<p class="title"><strong>ನವದೆಹಲಿ: </strong>ದೆಹಲಿಯಲ್ಲಿ ರೈಲ್ವೆ ಹಳಿಗೆ ಹೊಂದಿಕೊಂಡಂತೆ 140 ಕಿ.ಮೀ ಅಂತರದಲ್ಲಿರುವ ಸುಮಾರು 48,000 ಕೊಳೆಗೇರಿಗಳನ್ನು ಮೂರು ತಿಂಗಳ ಅವಧಿಯಲ್ಲಿ ತೆರವುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ತೆರವು ಕಾರ್ಯದಲ್ಲಿ ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪಕ್ಕೆ ಆಸ್ಪದವಿರಬಾರದು ಎಂದೂ ಸೂಚಿಸಿದೆ.</p>.<p class="bodytext">ಹಂತ ಹಂತವಾಗಿ ಕೊಳೆಗೇರಿಗಳನ್ನು ತೆರವುಗೊಳಿಸಲಾಗುತ್ತದೆ. ಈ ಪ್ರದೇಶದಲ್ಲಿ ಅತಿಕ್ರಮಣಗಳ ತೆರವಿಗೆ ಸಂಬಂಧಿಸಿ ಯಾವುದೇ ನ್ಯಾಯಾಲಯವು ಯಾವುದೇ ಮಧ್ಯಂತರ ಆದೇಶ, ತಡೆಯಾಜ್ಞೆ ನೀಡದಂತೆ ನಿರ್ಬಂಧಿಸಿದೆ. ಈಗಾಗಲೇ ಮಧ್ಯಾವಧಿ ಆದೇಶ ಹೊರಡಿಸಿದ್ದರೆ ಅದು ಊರ್ಜಿತದಲ್ಲಿರುವುದಿಲ್ಲ ಎಂದೂ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.</p>.<p>ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರಿದ್ದ ನ್ಯಾಯಪೀಠವು, ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸಲ್ಲಿಸಿದ್ದ ವರದಿಯನ್ನು ಆಧರಿಸಿ ಈ ಆದೇಶವನ್ನು ಹೊರಡಿಸಿದೆ. ಈ ಪ್ರದೇಶದ ಅತಿಕ್ರಮಣ ಮತ್ತು ತ್ಯಾಜ್ಯವನ್ನು ತೆರವುಗೊಳಿಸಲು ಕೈಗೊಂಡ ಕ್ರಮಗಳ ಬಗ್ಗೆ ತಿಂಗಳಲ್ಲಿ ವರದಿ ನೀಡಬೇಕು ಎಂದು ಸೂಚಿಸಿತು.</p>.<p>‘ತೆರವು ಕಾರ್ಯಾಚರಣೆಯನ್ನು ಹಂತ ಹಂತವಾಗಿ ಜಾರಿಗೊಳಿಸಲು ಸಮಗ್ರ ಯೋಜನೆ ರೂಪಿಸಬೇಕು ಎಂದು ನಾವು ಎಲ್ಲ ಭಾಗಿದಾರರಿಗೆ ಸೂಚಿಸುತ್ತಿದ್ದೇವೆ. ಸುರಕ್ಷತಾ ವಲಯದಲ್ಲಿ ಆಗಿರುವ ಅತಿಕ್ರಮಣವನ್ನು ಮೂರು ತಿಂಗಳಲ್ಲಿ ತೆರವುಗೊಳಿಸಬೇಕು. ಈ ಕಾರ್ಯಕ್ಕೆ ಯಾವುದೇ ನ್ಯಾಯಾಲಯ ತಡೆಯಾಜ್ಞೆ ನೀಡಬಾರದು’ ಎಂದು ಪೀಠವು ಸ್ಪಷ್ಟಮಾತುಗಳಲ್ಲಿ ಹೇಳಿತು.</p>.<p>ಒಂದು ವೇಳೆ ಯಾವುದೇ ನ್ಯಾಯಾಲಯವು ತಡೆಯಾಜ್ಞೆ ನೀಡಿದರೂ ಇದಕ್ಕೆ ಅನ್ವಯವಾಗುವುದಿಲ್ಲ ಎಂದು ಪೀಠ ಹೇಳಿತು. ಮಾಲಿನ್ಯ ನಿಯಂತ್ರಣ ಪ್ರಾಧಿಕಾರವು ತನ್ನ ಆದೇಶದಲ್ಲಿ ದೆಹಲಿಯಲ್ಲಿ ಅತಿಕ್ರಮಣ ತೆರವುಗೊಳಿಸಲು ರೈಲ್ವೆ ಇಲಾಖೆಗೆ ಕಾಲಮಿತಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಆದೇಶಿಸಬೇಕು ಎಂದು ಕೋರಿತ್ತು.</p>.<p>‘ಹಂತ ಹಂತವಾಗಿ ಕೊಳೆಗೇರಿಗಳನ್ನು ತೆರವುಗೊಳಿಸಲು ಸಮಗ್ರ ಯೋಜನೆ ರೂಪಿಸಲು ಎಲ್ಲ ಭಾಗೀದಾರರಿಗೆ ನಾವು ನಿರ್ದೇಶನ ನೀಡುತ್ತೇವೆ. ಮೂರು ತಿಂಗಳ ಅವಧಿಯೊಳಗೆ ಸುರಕ್ಷತಾ ವಲಯದಲ್ಲಿರುವ ಅತಿಕ್ರಮಣಗಳನ್ನು ತೆರವುಗೊಳಿಸಬೇಕು. ಇದರಲ್ಲಿ ರಾಜಕೀಯ ಸೇರಿದಂತೆ ಯಾವುದೇ ಹಸ್ತಕ್ಷೇಪಕ್ಕೆ ಅವಕಾಶವಿರಬಾರದು. ಈ ವ್ಯಾಪ್ತಿಯಲ್ಲಿ ಬರುವ ಅತಿಕ್ರಮಣ ತೆರವು ಮಾಡಲು ಯಾವುದೇ ನ್ಯಾಯಾಲಯ ತಡೆಯಾಜ್ಞೆ ನೀಡಬಾರದು’ ಎಂದು ನ್ಯಾಯಾಲಯ ತಿಳಿಸಿತು.</p>.<p>ರೈಲ್ವೆ ಹಳಿಗುಂಟ ಇರುವ ಅತಿಕ್ರಮಣಗಳನ್ನು ತೆರವುಗೊಳಿಸುವದಕ್ಕೆ ಸಂಬಂಧಿಸಿ ತಡೆಯಾಜ್ಞೆ ಇದ್ದರೆ ಅದು ಅನೂರ್ಜಿತವಾಗಲಿದೆ ಎಂದೂ ನ್ಯಾಯಾಲಯ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ದೆಹಲಿಯಲ್ಲಿ ರೈಲ್ವೆ ಹಳಿಗೆ ಹೊಂದಿಕೊಂಡಂತೆ 140 ಕಿ.ಮೀ ಅಂತರದಲ್ಲಿರುವ ಸುಮಾರು 48,000 ಕೊಳೆಗೇರಿಗಳನ್ನು ಮೂರು ತಿಂಗಳ ಅವಧಿಯಲ್ಲಿ ತೆರವುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ತೆರವು ಕಾರ್ಯದಲ್ಲಿ ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪಕ್ಕೆ ಆಸ್ಪದವಿರಬಾರದು ಎಂದೂ ಸೂಚಿಸಿದೆ.</p>.<p class="bodytext">ಹಂತ ಹಂತವಾಗಿ ಕೊಳೆಗೇರಿಗಳನ್ನು ತೆರವುಗೊಳಿಸಲಾಗುತ್ತದೆ. ಈ ಪ್ರದೇಶದಲ್ಲಿ ಅತಿಕ್ರಮಣಗಳ ತೆರವಿಗೆ ಸಂಬಂಧಿಸಿ ಯಾವುದೇ ನ್ಯಾಯಾಲಯವು ಯಾವುದೇ ಮಧ್ಯಂತರ ಆದೇಶ, ತಡೆಯಾಜ್ಞೆ ನೀಡದಂತೆ ನಿರ್ಬಂಧಿಸಿದೆ. ಈಗಾಗಲೇ ಮಧ್ಯಾವಧಿ ಆದೇಶ ಹೊರಡಿಸಿದ್ದರೆ ಅದು ಊರ್ಜಿತದಲ್ಲಿರುವುದಿಲ್ಲ ಎಂದೂ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.</p>.<p>ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರಿದ್ದ ನ್ಯಾಯಪೀಠವು, ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸಲ್ಲಿಸಿದ್ದ ವರದಿಯನ್ನು ಆಧರಿಸಿ ಈ ಆದೇಶವನ್ನು ಹೊರಡಿಸಿದೆ. ಈ ಪ್ರದೇಶದ ಅತಿಕ್ರಮಣ ಮತ್ತು ತ್ಯಾಜ್ಯವನ್ನು ತೆರವುಗೊಳಿಸಲು ಕೈಗೊಂಡ ಕ್ರಮಗಳ ಬಗ್ಗೆ ತಿಂಗಳಲ್ಲಿ ವರದಿ ನೀಡಬೇಕು ಎಂದು ಸೂಚಿಸಿತು.</p>.<p>‘ತೆರವು ಕಾರ್ಯಾಚರಣೆಯನ್ನು ಹಂತ ಹಂತವಾಗಿ ಜಾರಿಗೊಳಿಸಲು ಸಮಗ್ರ ಯೋಜನೆ ರೂಪಿಸಬೇಕು ಎಂದು ನಾವು ಎಲ್ಲ ಭಾಗಿದಾರರಿಗೆ ಸೂಚಿಸುತ್ತಿದ್ದೇವೆ. ಸುರಕ್ಷತಾ ವಲಯದಲ್ಲಿ ಆಗಿರುವ ಅತಿಕ್ರಮಣವನ್ನು ಮೂರು ತಿಂಗಳಲ್ಲಿ ತೆರವುಗೊಳಿಸಬೇಕು. ಈ ಕಾರ್ಯಕ್ಕೆ ಯಾವುದೇ ನ್ಯಾಯಾಲಯ ತಡೆಯಾಜ್ಞೆ ನೀಡಬಾರದು’ ಎಂದು ಪೀಠವು ಸ್ಪಷ್ಟಮಾತುಗಳಲ್ಲಿ ಹೇಳಿತು.</p>.<p>ಒಂದು ವೇಳೆ ಯಾವುದೇ ನ್ಯಾಯಾಲಯವು ತಡೆಯಾಜ್ಞೆ ನೀಡಿದರೂ ಇದಕ್ಕೆ ಅನ್ವಯವಾಗುವುದಿಲ್ಲ ಎಂದು ಪೀಠ ಹೇಳಿತು. ಮಾಲಿನ್ಯ ನಿಯಂತ್ರಣ ಪ್ರಾಧಿಕಾರವು ತನ್ನ ಆದೇಶದಲ್ಲಿ ದೆಹಲಿಯಲ್ಲಿ ಅತಿಕ್ರಮಣ ತೆರವುಗೊಳಿಸಲು ರೈಲ್ವೆ ಇಲಾಖೆಗೆ ಕಾಲಮಿತಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಆದೇಶಿಸಬೇಕು ಎಂದು ಕೋರಿತ್ತು.</p>.<p>‘ಹಂತ ಹಂತವಾಗಿ ಕೊಳೆಗೇರಿಗಳನ್ನು ತೆರವುಗೊಳಿಸಲು ಸಮಗ್ರ ಯೋಜನೆ ರೂಪಿಸಲು ಎಲ್ಲ ಭಾಗೀದಾರರಿಗೆ ನಾವು ನಿರ್ದೇಶನ ನೀಡುತ್ತೇವೆ. ಮೂರು ತಿಂಗಳ ಅವಧಿಯೊಳಗೆ ಸುರಕ್ಷತಾ ವಲಯದಲ್ಲಿರುವ ಅತಿಕ್ರಮಣಗಳನ್ನು ತೆರವುಗೊಳಿಸಬೇಕು. ಇದರಲ್ಲಿ ರಾಜಕೀಯ ಸೇರಿದಂತೆ ಯಾವುದೇ ಹಸ್ತಕ್ಷೇಪಕ್ಕೆ ಅವಕಾಶವಿರಬಾರದು. ಈ ವ್ಯಾಪ್ತಿಯಲ್ಲಿ ಬರುವ ಅತಿಕ್ರಮಣ ತೆರವು ಮಾಡಲು ಯಾವುದೇ ನ್ಯಾಯಾಲಯ ತಡೆಯಾಜ್ಞೆ ನೀಡಬಾರದು’ ಎಂದು ನ್ಯಾಯಾಲಯ ತಿಳಿಸಿತು.</p>.<p>ರೈಲ್ವೆ ಹಳಿಗುಂಟ ಇರುವ ಅತಿಕ್ರಮಣಗಳನ್ನು ತೆರವುಗೊಳಿಸುವದಕ್ಕೆ ಸಂಬಂಧಿಸಿ ತಡೆಯಾಜ್ಞೆ ಇದ್ದರೆ ಅದು ಅನೂರ್ಜಿತವಾಗಲಿದೆ ಎಂದೂ ನ್ಯಾಯಾಲಯ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>