<p><strong>ನವದೆಹಲಿ:</strong> ಕೋಲ್ಕತ್ತದ ಆರ್.ಜಿ.ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸುತ್ತಿದೆ.</p><p>ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ. ಬಿ. ಪಾರ್ದೀವಾಲ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಿಚಾರಣೆ ಕೈಗೊಂಡಿದೆ.</p><p>ವೈದ್ಯರು ಮತ್ತು ಇತರ ಆರೋಗ್ಯ ವೃತ್ತಿಪರರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪ್ರೋಟೋಕಾಲ್ ಅನ್ನು ರೂಪಿಸಲು ಉನ್ನತ ನ್ಯಾಯಾಲಯವು ಈ ಹಿಂದೆ 10 ಸದಸ್ಯರ ರಾಷ್ಟ್ರೀಯ ಕಾರ್ಯಪಡೆ (NTF) ಅನ್ನು ರಚಿಸಿತ್ತು.</p><p><strong>ಕಿರಿಯ ವೈದ್ಯರ ಪ್ರತಿಭಟನೆ ಅಂತ್ಯ?</strong></p><p>ಈ ನಡುವೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಪ್ರತಿಭಟನನಿರತ ಕಿರಿಯ ವೈದ್ಯರು ಸಭೆ ನಡೆಸಿದ್ದಾರೆ. ಈ ಮಾತುಕತೆಯ ಬೆನ್ನಲೇ ಕೋಲ್ಕತ್ತ ಪೊಲೀಸ್ ಆಯುಕ್ತ ವಿನೀತ್ ಗೋಯಲ್, ಆರೋಗ್ಯ ಸೇವೆಗಳ ನಿರ್ದೇಶಕ ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕರನ್ನು ವಜಾಗೊಳಿಸುವುದಾಗಿ ಮಮತಾ ಸೋಮವಾರ ರಾತ್ರಿಯೇ ಘೋಷಿಸಿದ್ದಾರೆ. </p><p>‘ನಾವು ಮೌಖಿಕ ಭರವಸೆಗಳನ್ನು ಸ್ವೀಕರಿಸಿದ್ದೇವೆ. ಆಶ್ವಾಸನೆ ಜಾರಿಯಾಗುವವರೆಗೂ ಮುಷ್ಕರ, ಧರಣಿ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ಸುಪ್ರೀಂ ಕೋರ್ಟ್ನ ವಿಚಾರಣೆಯ ನಂತರ ನಾವು ನಿರ್ಧರಿಸುತ್ತೇವೆ’ ಎಂದು ಕಿರಿಯ ವೈದ್ಯ ದೇಬೈಶ್ ಹಲ್ಡರ್ ಹೇಳಿರುವುದಾಗಿ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋಲ್ಕತ್ತದ ಆರ್.ಜಿ.ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸುತ್ತಿದೆ.</p><p>ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ. ಬಿ. ಪಾರ್ದೀವಾಲ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಿಚಾರಣೆ ಕೈಗೊಂಡಿದೆ.</p><p>ವೈದ್ಯರು ಮತ್ತು ಇತರ ಆರೋಗ್ಯ ವೃತ್ತಿಪರರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪ್ರೋಟೋಕಾಲ್ ಅನ್ನು ರೂಪಿಸಲು ಉನ್ನತ ನ್ಯಾಯಾಲಯವು ಈ ಹಿಂದೆ 10 ಸದಸ್ಯರ ರಾಷ್ಟ್ರೀಯ ಕಾರ್ಯಪಡೆ (NTF) ಅನ್ನು ರಚಿಸಿತ್ತು.</p><p><strong>ಕಿರಿಯ ವೈದ್ಯರ ಪ್ರತಿಭಟನೆ ಅಂತ್ಯ?</strong></p><p>ಈ ನಡುವೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಪ್ರತಿಭಟನನಿರತ ಕಿರಿಯ ವೈದ್ಯರು ಸಭೆ ನಡೆಸಿದ್ದಾರೆ. ಈ ಮಾತುಕತೆಯ ಬೆನ್ನಲೇ ಕೋಲ್ಕತ್ತ ಪೊಲೀಸ್ ಆಯುಕ್ತ ವಿನೀತ್ ಗೋಯಲ್, ಆರೋಗ್ಯ ಸೇವೆಗಳ ನಿರ್ದೇಶಕ ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕರನ್ನು ವಜಾಗೊಳಿಸುವುದಾಗಿ ಮಮತಾ ಸೋಮವಾರ ರಾತ್ರಿಯೇ ಘೋಷಿಸಿದ್ದಾರೆ. </p><p>‘ನಾವು ಮೌಖಿಕ ಭರವಸೆಗಳನ್ನು ಸ್ವೀಕರಿಸಿದ್ದೇವೆ. ಆಶ್ವಾಸನೆ ಜಾರಿಯಾಗುವವರೆಗೂ ಮುಷ್ಕರ, ಧರಣಿ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ಸುಪ್ರೀಂ ಕೋರ್ಟ್ನ ವಿಚಾರಣೆಯ ನಂತರ ನಾವು ನಿರ್ಧರಿಸುತ್ತೇವೆ’ ಎಂದು ಕಿರಿಯ ವೈದ್ಯ ದೇಬೈಶ್ ಹಲ್ಡರ್ ಹೇಳಿರುವುದಾಗಿ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>