ನವದೆಹಲಿ: ಪ್ರಕರಣವೊಂದರ ಸಂಬಂಧ ಐದು ವರ್ಷ ಸಜೆ ವಿಧಿಸಿದ್ದ ಅಲಹಾಬಾದ್ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಮಾಜಿ ಶಾಸಕ, ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ.
ಅನ್ಸಾರಿ ಸಾವಿನ ಹಿನ್ನೆಲೆಯಲ್ಲಿ ಕೋರ್ಟ್ ಈ ತೀರ್ಮಾನ ಕೈಗೊಂಡಿದೆ. 24 ವರ್ಷ ಹಳೆಯ ಪ್ರಕರಣವೊಂದರ ಸಂಬಂಧ ಹೈಕೋರ್ಟ್ ಅನ್ಸಾರಿಗೆ 5 ವರ್ಷ ಸಜೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
‘ಅರ್ಜಿದಾರರು ನಿಧನರಾಗಿದ್ದಾರೆ. ಪ್ರಕರಣ ಮುಕ್ತಾಯಗೊಳಿಸಬಹುದು’ ಎಂದು ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಮತ್ತು ಪಂಕಜ್ ಮಿತ್ತಲ್ ಅವರಿದ್ದ ಪೀಠವು ಅಭಿಪ್ರಾಯಪಟ್ಟಿತು. ಅನ್ಸಾರಿ ಮಾರ್ಚ್ 28ರಂದು ಹೃದಯಸ್ತಂಭನದಿಂದ ಮೃತಪಟ್ಟಿದ್ದರು.