ಹೈಕೋರ್ಟ್ನ ಮುಂದೆ ಇದ್ದುದು ಆದೇಶವೊಂದು ಕಾನೂನಿನ ದೃಷ್ಟಿಯಿಂದ ಎಷ್ಟು ಸರಿ ಎಂಬುದನ್ನು ಪರಿಶೀಲಿಸುವುದಾಗಿತ್ತು. ‘ಅಪರಾಧ ನಿರ್ಣಯವನ್ನು ಪ್ರಶ್ನಿಸಿದ ಅರ್ಜಿಯ ವಿಚಾರಣೆಯಲ್ಲಿ, ಆ ಅರ್ಜಿಯಲ್ಲಿ ವಾದಗಳ ಹುರುಳನ್ನು ತೀರ್ಮಾನಿಸುವ ಕೆಲಸವನ್ನು ಹೈಕೋರ್ಟ್ ಮಾಡಬೇಕಿತ್ತು. ಇಂತಹ ಪ್ರಕರಣಗಳಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸುವಂತಿಲ್ಲ, ಬೋಧನೆಗೆ ತೊಡಗುವಂತೆ ಇಲ್ಲ ಎಂಬುದು ನಮ್ಮ ಅನಿಸಿಕೆ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.