ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠವು, ಆಯೋಗದಲ್ಲಿ ಮಂಜೂರಾಗಿರುವ ಹುದ್ದೆಗಳು, ಖಾಲಿ ಇರುವ ಹುದ್ದೆಗಳು ಮತ್ತು ಇತ್ಯರ್ಥವಾಗಬೇಕಿರುವ ಒಟ್ಟು ಪ್ರಕರಣಗಳು ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಎಲ್ಲ ರಾಜ್ಯಗಳಿಂದ ಪಡೆಯುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಸೂಚಿಸಿದೆ.