<p><strong>ನವದೆಹಲಿ</strong>: ಹೆದ್ದಾರಿಗೆ ಸೇರಿದ ಜಾಗವು ಅನಧಿಕೃತವಾಗಿ ಒತ್ತುವರಿ ಆಗುವುದನ್ನು ತಡೆಯಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ಎಚ್ಎಐ) ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.</p>.<p>ಗಸ್ತು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳ ತಂಡವನ್ನು ರಚಿಸಬೇಕು ಎಂದು ಕೂಡ ಕೋರ್ಟ್ ಹೇಳಿದೆ. ‘ರಾಜಮಾರ್ಗ್ ಯಾತ್ರಾ’ ಹೆಸರಿನ ಆ್ಯಪ್ ಲಭ್ಯವಿರುವ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಮಾಧ್ಯಮಗಳ ಮೂಲಕ ಜಾಹೀರಾತು ನೀಡಬೇಕು ಎಂದು ಕೇಂದ್ರಕ್ಕೆ ಸೂಚನೆ ನೀಡಿದೆ.</p>.<p class="title">ರಾಷ್ಟ್ರೀಯ ಹೆದ್ದಾರಿ ಬಳಕೆ ಮಾಡುವವರಿಗೆ ಸಮಗ್ರ ಮಾಹಿತಿ ಒದಗಿಸಲು ಹಾಗೂ ಅವರ ದೂರುಗಳನ್ನು ಪರಿಹರಿಸಲು ಎನ್ಎಚ್ಎಐ ಈ ಆ್ಯಪ್ ಅಭಿವೃದ್ಧಿಪಡಿಸಿದೆ.</p>.<p class="bodytext">ರಾಜ್ಯಗಳ ಪೊಲೀಸರು ಅಥವಾ ಇತರ ಸಿಬ್ಬಂದಿಯನ್ನು ಒಳಗೊಂಡ ವಿಚಕ್ಷಣಾ ತಂಡವನ್ನು ಎನ್ಎಚ್ಎಐ ರಚಿಸಬೇಕು. ಈ ತಂಡಗಳು ನಿಯಮಿತವಾಗಿ ಗಸ್ತು ತಿರುಗಬೇಕು ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇರುವ ವಿಭಾಗೀಯ ಪೀಠವು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹೆದ್ದಾರಿಗೆ ಸೇರಿದ ಜಾಗವು ಅನಧಿಕೃತವಾಗಿ ಒತ್ತುವರಿ ಆಗುವುದನ್ನು ತಡೆಯಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ಎಚ್ಎಐ) ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.</p>.<p>ಗಸ್ತು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳ ತಂಡವನ್ನು ರಚಿಸಬೇಕು ಎಂದು ಕೂಡ ಕೋರ್ಟ್ ಹೇಳಿದೆ. ‘ರಾಜಮಾರ್ಗ್ ಯಾತ್ರಾ’ ಹೆಸರಿನ ಆ್ಯಪ್ ಲಭ್ಯವಿರುವ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಮಾಧ್ಯಮಗಳ ಮೂಲಕ ಜಾಹೀರಾತು ನೀಡಬೇಕು ಎಂದು ಕೇಂದ್ರಕ್ಕೆ ಸೂಚನೆ ನೀಡಿದೆ.</p>.<p class="title">ರಾಷ್ಟ್ರೀಯ ಹೆದ್ದಾರಿ ಬಳಕೆ ಮಾಡುವವರಿಗೆ ಸಮಗ್ರ ಮಾಹಿತಿ ಒದಗಿಸಲು ಹಾಗೂ ಅವರ ದೂರುಗಳನ್ನು ಪರಿಹರಿಸಲು ಎನ್ಎಚ್ಎಐ ಈ ಆ್ಯಪ್ ಅಭಿವೃದ್ಧಿಪಡಿಸಿದೆ.</p>.<p class="bodytext">ರಾಜ್ಯಗಳ ಪೊಲೀಸರು ಅಥವಾ ಇತರ ಸಿಬ್ಬಂದಿಯನ್ನು ಒಳಗೊಂಡ ವಿಚಕ್ಷಣಾ ತಂಡವನ್ನು ಎನ್ಎಚ್ಎಐ ರಚಿಸಬೇಕು. ಈ ತಂಡಗಳು ನಿಯಮಿತವಾಗಿ ಗಸ್ತು ತಿರುಗಬೇಕು ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇರುವ ವಿಭಾಗೀಯ ಪೀಠವು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>