<p><strong>ನವದೆಹಲಿ:</strong> ಡಿಸೆಂಬರ್ 13ರಿಂದ ಮೇಘಾಲಯದ ಕಲ್ಲಿದ್ದಲು ಗಣಿಯೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿರುವ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.</p>.<p>ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿ ಎಸ್.ಕೆ. ಕೌಲ್ ನೇತೃತ್ವದ ಪೀಠದ ಎದುರು ಗುರುವಾರ ಅರ್ಜಿ ವಿಚಾರಣೆಗೆ ಬರಲಿದೆ.</p>.<p>ನಿರ್ದಿಷ್ಟ ಮಾನದಂಡದ ಅನುಸಾರ ಕಾರ್ಯಾಚರಣೆ ನಡೆಸುವಂತೆ ಕಾರ್ಯಾಚರಣೆ ನಿರತ ತಂಡಗಳು ಹಾಗೂ ಸರ್ಕಾರಕ್ಕೆ ಸೂಚಿಸಬೇಕು ಎಂದು ಅರ್ಜಿದಾರ ಆದಿತ್ಯ ಎನ್.ಪ್ರಸಾದ್ ಅವರು ಆಗ್ರಹಿಸಿದ್ದಾರೆ.</p>.<p>ಗಣಿ ಕಾರ್ಮಿಗರು ಮೃತಪಟ್ಟಿರುವ ವಾಸನೆ ಬರುತ್ತಿದೆ ಎಂಬುದಾಗಿ ಮಾಧ್ಯಮಗಳು ಮಾಡಿರುವ ವರದಿಯನ್ನು ಎನ್ಡಿಆರ್ಎಫ್ ಅಲ್ಲಗಳೆದಿದೆ. ನೀರು ನಿಂತಿರುವ ಕಾರಣ ವಾಸನೆ ಬಂದಿರಬಹುದು ಎಂದು ಅಭಿಪ್ರಾಯಪಟ್ಟಿದೆ.</p>.<p>ಗಣಿಯಿಂದ ಹೊರಬರಲು ನೌಕರರಿಗೆ ಯಾವುದೇ ದಾರಿಗಳು ಇಲ್ಲ ಎಂದು ಗಣಿ ಕಾರ್ಮಿಕನೊಬ್ಬ ತಿಳಿಸಿದ್ದಾನೆ.</p>.<p>ತಮ್ಮವರನ್ನು ಜೀವಂತವಾಗಿ ಕರೆತನ್ನಿ ಅಥವಾ ಕಡೇಪಕ್ಷ ಮೃತದೇಹಗಳನ್ನಾದರೂ ತೆಗೆಯಿರಿ ಎಂದು ಕಾರ್ಮಿಕರ ಕುಟುಂಬದವರು ಸರ್ಕಾರಕ್ಕೆ ಕೇಳಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಡಿಸೆಂಬರ್ 13ರಿಂದ ಮೇಘಾಲಯದ ಕಲ್ಲಿದ್ದಲು ಗಣಿಯೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿರುವ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.</p>.<p>ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿ ಎಸ್.ಕೆ. ಕೌಲ್ ನೇತೃತ್ವದ ಪೀಠದ ಎದುರು ಗುರುವಾರ ಅರ್ಜಿ ವಿಚಾರಣೆಗೆ ಬರಲಿದೆ.</p>.<p>ನಿರ್ದಿಷ್ಟ ಮಾನದಂಡದ ಅನುಸಾರ ಕಾರ್ಯಾಚರಣೆ ನಡೆಸುವಂತೆ ಕಾರ್ಯಾಚರಣೆ ನಿರತ ತಂಡಗಳು ಹಾಗೂ ಸರ್ಕಾರಕ್ಕೆ ಸೂಚಿಸಬೇಕು ಎಂದು ಅರ್ಜಿದಾರ ಆದಿತ್ಯ ಎನ್.ಪ್ರಸಾದ್ ಅವರು ಆಗ್ರಹಿಸಿದ್ದಾರೆ.</p>.<p>ಗಣಿ ಕಾರ್ಮಿಗರು ಮೃತಪಟ್ಟಿರುವ ವಾಸನೆ ಬರುತ್ತಿದೆ ಎಂಬುದಾಗಿ ಮಾಧ್ಯಮಗಳು ಮಾಡಿರುವ ವರದಿಯನ್ನು ಎನ್ಡಿಆರ್ಎಫ್ ಅಲ್ಲಗಳೆದಿದೆ. ನೀರು ನಿಂತಿರುವ ಕಾರಣ ವಾಸನೆ ಬಂದಿರಬಹುದು ಎಂದು ಅಭಿಪ್ರಾಯಪಟ್ಟಿದೆ.</p>.<p>ಗಣಿಯಿಂದ ಹೊರಬರಲು ನೌಕರರಿಗೆ ಯಾವುದೇ ದಾರಿಗಳು ಇಲ್ಲ ಎಂದು ಗಣಿ ಕಾರ್ಮಿಕನೊಬ್ಬ ತಿಳಿಸಿದ್ದಾನೆ.</p>.<p>ತಮ್ಮವರನ್ನು ಜೀವಂತವಾಗಿ ಕರೆತನ್ನಿ ಅಥವಾ ಕಡೇಪಕ್ಷ ಮೃತದೇಹಗಳನ್ನಾದರೂ ತೆಗೆಯಿರಿ ಎಂದು ಕಾರ್ಮಿಕರ ಕುಟುಂಬದವರು ಸರ್ಕಾರಕ್ಕೆ ಕೇಳಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>