<p><strong>ಮುಂಬೈ:</strong> ವಿ.ಡಿ. ಸಾವರ್ಕರ್ ರಚಿಸಿದ ‘ಆಂದಿ ಮೇ, ಅನಂತ್ ಮೇ’ ದೇಶಭಕ್ತಿಗೆ ಗೀತೆಗೆ ಮಹಾರಾಷ್ಟ್ರ ಸರ್ಕಾರ ಇದೇ ಮೊದಲ ಬಾರಿಗೆ ನೀಡುತ್ತಿರುವ ಛತ್ರಪತಿ ಸಾಂಭಾಜಿ ಮಹಾರಾಜ್ ರಾಜ್ಯ ಪ್ರೇರಣಾ ಗೀತೆ ಪುರಸ್ಕಾರ ಲಭಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಪ್ರದಾನ ಮಾಡಿದ್ದಾರೆ.</p><p>ಮಹಾರಾಷ್ಟ್ರ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ‘ವರ್ಷಾ’ದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸ್ವಾತಂತ್ರ್ಯವೀರ ಸಾವರ್ಕರ್ ಪ್ರತಿಷ್ಠಾನದ ಪರವಾಗಿ ಸಾವರ್ಕರ್ ಅವರ ಮರಿಮೊಮ್ಮಗ ರಂಜಿತ್ ಸಾವರ್ಕರ್ ಅವರು ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿಯು ₹2 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.</p><p>ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ಉಪಮುಖ್ಯಮಂತ್ರಿ ಏಕನಾಥ ಶಿಂದೆ ಇದ್ದರು. ಸಾವರ್ಕರ್ ಸ್ಮರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನದ ನಂತರ ಅಮಿತ್ ಶಾ ಮಾತನಾಡಬೇಕಿತ್ತು. ಆದರೆ ಅವರು ಮಾತನಾಡದೆ ತಕ್ಷಣ ದೆಹಲಿಗೆ ದೌಡಾಯಿಸಿದರು.</p><p>ವೀರ ಯೋಧ ಹಾಗೂ ಕವಿಯೂ ಆಗಿದ್ದ ಛತ್ರಪತಿ ಸಾಂಭಾಜಿ ಮಹಾರಾಜ್ ಅವರ ನೆನಪಿನಲ್ಲಿ ದೇಶಭಕ್ತಿಯ ಭಾವನೆ ಜನರಲ್ಲಿ ಮೂಡಿಸುವ ಕವಿತೆಗೆ ರಾಜ್ಯ ಸಂಸ್ಕೃತಿ ಸಚಿವಾಲಯ ಪ್ರಶಸ್ತಿ ನೀಡಲು ನಿರ್ಧರಿಸಿತ್ತು.</p><p>ಈ ಕುರಿತು ಮಾತನಾಡಿ ಸಂಸ್ಕೃತಿ ಸಚಿವ ಆಶೀಷ್ ಶೆಲಾರ್, ‘ಛತ್ರಪತಿ ಸಾಂಭಾಜಿ ಮಹಾರಾಜರು ಹಲವರಿಗೆ ಸ್ಫೂರ್ತಿಯಾಗಿದ್ದಾರೆ. ಅವರೊಬ್ಬ ಮಹಾನ್ ಚಿಂತಕ ಹಾಗೂ ಕವಿಯೂ ಆಗಿದ್ದರು. ಹೀಗಾಗಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿತು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ವಿ.ಡಿ. ಸಾವರ್ಕರ್ ರಚಿಸಿದ ‘ಆಂದಿ ಮೇ, ಅನಂತ್ ಮೇ’ ದೇಶಭಕ್ತಿಗೆ ಗೀತೆಗೆ ಮಹಾರಾಷ್ಟ್ರ ಸರ್ಕಾರ ಇದೇ ಮೊದಲ ಬಾರಿಗೆ ನೀಡುತ್ತಿರುವ ಛತ್ರಪತಿ ಸಾಂಭಾಜಿ ಮಹಾರಾಜ್ ರಾಜ್ಯ ಪ್ರೇರಣಾ ಗೀತೆ ಪುರಸ್ಕಾರ ಲಭಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಪ್ರದಾನ ಮಾಡಿದ್ದಾರೆ.</p><p>ಮಹಾರಾಷ್ಟ್ರ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ‘ವರ್ಷಾ’ದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸ್ವಾತಂತ್ರ್ಯವೀರ ಸಾವರ್ಕರ್ ಪ್ರತಿಷ್ಠಾನದ ಪರವಾಗಿ ಸಾವರ್ಕರ್ ಅವರ ಮರಿಮೊಮ್ಮಗ ರಂಜಿತ್ ಸಾವರ್ಕರ್ ಅವರು ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿಯು ₹2 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.</p><p>ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ಉಪಮುಖ್ಯಮಂತ್ರಿ ಏಕನಾಥ ಶಿಂದೆ ಇದ್ದರು. ಸಾವರ್ಕರ್ ಸ್ಮರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನದ ನಂತರ ಅಮಿತ್ ಶಾ ಮಾತನಾಡಬೇಕಿತ್ತು. ಆದರೆ ಅವರು ಮಾತನಾಡದೆ ತಕ್ಷಣ ದೆಹಲಿಗೆ ದೌಡಾಯಿಸಿದರು.</p><p>ವೀರ ಯೋಧ ಹಾಗೂ ಕವಿಯೂ ಆಗಿದ್ದ ಛತ್ರಪತಿ ಸಾಂಭಾಜಿ ಮಹಾರಾಜ್ ಅವರ ನೆನಪಿನಲ್ಲಿ ದೇಶಭಕ್ತಿಯ ಭಾವನೆ ಜನರಲ್ಲಿ ಮೂಡಿಸುವ ಕವಿತೆಗೆ ರಾಜ್ಯ ಸಂಸ್ಕೃತಿ ಸಚಿವಾಲಯ ಪ್ರಶಸ್ತಿ ನೀಡಲು ನಿರ್ಧರಿಸಿತ್ತು.</p><p>ಈ ಕುರಿತು ಮಾತನಾಡಿ ಸಂಸ್ಕೃತಿ ಸಚಿವ ಆಶೀಷ್ ಶೆಲಾರ್, ‘ಛತ್ರಪತಿ ಸಾಂಭಾಜಿ ಮಹಾರಾಜರು ಹಲವರಿಗೆ ಸ್ಫೂರ್ತಿಯಾಗಿದ್ದಾರೆ. ಅವರೊಬ್ಬ ಮಹಾನ್ ಚಿಂತಕ ಹಾಗೂ ಕವಿಯೂ ಆಗಿದ್ದರು. ಹೀಗಾಗಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿತು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>