<p><strong>ನವದೆಹಲಿ:</strong> ‘ವಲಸೆ ಕಾರ್ಮಿಕರನ್ನು ಅವರ ಸ್ವಂತ ರಾಜ್ಯಗಳಿಗೆ 15 ದಿನಗಳಲ್ಲಿ ಕಳುಹಿಸಲು ಅಗತ್ಯ ಕ್ರಮವಹಿಸಬೇಕು’ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.</p>.<p>ವಲಸೆ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಿದ ಬಳಿಕ, ಅವರ ಕೌಶಲ ಆಧರಿಸಿ ಉದ್ಯೋಗಾವಕಾಶ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದೂ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿತು.</p>.<p>ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್, ಎಂ.ಆರ್.ಶಾ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಡಿಸಿತು. ವಲಸೆ ಕಾರ್ಮಿಕರ ಪ್ರಯಾಣಕ್ಕಾಗಿ ಬೇಡಿಕೆಯನ್ನು ಆಧರಿಸಿ ಹೆಚ್ಚುವರಿ ರೈಲುಗಳ ಸಂಚಾರದ ಸೇವೆಯನ್ನು ಕಲ್ಪಿಸಬೇಕು ಎಂದು ಸೂಚಿಸಿತು.</p>.<p>ಲಾಕ್ಡೌನ್ ನಿಯಮಗಳ ಉಲ್ಲಂಘನೆಗಾಗಿ ವಲಸೆ ಕಾರ್ಮಿಕರ ವಿರುದ್ಧ ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆಯಡಿ ಹೂಡಿರುವ ಮೊಕದ್ದಮೆಗಳನ್ನು ವಾಪಸು ಪಡೆಯುವುದನ್ನು ಪರಿಶೀಲಿಸಬೇಕು ಎಂದು ರಾಜ್ಯ ಸರ್ಕಾರಗಳಿಗೆ ಸಲಹೆ ಮಾಡಿತು.</p>.<p>ವಿಚಾರಣೆಯನ್ನು ಜುಲೈ ತಿಂಗಳಿಗೆ ನಿಗದಿಪಡಿಸಿದ ಪೀಠವು ವಲಸೆ ಕಾರ್ಮಿಕರಿಗೆ ಇರುವ ಕಲ್ಯಾಣ, ಉದ್ಯೋಗಾವಾಶ ಯೋಜನೆಗಳ ವಿವರಗಳನ್ನು ನಿಯಮಿತವಾಗಿ ಪ್ರಕಟಿಸಬೇಕು ಎಂದು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ವಲಸೆ ಕಾರ್ಮಿಕರನ್ನು ಅವರ ಸ್ವಂತ ರಾಜ್ಯಗಳಿಗೆ 15 ದಿನಗಳಲ್ಲಿ ಕಳುಹಿಸಲು ಅಗತ್ಯ ಕ್ರಮವಹಿಸಬೇಕು’ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.</p>.<p>ವಲಸೆ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಿದ ಬಳಿಕ, ಅವರ ಕೌಶಲ ಆಧರಿಸಿ ಉದ್ಯೋಗಾವಕಾಶ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದೂ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿತು.</p>.<p>ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್, ಎಂ.ಆರ್.ಶಾ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಡಿಸಿತು. ವಲಸೆ ಕಾರ್ಮಿಕರ ಪ್ರಯಾಣಕ್ಕಾಗಿ ಬೇಡಿಕೆಯನ್ನು ಆಧರಿಸಿ ಹೆಚ್ಚುವರಿ ರೈಲುಗಳ ಸಂಚಾರದ ಸೇವೆಯನ್ನು ಕಲ್ಪಿಸಬೇಕು ಎಂದು ಸೂಚಿಸಿತು.</p>.<p>ಲಾಕ್ಡೌನ್ ನಿಯಮಗಳ ಉಲ್ಲಂಘನೆಗಾಗಿ ವಲಸೆ ಕಾರ್ಮಿಕರ ವಿರುದ್ಧ ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆಯಡಿ ಹೂಡಿರುವ ಮೊಕದ್ದಮೆಗಳನ್ನು ವಾಪಸು ಪಡೆಯುವುದನ್ನು ಪರಿಶೀಲಿಸಬೇಕು ಎಂದು ರಾಜ್ಯ ಸರ್ಕಾರಗಳಿಗೆ ಸಲಹೆ ಮಾಡಿತು.</p>.<p>ವಿಚಾರಣೆಯನ್ನು ಜುಲೈ ತಿಂಗಳಿಗೆ ನಿಗದಿಪಡಿಸಿದ ಪೀಠವು ವಲಸೆ ಕಾರ್ಮಿಕರಿಗೆ ಇರುವ ಕಲ್ಯಾಣ, ಉದ್ಯೋಗಾವಾಶ ಯೋಜನೆಗಳ ವಿವರಗಳನ್ನು ನಿಯಮಿತವಾಗಿ ಪ್ರಕಟಿಸಬೇಕು ಎಂದು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>