ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು, ‘ಸುಪ್ರೀಂ ಕೋರ್ಟ್ ಈಗಾಗಲೇ ಸಿಕ್ರಿ ಅವರನ್ನು ಯೋಜನೆಗೆ ಕುರಿತಾದ ಪರಿಸರ ಸಂಬಂಧಿತ ವಿಷಯಗಳ ಗಮನಿಸುವ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರಾಗಿ ನೇಮಿಸಿದೆ. ಅವರನ್ನೇ ಉನ್ನತಾಧಿಕಾರ ಸಮಿತಿ ಅಧ್ಯಕ್ಷರಾಗಿಯೂ ನೇಮಿಸಬಹುದು’ ಎಂದು ತಿಳಿಸಿದರು. ಪೀಠ ಈ ಸಲಹೆಯನ್ನು ಒಪ್ಪಿಕೊಂಡಿತು.