಸದರು ಪಕ್ಷ ಬದಲಾಯಿಸುವುದರಿಂದ ಯಾವುದೇ ತೊಂದರೆಯಿಲ್ಲ ಎಂದು ಹೇಳಿದ್ದಾರೆ. </p><p>ಈ ಕುರಿತು ಮಾತನಾಡಿರುವ ಟಿಎಂಸಿ ಸಂಸದ ಸೌಗತ ರಾಯ್, ಇದೊಂದು ಆಧಾರರಹಿತ ಆರೋಪ. ವರದಿಗಾರರಿಗೆ ಅವರು ಸುಳ್ಳು ಹೇಳಿದ್ದು, ಈ ರೀತಿಯಾಗಿ ಯಾವುದೇ ಘಟನೆಗಳು ಸಂಭವಿಸುವುದಿಲ್ಲ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ತೃಣಮೂಲ ಕಾಂಗ್ರೆಸ್ನ(ಟಿಎಂಸಿ) 20 ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದರೆ, ಅವರು ಪಕ್ಷಾಂತರ ಮಾಡಲು ಸಿದ್ಧರಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಸೌಮಿತ್ರ ಖಾನ್ ಹೇಳಿದ್ದಾರೆ. </p><p>ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲಿ 29 ಸಂಸದರು ಟಿಎಂಸಿ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಬಿಜೆಪಿಯ 12, ಕಾಂಗ್ರೆಸ್ನ ಒಬ್ಬ ಸಂಸದರಿದ್ದಾರೆ. </p><p>ಟಿಎಂಸಿಯ ಬಹುತೇಕ ಸಂಸದರು ನಮ್ಮ ಪಕ್ಷದ ಕಡೆಗೆ ಒಲವು ಹೊಂದಿದ್ದಾರೆ. ಬಿಜೆಪಿ ಬಯಸಿದರೆ, ಸಂಪೂರ್ಣ ಟಿಎಂಸಿಯು ಕೆಲವೇ ದಿನಗಳಲ್ಲಿ ಇಲ್ಲವಾಗಲಿದೆ ಎಂದು ಸಂಸದರಾಗಿರುವ ಸೌಮಿತ್ರ ಖಾನ್ ಹೇಳಿದ್ದಾರೆ. </p><p>ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹತೆಯನ್ನು ತಪ್ಪಿಸಲು ಸಂಸದೀಯ ಪಕ್ಷದ ಕನಿಷ್ಠ ಮೂರನೇ ಎರಡರಷ್ಟು ಸದಸ್ಯರು ಒಟ್ಟಿಗೆ ಪಕ್ಷ ಬದಲಾಯಿಸಬೇಕಾಗುತ್ತದೆ. ಟಿಎಂಸಿಯ ಪ್ರಕರಣದಲ್ಲಿ ಅವರ 29 ಸದಸ್ಯರಲ್ಲಿ 19ರಿಂದ 20 ಸಂಸದರು ಪಕ್ಷ ಬದಲಾಯಿಸುವುದರಿಂದ ಯಾವುದೇ ತೊಂದರೆಯಿಲ್ಲ ಎಂದು ಹೇಳಿದ್ದಾರೆ. </p><p>ಈ ಕುರಿತು ಮಾತನಾಡಿರುವ ಟಿಎಂಸಿ ಸಂಸದ ಸೌಗತ ರಾಯ್, ಇದೊಂದು ಆಧಾರರಹಿತ ಆರೋಪ. ವರದಿಗಾರರಿಗೆ ಅವರು ಸುಳ್ಳು ಹೇಳಿದ್ದು, ಈ ರೀತಿಯಾಗಿ ಯಾವುದೇ ಘಟನೆಗಳು ಸಂಭವಿಸುವುದಿಲ್ಲ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>