ನಂತರ, ಲೂಯಿಸ್ ಪತ್ನಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ‘ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ರೋಗಿಗೆ ಅರಿವಳಿಕೆ ವಿಭಾಗದ ಮುಖ್ಯಸ್ಥರ ಬದಲು, ಹೃದ್ರೋಗ ಅರಿವಳಿಕೆ ವಿಭಾಗದಲ್ಲಿ ತರಬೇತಿ ಪಡೆಯುತ್ತಿದ್ದ ವೈದ್ಯರೊಬ್ಬರು ಅರಿವಳಿಕೆ ಚುಚ್ಚುಮದ್ದು ನೀಡಿದ್ದರು. ನ್ಯಾಯಯುತ ಪರಿಹಾರ ಘೋಷಿಸುವುದಕ್ಕಾಗಿ ಜಿಲ್ಲಾ ಗ್ರಾಹಕರ ವೇದಿಕೆಯು ಈ ಎಲ್ಲ ಅಂಶಗಳನ್ನು ಪರಿಗಣಿಸಬೇಕಿತ್ತು. ಈ ಪ್ರಕರಣದಲ್ಲಿ ಹಾಗೆ ಆಗಿಲ್ಲ’ ಎಂದು ನ್ಯಾಯಪೀಠ ಹೇಳಿದೆ.