<p><strong>ಮುಂಬೈ/ ನವದೆಹಲಿ</strong>: ‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸಮ್ಮತಿ ಪಡೆಯದೇ ನ್ಯಾಯಾಲಯದಲ್ಲಿ ದಾಖಲಿಸಿದ್ದ ಹೇಳಿಕೆಯನ್ನು ಹಿಂಪಡೆಯುವುದಾಗಿ’ ರಾಹುಲ್ ಪರ ವಕೀಲ ಮಿಲಿಂದ ಪವಾರ್ ಬುಧವಾರ ಸುದ್ದಿಗಾರರಿಗೆ ತಿಳಿಸಿದರು. </p>.<p>ವಿ.ಡಿ.ಸಾವರ್ಕರ್ ವಿರುದ್ಧ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾನನಷ್ಟ ಮೊಕದ್ದಮೆ ಎದುರಿಸುತ್ತಿದ್ದಾರೆ. ಸಾರ್ವಕರ್ ಅವರ ಮೊಮ್ಮಗ ಸತ್ಯಕಿ ಸಾರ್ವಕರ್ ಈ ಮೊಕದ್ದಮೆ ಹೂಡಿದ್ದಾರೆ. </p>.<p>‘ವಿ.ಡಿ. ಸಾವರ್ಕರ್ ಮತ್ತು ನಾಥೂರಾಂ ಗೋಡ್ಸೆ ಅನುಯಾಯಿಗಳಿಂದ ರಾಹುಲ್ ಅವರ ಜೀವಕ್ಕೆ ಅಪಾಯವಿದೆ ಎಂದು ಅವರ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ. ಅದಕ್ಕೆ ತಮ್ಮ ಸಮ್ಮತಿ ಇಲ್ಲದ ಕಾರಣ ರಾಹುಲ್ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಹೀಗಾಗಿ ವಕೀಲರು ಈ ಹೇಳಿಕೆಯನ್ನು ಹಿಂಪಡೆಯುವುದಾಗಿ’ ತಿಳಿಸಿದ್ದಾರೆ ಎಂದು ಕಾಂಗ್ರೆಸ್ ಮಾಧ್ಯಮ ವಕ್ತಾರ ಪವನ್ ಖೇರಾ ತಿಳಿಸಿದರು. </p>.<p>‘ಹೇಳಿಕೆಯನ್ನು ಹಿಂಪಡೆಯಲು ಗುರುವಾರ ಅರ್ಜಿ ಸಲ್ಲಿಸುತ್ತೇನೆ’ ಎಂದು ವಕೀಲ ಮಿಲಿಂದ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ/ ನವದೆಹಲಿ</strong>: ‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸಮ್ಮತಿ ಪಡೆಯದೇ ನ್ಯಾಯಾಲಯದಲ್ಲಿ ದಾಖಲಿಸಿದ್ದ ಹೇಳಿಕೆಯನ್ನು ಹಿಂಪಡೆಯುವುದಾಗಿ’ ರಾಹುಲ್ ಪರ ವಕೀಲ ಮಿಲಿಂದ ಪವಾರ್ ಬುಧವಾರ ಸುದ್ದಿಗಾರರಿಗೆ ತಿಳಿಸಿದರು. </p>.<p>ವಿ.ಡಿ.ಸಾವರ್ಕರ್ ವಿರುದ್ಧ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾನನಷ್ಟ ಮೊಕದ್ದಮೆ ಎದುರಿಸುತ್ತಿದ್ದಾರೆ. ಸಾರ್ವಕರ್ ಅವರ ಮೊಮ್ಮಗ ಸತ್ಯಕಿ ಸಾರ್ವಕರ್ ಈ ಮೊಕದ್ದಮೆ ಹೂಡಿದ್ದಾರೆ. </p>.<p>‘ವಿ.ಡಿ. ಸಾವರ್ಕರ್ ಮತ್ತು ನಾಥೂರಾಂ ಗೋಡ್ಸೆ ಅನುಯಾಯಿಗಳಿಂದ ರಾಹುಲ್ ಅವರ ಜೀವಕ್ಕೆ ಅಪಾಯವಿದೆ ಎಂದು ಅವರ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ. ಅದಕ್ಕೆ ತಮ್ಮ ಸಮ್ಮತಿ ಇಲ್ಲದ ಕಾರಣ ರಾಹುಲ್ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಹೀಗಾಗಿ ವಕೀಲರು ಈ ಹೇಳಿಕೆಯನ್ನು ಹಿಂಪಡೆಯುವುದಾಗಿ’ ತಿಳಿಸಿದ್ದಾರೆ ಎಂದು ಕಾಂಗ್ರೆಸ್ ಮಾಧ್ಯಮ ವಕ್ತಾರ ಪವನ್ ಖೇರಾ ತಿಳಿಸಿದರು. </p>.<p>‘ಹೇಳಿಕೆಯನ್ನು ಹಿಂಪಡೆಯಲು ಗುರುವಾರ ಅರ್ಜಿ ಸಲ್ಲಿಸುತ್ತೇನೆ’ ಎಂದು ವಕೀಲ ಮಿಲಿಂದ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>