ಮುಖ್ಯ ನ್ಯಾಯಮೂರ್ತಿ ಸಿ.ಎ.ಬೊಬಡೆ, ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರಿದ್ದ ಪೀಠ, ‘ಗಾಂಧಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡುವುದು ಸಮರ್ಥನೀಯವಲ್ಲ. ಪ್ರಶಸ್ತಿಗಿಂತಲೂ ಉನ್ನತ ಸ್ಥಾನದಲ್ಲಿಅವರನ್ನು ನಾಗರಿಕರು ಇರಿಸಿದ್ದಾರೆ’ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ‘ಅರ್ಜಿದಾರರ ಭಾವನೆಗೆ ಮನ್ನಣೆ ನೀಡಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬಹುದು’ ಎಂದು ಅರ್ಜಿದಾರರಿಗೆ ಸೂಚಿಸಿದೆ.