<p><strong>ನವದೆಹಲಿ:</strong> ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದ ವಿಚಾರಣೆ ನಡೆಸುತ್ತಿರುವ ಆಂತರಿಕ ತನಿಖಾ ಸಮಿತಿಯ ಮುಖ್ಯಸ್ಥ ನ್ಯಾಯ<br />ಮೂರ್ತಿ ಎಸ್.ಎ.ಬೋಬ್ಡೆ ಅವರನ್ನು ನ್ಯಾಯಮೂರ್ತಿಗಳಾದ ಆರ್.ಎಫ್.ನರಿಮನ್ ಮತ್ತು ಡಿ.ವೈ.ಚಂದ್ರಚೂಡ್ ಭೇಟಿಯಾಗಿದ್ದಾರೆ ಎಂಬ ವರದಿಯನ್ನು ಸುಪ್ರೀಂ ಕೋರ್ಟ್ ಅಲ್ಲಗಳೆದಿದೆ.</p>.<p>ಸುಪ್ರೀಂಕೋರ್ಟ್ನ ಮಹಾ ಕಾರ್ಯದರ್ಶಿ ಕಚೇರಿ ಈ ಕುರಿತು ಹೇಳಿಕೆಯೊಂದನ್ನು ನೀಡಿದ್ದು, ಇಬ್ಬರು ನ್ಯಾಯಮೂರ್ತಿಗಳು ಬೋಬ್ಡೆ ಅವರನ್ನು ಶುಕ್ರವಾರ ಸಂಜೆ ಭೇಟಿ ಮಾಡಿದ್ದಾರೆ ಎಂಬ ಮಾಧ್ಯಮ ವರದಿ ಅತ್ಯಂತ ದುರದೃಷ್ಟಕರ ಎಂದು ತಿಳಿಸಿದೆ.</p>.<p>ಸುಪ್ರೀಂಕೋರ್ಟ್ನ ಯಾವುದೇ ನ್ಯಾಯಮೂರ್ತಿಗಳಿಂದ ಮಾಹಿತಿ ಪಡೆಯದೇ ತನ್ನದೇ ಆದ ರೀತಿಯಲ್ಲಿ ಆಂತರಿಕ ತನಿಖಾ ಸಮಿತಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.</p>.<p>ಸಮಿತಿಯ ಮುಖ್ಯಸ್ಥ, ನ್ಯಾಯಮೂರ್ತಿ ಬೋಬ್ಡೆ ಅವರನ್ನು ಭೇಟಿಯಾದ ಇಬ್ಬರು ನ್ಯಾಯಮೂರ್ತಿಗಳು, ಮೂವರು ಸದಸ್ಯರ ಸಮಿತಿಯು ಏಕಪಕ್ಷೀಯವಾಗಿ ಪ್ರಕ್ರಿಯೆ ನಡೆಸಬಾರದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು.</p>.<p>‘ತನ್ನ ಪರ ವಾದಿಸಲು ವಕೀಲರ ನೆರವು ಪಡೆಯಲು ಅನುಮತಿ ನೀಡಬೇಕು ಎಂದು ಸಿಜೆಐ ವಿರುದ್ಧ ಆರೋಪ ಮಾಡಿರುವ ಸುಪ್ರೀಂಕೋರ್ಟ್ನ ಮಾಜಿ ಉದ್ಯೋಗಿಯ ಮನವಿಯನ್ನು ಪರಿಗಣಿಸಬೇಕು. ಇಲ್ಲವೇ, ಈ ವಿಷಯದಲ್ಲಿ ವಿಚಾರಣಾ ಸಮಿತಿಗೆ ನೆರವು ನೀಡುವ ಸಲುವಾಗಿ ವಕೀಲರೊಬ್ಬರನ್ನು (ಅಮಿಕಸ್ ಕ್ಯೂರಿ) ನೇಮಿಸಬೇಕು. ಇಲ್ಲದಿದ್ದರೆ ಸುಪ್ರೀಂಕೋರ್ಟ್ಗೆ ಕಳಂಕ ತಪ್ಪಿದ್ದಲ್ಲ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಅವರು ಸಮಿತಿಗೆ ಪತ್ರ ಬರೆದಿದ್ದಾರೆ’ ಎಂದೂ ವರದಿಯಾಗಿತ್ತು.</p>.<p>ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ಸಹ ವಿಚಾರಣೆಗೆ ಸಮಿತಿ ಎದುರು ಕಳೆದ ಬುಧವಾರ ಹಾಜರಾಗಿದ್ದರು. ನ್ಯಾಯಮೂರ್ತಿ ಬೋಬ್ಡೆ ಜತೆಗೆ ನ್ಯಾಯಮೂರ್ತಿಗಳಾದ ಇಂದು ಮಲ್ಹೋತ್ರ ಮತ್ತು ಇಂದಿರಾ ಬ್ಯಾನರ್ಜಿ ಸಮಿತಿಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದ ವಿಚಾರಣೆ ನಡೆಸುತ್ತಿರುವ ಆಂತರಿಕ ತನಿಖಾ ಸಮಿತಿಯ ಮುಖ್ಯಸ್ಥ ನ್ಯಾಯ<br />ಮೂರ್ತಿ ಎಸ್.ಎ.ಬೋಬ್ಡೆ ಅವರನ್ನು ನ್ಯಾಯಮೂರ್ತಿಗಳಾದ ಆರ್.ಎಫ್.ನರಿಮನ್ ಮತ್ತು ಡಿ.ವೈ.ಚಂದ್ರಚೂಡ್ ಭೇಟಿಯಾಗಿದ್ದಾರೆ ಎಂಬ ವರದಿಯನ್ನು ಸುಪ್ರೀಂ ಕೋರ್ಟ್ ಅಲ್ಲಗಳೆದಿದೆ.</p>.<p>ಸುಪ್ರೀಂಕೋರ್ಟ್ನ ಮಹಾ ಕಾರ್ಯದರ್ಶಿ ಕಚೇರಿ ಈ ಕುರಿತು ಹೇಳಿಕೆಯೊಂದನ್ನು ನೀಡಿದ್ದು, ಇಬ್ಬರು ನ್ಯಾಯಮೂರ್ತಿಗಳು ಬೋಬ್ಡೆ ಅವರನ್ನು ಶುಕ್ರವಾರ ಸಂಜೆ ಭೇಟಿ ಮಾಡಿದ್ದಾರೆ ಎಂಬ ಮಾಧ್ಯಮ ವರದಿ ಅತ್ಯಂತ ದುರದೃಷ್ಟಕರ ಎಂದು ತಿಳಿಸಿದೆ.</p>.<p>ಸುಪ್ರೀಂಕೋರ್ಟ್ನ ಯಾವುದೇ ನ್ಯಾಯಮೂರ್ತಿಗಳಿಂದ ಮಾಹಿತಿ ಪಡೆಯದೇ ತನ್ನದೇ ಆದ ರೀತಿಯಲ್ಲಿ ಆಂತರಿಕ ತನಿಖಾ ಸಮಿತಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.</p>.<p>ಸಮಿತಿಯ ಮುಖ್ಯಸ್ಥ, ನ್ಯಾಯಮೂರ್ತಿ ಬೋಬ್ಡೆ ಅವರನ್ನು ಭೇಟಿಯಾದ ಇಬ್ಬರು ನ್ಯಾಯಮೂರ್ತಿಗಳು, ಮೂವರು ಸದಸ್ಯರ ಸಮಿತಿಯು ಏಕಪಕ್ಷೀಯವಾಗಿ ಪ್ರಕ್ರಿಯೆ ನಡೆಸಬಾರದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು.</p>.<p>‘ತನ್ನ ಪರ ವಾದಿಸಲು ವಕೀಲರ ನೆರವು ಪಡೆಯಲು ಅನುಮತಿ ನೀಡಬೇಕು ಎಂದು ಸಿಜೆಐ ವಿರುದ್ಧ ಆರೋಪ ಮಾಡಿರುವ ಸುಪ್ರೀಂಕೋರ್ಟ್ನ ಮಾಜಿ ಉದ್ಯೋಗಿಯ ಮನವಿಯನ್ನು ಪರಿಗಣಿಸಬೇಕು. ಇಲ್ಲವೇ, ಈ ವಿಷಯದಲ್ಲಿ ವಿಚಾರಣಾ ಸಮಿತಿಗೆ ನೆರವು ನೀಡುವ ಸಲುವಾಗಿ ವಕೀಲರೊಬ್ಬರನ್ನು (ಅಮಿಕಸ್ ಕ್ಯೂರಿ) ನೇಮಿಸಬೇಕು. ಇಲ್ಲದಿದ್ದರೆ ಸುಪ್ರೀಂಕೋರ್ಟ್ಗೆ ಕಳಂಕ ತಪ್ಪಿದ್ದಲ್ಲ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಅವರು ಸಮಿತಿಗೆ ಪತ್ರ ಬರೆದಿದ್ದಾರೆ’ ಎಂದೂ ವರದಿಯಾಗಿತ್ತು.</p>.<p>ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ಸಹ ವಿಚಾರಣೆಗೆ ಸಮಿತಿ ಎದುರು ಕಳೆದ ಬುಧವಾರ ಹಾಜರಾಗಿದ್ದರು. ನ್ಯಾಯಮೂರ್ತಿ ಬೋಬ್ಡೆ ಜತೆಗೆ ನ್ಯಾಯಮೂರ್ತಿಗಳಾದ ಇಂದು ಮಲ್ಹೋತ್ರ ಮತ್ತು ಇಂದಿರಾ ಬ್ಯಾನರ್ಜಿ ಸಮಿತಿಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>