ಅರ್ಜಿದಾರರ ಪರ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ, ‘ಇದೊಂದು ಗಂಭೀರ ಪ್ರಕರಣವಾಗಿದೆ. ವಿಧಾನಸಭಾ ಚುನಾವಣೆಯ ಮತ ಎಣಿಕೆಯ ದಿನದಂದೇ ಬಿಜೆಪಿಯ ಇಬ್ಬರು ಕಾರ್ಯಕರ್ತರನ್ನು ಭೀಕರವಾಗಿ ಹತ್ಯೆ ಮಾಡಲಾಗಿದ್ದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ರಾಜ್ಯ ಸರ್ಕಾರದ ನಿಷ್ಕ್ರಿಯತೆಗೆ ಸಾಕ್ಷಿ. ಹಿಂಸಾಚಾರ ನಡೆಯುತ್ತಿದ್ದರೂ ಪೊಲೀಸರು ಜಡವಾಗಿ ನಿಂತಿದ್ದರು’ ಎಂದು ವಾದಿಸಿದರು.