ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರ ನೇತೃತ್ವದ ಪೀಠವು, ನ್ಯಾಯಾಲಯದಲ್ಲಿ ಹಾಜರಿದ್ದ ಸಿಂಗ್ ಸಹೋದರರಿಗೆ ಹಣಕಾಸು ಮತ್ತು ಕಾನೂನು ಸಲಹೆಗಾರರೊಂದಿಗೆ ಚರ್ಚೆ ಮಾಡಿ, ನ್ಯಾಯಮಂಡಳಿ ಆದೇಶವನ್ನು ಹೇಗೆ ಜಾರಿ ಮಾಡುತ್ತೀರಿ ಎನ್ನುವ ನಿಖರ ಯೋಜನೆಯನ್ನು ಸಲ್ಲಿಸುವಂತೆ ಸೂಚಿಸಿತು. ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಸಂಜೀವ್ ಖನ್ನಾ ಅವರೂ ಇರುವ ಪೀಠ, ‘ಇದು ದೇಶದ ಗೌರವಕ್ಕೂ ಮತ್ತು ವೈಯಕ್ತಿಕವಾಗಿ ನಿಮಗೂ ಗೌರವದ ಸಂಗತಿಯಲ್ಲ. ನೀವು ಔಷಧ ಉದ್ಯಮ ಕ್ಷೇತ್ರದ ದಿಗ್ಗಜರು. ನಿಮ್ಮಂತಹವರು ನ್ಯಾಯಾಲಯದ ಕಟಕಟೆಯಲ್ಲಿ ಕಾಣಿಸಿಕೊಳ್ಳುವುದು ಶೋಭೆಯಲ್ಲ’ ಎಂದು ಹೇಳಿತು.