<p class="title"><strong>ನವದೆಹಲಿ:</strong> ಪಿಂಚಣಿ ಸೌಲಭ್ಯ, ವೃದ್ಧಾಶ್ರಮಗಳ ಸ್ಥಾಪನೆ ಸೇರಿದಂತೆ ಹಿರಿಯ ನಾಗರಿಕರ ಕಲ್ಯಾಣ ಯೋಜನೆಗಳ ಜಾರಿ ಕುರಿತು ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಆದೇಶಿಸಿದೆ.</p>.<p class="title">ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾನ್ಷು ಧುಲಿಯಾ ಅವರಿದ್ದ ನ್ಯಾಯಪೀಠ ಈ ಅದೇಶ ನೀಡಿದ್ದು ಕಲ್ಯಾಣ ಯೋಜನೆಗಳ ಅನುಷ್ಠಾನ, ಪೋಷಕರು ಮತ್ತು ಹಿರಿಯ ನಾಗರಿಕ ಕಾಯ್ದೆಯ ಜಾರಿ ಕುರಿತು ವಸ್ತುಸ್ಥಿತಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ.</p>.<p>ರಾಜ್ಯ ಸರ್ಕಾರಗಳು ಎರಡು ತಿಂಗಳಲ್ಲಿ ಈ ವರದಿ ಸಲ್ಲಿಸಬೇಕು, ನಂತರದ ಒಂದು ತಿಂಗಳಲ್ಲಿ ಕೇಂದ್ರ ಸರ್ಕಾರವು ಪರಿಷ್ಕೃತ ವಸ್ತುಸ್ಥಿತಿ ವರದಿಯನ್ನು ಸಲ್ಲಿಸಬೇಕು ಎಂದೂ ನ್ಯಾಯಪೀಠವು ಸೂಚಿಸಿದೆ.</p>.<p>ಪ್ರಾಥಮಿಕ ಆರೋಗ್ಯ ಸೇವೆ ಒಳಗೊಂಡಂತೆ ವೃದ್ಧಾಶ್ರಮಗಳನ್ನುದೇಶದಾದ್ಯಂತ ಸ್ಥಾಪಿಸಬೇಕು ಎಂದು ಕೋರಿ ಮಾಜಿ ಕಾನೂನು ಸಚಿವ ಅಶ್ವನಿಕುಮಾರ್ ಸಲ್ಲಿಸಿದ್ದ ಅರ್ಜಿ ಕುರಿತು ಈ ನಿರ್ದೇಶನ ನೀಡಿತು. 2023ರ ಜನವರಿಗೆ ವಿಚಾರಣೆ ಮುಂದೂಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಪಿಂಚಣಿ ಸೌಲಭ್ಯ, ವೃದ್ಧಾಶ್ರಮಗಳ ಸ್ಥಾಪನೆ ಸೇರಿದಂತೆ ಹಿರಿಯ ನಾಗರಿಕರ ಕಲ್ಯಾಣ ಯೋಜನೆಗಳ ಜಾರಿ ಕುರಿತು ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಆದೇಶಿಸಿದೆ.</p>.<p class="title">ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾನ್ಷು ಧುಲಿಯಾ ಅವರಿದ್ದ ನ್ಯಾಯಪೀಠ ಈ ಅದೇಶ ನೀಡಿದ್ದು ಕಲ್ಯಾಣ ಯೋಜನೆಗಳ ಅನುಷ್ಠಾನ, ಪೋಷಕರು ಮತ್ತು ಹಿರಿಯ ನಾಗರಿಕ ಕಾಯ್ದೆಯ ಜಾರಿ ಕುರಿತು ವಸ್ತುಸ್ಥಿತಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ.</p>.<p>ರಾಜ್ಯ ಸರ್ಕಾರಗಳು ಎರಡು ತಿಂಗಳಲ್ಲಿ ಈ ವರದಿ ಸಲ್ಲಿಸಬೇಕು, ನಂತರದ ಒಂದು ತಿಂಗಳಲ್ಲಿ ಕೇಂದ್ರ ಸರ್ಕಾರವು ಪರಿಷ್ಕೃತ ವಸ್ತುಸ್ಥಿತಿ ವರದಿಯನ್ನು ಸಲ್ಲಿಸಬೇಕು ಎಂದೂ ನ್ಯಾಯಪೀಠವು ಸೂಚಿಸಿದೆ.</p>.<p>ಪ್ರಾಥಮಿಕ ಆರೋಗ್ಯ ಸೇವೆ ಒಳಗೊಂಡಂತೆ ವೃದ್ಧಾಶ್ರಮಗಳನ್ನುದೇಶದಾದ್ಯಂತ ಸ್ಥಾಪಿಸಬೇಕು ಎಂದು ಕೋರಿ ಮಾಜಿ ಕಾನೂನು ಸಚಿವ ಅಶ್ವನಿಕುಮಾರ್ ಸಲ್ಲಿಸಿದ್ದ ಅರ್ಜಿ ಕುರಿತು ಈ ನಿರ್ದೇಶನ ನೀಡಿತು. 2023ರ ಜನವರಿಗೆ ವಿಚಾರಣೆ ಮುಂದೂಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>