ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಆರು ಜಿಲ್ಲೆಗಳಲ್ಲಿ ಬಹಿರಂಗವಾಗಿ ಪಥಸಂಚಲನ ನಡೆಸಲು ರಾಜ್ಯಸರ್ಕಾರ ಆರ್ಎಸ್ಎಸ್ಗೆ ಅನುಮತಿಯನ್ನು ನಿರಾಕರಿಸಿತ್ತು. ಆದರೆ ಮೈದಾನಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅನುಮತಿ ನೀಡಿತ್ತು. ಇದನ್ನು ಏಕ ಸದಸ್ಯಪೀಠ ಸಹ ಎತ್ತಿಹಿಡಿದಿತ್ತು. ಆದರೆ, ಫೆ.10ರಂದು ಈ ಕುರಿತು ತೀರ್ಪು ನೀಡಿದ್ದ ಹೈಕೋರ್ಟ್ನ ವಿಭಾಗೀಯ ಪೀಠ, ಆರೂ ಜಿಲ್ಲೆಗಳಲ್ಲಿ ರಸ್ತೆಗಳಲ್ಲಿ ಪಥಸಂಚಲನ ನಡೆಸಲು ಆರ್ಎಸ್ಎಸ್ಗೆ ಅನುಮತಿ ನೀಡಿತ್ತು ಎಂದು ಮುಕುಲ್ ಅವರು ಪೀಠಕ್ಕೆ ತಿಳಿಸಿದರು.