ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ವೇಳೆ ಬಿಡುಗಡೆಯಾಗಿದ್ದ ಕೈದಿಗಳಿಗೆ ಶರಣಾಗಲು ಸುಪ್ರೀಂ ಕೋರ್ಟ್‌ ಸೂಚನೆ

Last Updated 24 ಮಾರ್ಚ್ 2023, 11:16 IST
ಅಕ್ಷರ ಗಾತ್ರ

ನವದೆಹಲಿ: ಜೈಲಿನಲ್ಲಿ ದಟ್ಟಣೆ ತಪ್ಪಿಸಲು ಕೋವಿಡ್ ಸಾಂಕ್ರಾಮಿಕದ ಅವಧಿಯಲ್ಲಿ ಬಿಡುಗಡೆ ಮಾಡಿದ್ದ ಎಲ್ಲ ವಿಚಾರಣಾಧೀನ ಕೈದಿಗಳು 15 ದಿನದಲ್ಲಿ ಶರಣಾಗಬೇಕು ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ, ಸಿ.ಟಿ.ರವಿಕುಮಾರ್ ಅವರಿದ್ದ ಪೀಠ, ತುರ್ತು ಜಾಮೀನಿನಡಿ ಬಿಡುಗಡೆ ಆದವರು ಶರಣಾಗತಿಯ ಬಳಿಕ ಜಾಮೀನು ಕೋರಿ ಸಕ್ಷಮ ಕೋರ್ಟ್‌ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿತು.

ಗಂಭೀರವಲ್ಲದ ಅಪರಾಧಗಳಿಗೆ ಸಂಬಂಧಿಸಿ ಬಂಧಿಸಿದ್ದವರನ್ನು ಕೋವಿಡ್‌ ಸಂದರ್ಭದಲ್ಲಿ ಜೈಲಿನಲ್ಲಿ ದಟ್ಟಣೆ ತಪ್ಪಿಸಲು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಚನೆಯಾಗಿದ್ದ ಉನ್ನತಾಧಿಕಾರ ಸಮಿತಿ ಸಲಹೆ ಆಧರಿಸಿ ಬಿಡುಗಡೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT