<p><strong>ನವದೆಹಲಿ:</strong> ಹೈಕೋರ್ಟ್ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಹಾಗೂ ಎ.ಎಸ್.ಬೋಪಣ್ಣ ಅವರಿಗೆ ಪದೋನ್ನತಿ ನೀಡುವಂತೆ ಸುಪ್ರೀಂಕೋರ್ಟ್ನ ಕೊಲಿಜಿಯಂ ಮತ್ತೆ ಶಿಫಾರಸು ಮಾಡಿದೆ.</p>.<p>ಈ ಇಬ್ಬರು ನ್ಯಾಯಮೂರ್ತಿಗಳಿಗೆ ಪದನ್ನೋತಿ ನೀಡುವ ಸಂಬಂಧ ಕೇಂದ್ರ ಸರ್ಕಾರ ಎತ್ತಿದ್ದ ಆಕ್ಷೇಪವನ್ನು ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಕೊಲಿಜಿಯಂ ತಿರಸ್ಕರಿಸಿದ್ದು, ’ಉಭಯ ನ್ಯಾಯಮೂರ್ತಿಗಳ ಸಾಮರ್ಥ್ಯ, ನಡವಳಿಕೆ ಹಾಗೂ ಪ್ರಾಮಾಣಿಕತೆಗೆ ಕುಂದು ತರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ‘ ಎಂದು ಪ್ರತಿಪಾದಿಸಿದೆ.</p>.<p>ಪದೋನ್ನತಿ ನೀಡುವಂತೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಸೂರ್ಯಕಾಂತ ಅವರ ಹೆಸರನ್ನೂ ಶಿಫಾರಸು ಮಾಡಿರುವ ಕೊಲಿಜಿಯಂ,ಈ ಸಂಬಂಧ ತನ್ನ ಸಭೆಯಲ್ಲಿ ಕೈಗೊಂಡಿರುವ ನಿರ್ಣಯಗಳನ್ನು ಸುಪ್ರೀಂಕೋರ್ಟ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.</p>.<p>ಸೇವಾ ಜ್ಯೇಷ್ಠತೆ ಹಾಗೂ ಪ್ರಾದೇಶಿಕ ಪ್ರಾತಿನಿಧ್ಯದಂತಹ ಅಂಶಗಳನ್ನು ಪರಿಗಣಿಸಲಾಗಿಲ್ಲ ಎಂಬ ಕಾರಣ ನೀಡಿದ್ದ ಕೇಂದ್ರ ಸರ್ಕಾರ, ನ್ಯಾ.ಬೋಪಣ್ಣ ಹಾಗೂ ನ್ಯಾ. ಬೋಸ್ ಅವರ ಹೆಸರುಗಳನ್ನು ತಿರಸ್ಕರಿಸಿತ್ತು.</p>.<p>ಪ್ರಸ್ತುತ ಜಾರ್ಖಂಡ್ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿರುವ ನ್ಯಾ.ಬೋಸ್ ಸೇವಾ ಜ್ಯೇಷ್ಠತೆಗೆ ಸಂಬಂಧಿಸಿದಂತೆ ಅಖಿಲ ಭಾರತ ಮಟ್ಟದಲ್ಲಿ 12ನೇ ಸ್ಥಾನದಲ್ಲಿದ್ದಾರೆ. 36ನೇ ಸ್ಥಾನದಲ್ಲಿರುವ ನ್ಯಾ.ಬೋಪಣ್ಣ ಈಗ ಗುವಾಹಟಿ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹೈಕೋರ್ಟ್ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಹಾಗೂ ಎ.ಎಸ್.ಬೋಪಣ್ಣ ಅವರಿಗೆ ಪದೋನ್ನತಿ ನೀಡುವಂತೆ ಸುಪ್ರೀಂಕೋರ್ಟ್ನ ಕೊಲಿಜಿಯಂ ಮತ್ತೆ ಶಿಫಾರಸು ಮಾಡಿದೆ.</p>.<p>ಈ ಇಬ್ಬರು ನ್ಯಾಯಮೂರ್ತಿಗಳಿಗೆ ಪದನ್ನೋತಿ ನೀಡುವ ಸಂಬಂಧ ಕೇಂದ್ರ ಸರ್ಕಾರ ಎತ್ತಿದ್ದ ಆಕ್ಷೇಪವನ್ನು ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಕೊಲಿಜಿಯಂ ತಿರಸ್ಕರಿಸಿದ್ದು, ’ಉಭಯ ನ್ಯಾಯಮೂರ್ತಿಗಳ ಸಾಮರ್ಥ್ಯ, ನಡವಳಿಕೆ ಹಾಗೂ ಪ್ರಾಮಾಣಿಕತೆಗೆ ಕುಂದು ತರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ‘ ಎಂದು ಪ್ರತಿಪಾದಿಸಿದೆ.</p>.<p>ಪದೋನ್ನತಿ ನೀಡುವಂತೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಸೂರ್ಯಕಾಂತ ಅವರ ಹೆಸರನ್ನೂ ಶಿಫಾರಸು ಮಾಡಿರುವ ಕೊಲಿಜಿಯಂ,ಈ ಸಂಬಂಧ ತನ್ನ ಸಭೆಯಲ್ಲಿ ಕೈಗೊಂಡಿರುವ ನಿರ್ಣಯಗಳನ್ನು ಸುಪ್ರೀಂಕೋರ್ಟ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.</p>.<p>ಸೇವಾ ಜ್ಯೇಷ್ಠತೆ ಹಾಗೂ ಪ್ರಾದೇಶಿಕ ಪ್ರಾತಿನಿಧ್ಯದಂತಹ ಅಂಶಗಳನ್ನು ಪರಿಗಣಿಸಲಾಗಿಲ್ಲ ಎಂಬ ಕಾರಣ ನೀಡಿದ್ದ ಕೇಂದ್ರ ಸರ್ಕಾರ, ನ್ಯಾ.ಬೋಪಣ್ಣ ಹಾಗೂ ನ್ಯಾ. ಬೋಸ್ ಅವರ ಹೆಸರುಗಳನ್ನು ತಿರಸ್ಕರಿಸಿತ್ತು.</p>.<p>ಪ್ರಸ್ತುತ ಜಾರ್ಖಂಡ್ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿರುವ ನ್ಯಾ.ಬೋಸ್ ಸೇವಾ ಜ್ಯೇಷ್ಠತೆಗೆ ಸಂಬಂಧಿಸಿದಂತೆ ಅಖಿಲ ಭಾರತ ಮಟ್ಟದಲ್ಲಿ 12ನೇ ಸ್ಥಾನದಲ್ಲಿದ್ದಾರೆ. 36ನೇ ಸ್ಥಾನದಲ್ಲಿರುವ ನ್ಯಾ.ಬೋಪಣ್ಣ ಈಗ ಗುವಾಹಟಿ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>