<p><strong>ನವದೆಹಲಿ: </strong>ಪ್ರವೇಶ ಪ್ರಕ್ರಿಯೆ ಸಂದರ್ಭದಲ್ಲಿ ಪ್ರಮಾದವಶಾತ್ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆಯಲ್ಲಿ ಸೀಟು ಕಳೆದುಕೊಂಡಿದ್ದ ವಿದ್ಯಾರ್ಥಿಯೊಬ್ಬನಿಗೆ ಈಗ ಸುಪ್ರೀಂ ಕೋರ್ಟ್ ನೆರವಿಗೆ ಬಂದಿದೆ.</p>.<p>ಈ ವಿದ್ಯಾರ್ಥಿಗೆ ತಾತ್ಕಾಲಿಕ ಪ್ರವೇಶ ಕಲ್ಪಿಸಬೇಕು ಎಂದು ನ್ಯಾಯಾಲಯವು ಐಐಟಿ ಬಾಂಬೆಗೆ ಸೂಚಿಸಿದೆ.</p>.<p>ಐಐಟಿ ಬಾಂಬೆಯಲ್ಲಿ ನಾಲ್ಕು ವರ್ಷದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಸೀಟು ಪಡೆಯುವ ಕನಸು ಹೊಂದಿದ್ದ ಆಗ್ರಾ ಮೂಲದ ಸಿದ್ಧಾಂತ್ ಬಾತ್ರಾ, ಪ್ರವೇಶ ಪಡೆಯುವ ಸಂದರ್ಭದಲ್ಲಿ ತಪ್ಪಾದ ಲಿಂಕ್ ಒತ್ತಿದ್ದರು. ಸೀಟು ರದ್ದುಪಡಿಸುವ ಲಿಂಕ್ ಇದಾಗಿತ್ತು. ಇದರಿಂದಾಗಿ, ಸಿದ್ಧಾಂತ ಸೀಟು ಕಳೆದುಕೊಂಡಿದ್ದರು.</p>.<p>ತಪ್ಪು ಅರಿವಿಗೆ ಬಂದ ಬಳಿಕ, ಬಾಂಬೆ ಹೈಕೋರ್ಟ್ನಲ್ಲಿ ಸಿದ್ಧಾಂತ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಪ್ರವೇಶ ಪ್ರಕ್ರಿಯೆ ನಿಯಮಾವಳಿಗಳನ್ನು ಪಾಲಿಸಬೇಕು ಮತ್ತು ಈಗಾಗಲೇ ಎಲ್ಲ ಸೀಟುಗಳು ಭರ್ತಿಯಾಗಿರುವುದರಿಂದ ಈ ಹಂತದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಐಐಟಿ ಬಾಂಬೆ ಸಲ್ಲಿಸಿದ್ದ ಉತ್ತರವನ್ನು ಪರಿಗಣಿಸಿ ಹೈಕೋರ್ಟ್ ಈ ಆದೇಶ ನೀಡಿತ್ತು.</p>.<p>ಈ ಆದೇಶ ಪ್ರಶ್ನಿಸಿ ಸಿದ್ಧಾಂತ್ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಸ್.ಕೆ. ಕೌಲ್ ನೇತೃತ್ವದ ಪೀಠವು ಈ ಅರ್ಜಿಯನ್ನು ಪರಿಗಣಿಸಿ ತಾತ್ಕಾಲಿಕ ಪ್ರವೇಶ ನೀಡುವಂತೆ ಐಐಟಿ ಬಾಂಬೆಗೆ ಸೂಚಿಸಿದೆ. ಜತೆಗೆ, ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆಯೂ ತಿಳಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಚಳಿಗಾಲದ ರಜೆ ಬಳಿಕ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.</p>.<p>ನ್ಯಾಯಾಲಯ ನೀಡುವ ಅಂತಿಮ ಆದೇಶ ಮೇಲೆ ಪ್ರವೇಶ ಪ್ರಕ್ರಿಯೆ ಅವಲಂಬಿತವಾಗಿದೆ ಎಂದು ನ್ಯಾಯಾಲಯ ತಿಳಿಸಿದೆ ಎಂದು ಸಿದ್ಧಾಂತ್ ಪರ ವಕೀಲ ಪ್ರಹ್ಲಾದ್ ಪರಾಂಜಪೆ ತಿಳಿಸಿದ್ದಾರೆ.</p>.<p>ಸಿದ್ಧಾಂತ್ ಬತ್ರಾ, ಜೆಇಇ ಅಡ್ವಾನ್ಸ್ಡ್ನಲ್ಲಿ 270ನೇ ರ್ಯಾಂಕ್ ಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪ್ರವೇಶ ಪ್ರಕ್ರಿಯೆ ಸಂದರ್ಭದಲ್ಲಿ ಪ್ರಮಾದವಶಾತ್ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆಯಲ್ಲಿ ಸೀಟು ಕಳೆದುಕೊಂಡಿದ್ದ ವಿದ್ಯಾರ್ಥಿಯೊಬ್ಬನಿಗೆ ಈಗ ಸುಪ್ರೀಂ ಕೋರ್ಟ್ ನೆರವಿಗೆ ಬಂದಿದೆ.</p>.<p>ಈ ವಿದ್ಯಾರ್ಥಿಗೆ ತಾತ್ಕಾಲಿಕ ಪ್ರವೇಶ ಕಲ್ಪಿಸಬೇಕು ಎಂದು ನ್ಯಾಯಾಲಯವು ಐಐಟಿ ಬಾಂಬೆಗೆ ಸೂಚಿಸಿದೆ.</p>.<p>ಐಐಟಿ ಬಾಂಬೆಯಲ್ಲಿ ನಾಲ್ಕು ವರ್ಷದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಸೀಟು ಪಡೆಯುವ ಕನಸು ಹೊಂದಿದ್ದ ಆಗ್ರಾ ಮೂಲದ ಸಿದ್ಧಾಂತ್ ಬಾತ್ರಾ, ಪ್ರವೇಶ ಪಡೆಯುವ ಸಂದರ್ಭದಲ್ಲಿ ತಪ್ಪಾದ ಲಿಂಕ್ ಒತ್ತಿದ್ದರು. ಸೀಟು ರದ್ದುಪಡಿಸುವ ಲಿಂಕ್ ಇದಾಗಿತ್ತು. ಇದರಿಂದಾಗಿ, ಸಿದ್ಧಾಂತ ಸೀಟು ಕಳೆದುಕೊಂಡಿದ್ದರು.</p>.<p>ತಪ್ಪು ಅರಿವಿಗೆ ಬಂದ ಬಳಿಕ, ಬಾಂಬೆ ಹೈಕೋರ್ಟ್ನಲ್ಲಿ ಸಿದ್ಧಾಂತ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಪ್ರವೇಶ ಪ್ರಕ್ರಿಯೆ ನಿಯಮಾವಳಿಗಳನ್ನು ಪಾಲಿಸಬೇಕು ಮತ್ತು ಈಗಾಗಲೇ ಎಲ್ಲ ಸೀಟುಗಳು ಭರ್ತಿಯಾಗಿರುವುದರಿಂದ ಈ ಹಂತದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಐಐಟಿ ಬಾಂಬೆ ಸಲ್ಲಿಸಿದ್ದ ಉತ್ತರವನ್ನು ಪರಿಗಣಿಸಿ ಹೈಕೋರ್ಟ್ ಈ ಆದೇಶ ನೀಡಿತ್ತು.</p>.<p>ಈ ಆದೇಶ ಪ್ರಶ್ನಿಸಿ ಸಿದ್ಧಾಂತ್ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಸ್.ಕೆ. ಕೌಲ್ ನೇತೃತ್ವದ ಪೀಠವು ಈ ಅರ್ಜಿಯನ್ನು ಪರಿಗಣಿಸಿ ತಾತ್ಕಾಲಿಕ ಪ್ರವೇಶ ನೀಡುವಂತೆ ಐಐಟಿ ಬಾಂಬೆಗೆ ಸೂಚಿಸಿದೆ. ಜತೆಗೆ, ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆಯೂ ತಿಳಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಚಳಿಗಾಲದ ರಜೆ ಬಳಿಕ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.</p>.<p>ನ್ಯಾಯಾಲಯ ನೀಡುವ ಅಂತಿಮ ಆದೇಶ ಮೇಲೆ ಪ್ರವೇಶ ಪ್ರಕ್ರಿಯೆ ಅವಲಂಬಿತವಾಗಿದೆ ಎಂದು ನ್ಯಾಯಾಲಯ ತಿಳಿಸಿದೆ ಎಂದು ಸಿದ್ಧಾಂತ್ ಪರ ವಕೀಲ ಪ್ರಹ್ಲಾದ್ ಪರಾಂಜಪೆ ತಿಳಿಸಿದ್ದಾರೆ.</p>.<p>ಸಿದ್ಧಾಂತ್ ಬತ್ರಾ, ಜೆಇಇ ಅಡ್ವಾನ್ಸ್ಡ್ನಲ್ಲಿ 270ನೇ ರ್ಯಾಂಕ್ ಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>