<p><strong>ನವದೆಹಲಿ:</strong> ಅಖಿಲ ಭಾರತ ಪ್ರವಾಸಿ ಪರವಾನಗಿ (ಎಐಟಿಪಿ) ಹೊಂದಿರುವ ವಾಹನಗಳಿಗೆ ರಾಜ್ಯದ ಮೂಲಕ ಹಾದುಹೋಗಲು ಯಾವುದೇ ಅಡ್ಡಿ ಉಂಟುಮಾಡುವಂತಿಲ್ಲ ಎಂದು ತಮಿಳುನಾಡು ಸರ್ಕಾರಕ್ಕೆ, ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ.</p>.<p>ಕೆ.ಆರ್. ಸುರೇಶ್ ಕುಮಾರ್ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ವಲ್ ಭುಇಯಾಂ ಅವರು ಇದ್ದ ವಿಭಾಗೀಯ ಪೀಠವು, ತಮಿಳುನಾಡು ಸರ್ಕಾರ ಹಾಗೂ ಇತರರಿಗೆ ನೋಟಿಸ್ ಜಾರಿಗೆ ಸೂಚಿಸಿದೆ.</p>.<p>ಬೇರೆ ರಾಜ್ಯಗಳಲ್ಲಿ ನೋಂದಣಿ ಆಗಿರುವ ಬಸ್ಗಳು ತಮಿಳುನಾಡಿನಲ್ಲಿ ಕಾರ್ಯಾಚರಿಸಬೇಕು ಎಂದಾದರೆ ಅವು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಹೇಳುವ ತಮಿಳುನಾಡು ಸರ್ಕಾರದ ಸೂಚನೆಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಈ ಸೂಚನೆಯನ್ನು ಸರ್ಕಾರವು 2023ರ ನವೆಂಬರ್ 6 ಹಾಗೂ ಜೂನ್ 18ರಂದು ಹೊರಡಿಸಿದೆ. ಅರ್ಜಿದಾರರು ಎಐಟಿಪಿ ಹೊಂದಿದ್ದಾರೆ.</p>.<p>‘ಅರ್ಜಿದಾರರಿಗೆ ಸೇರಿದ, ಎಐಟಿಪಿ ಹೊಂದಿರುವ ವಾಹನಗಳಿಗೆ ತಮಿಳುನಾಡಿನಲ್ಲಿ ಸಂಚರಿಸಲು ಯಾವುದೇ ಅಡ್ಡಿ ಉಂಟುಮಾಡುವಂತಿಲ್ಲ’ ಎಂದು ಪೀಠವು ಮಧ್ಯಂತರ ಆದೇಶದಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಖಿಲ ಭಾರತ ಪ್ರವಾಸಿ ಪರವಾನಗಿ (ಎಐಟಿಪಿ) ಹೊಂದಿರುವ ವಾಹನಗಳಿಗೆ ರಾಜ್ಯದ ಮೂಲಕ ಹಾದುಹೋಗಲು ಯಾವುದೇ ಅಡ್ಡಿ ಉಂಟುಮಾಡುವಂತಿಲ್ಲ ಎಂದು ತಮಿಳುನಾಡು ಸರ್ಕಾರಕ್ಕೆ, ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ.</p>.<p>ಕೆ.ಆರ್. ಸುರೇಶ್ ಕುಮಾರ್ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ವಲ್ ಭುಇಯಾಂ ಅವರು ಇದ್ದ ವಿಭಾಗೀಯ ಪೀಠವು, ತಮಿಳುನಾಡು ಸರ್ಕಾರ ಹಾಗೂ ಇತರರಿಗೆ ನೋಟಿಸ್ ಜಾರಿಗೆ ಸೂಚಿಸಿದೆ.</p>.<p>ಬೇರೆ ರಾಜ್ಯಗಳಲ್ಲಿ ನೋಂದಣಿ ಆಗಿರುವ ಬಸ್ಗಳು ತಮಿಳುನಾಡಿನಲ್ಲಿ ಕಾರ್ಯಾಚರಿಸಬೇಕು ಎಂದಾದರೆ ಅವು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಹೇಳುವ ತಮಿಳುನಾಡು ಸರ್ಕಾರದ ಸೂಚನೆಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಈ ಸೂಚನೆಯನ್ನು ಸರ್ಕಾರವು 2023ರ ನವೆಂಬರ್ 6 ಹಾಗೂ ಜೂನ್ 18ರಂದು ಹೊರಡಿಸಿದೆ. ಅರ್ಜಿದಾರರು ಎಐಟಿಪಿ ಹೊಂದಿದ್ದಾರೆ.</p>.<p>‘ಅರ್ಜಿದಾರರಿಗೆ ಸೇರಿದ, ಎಐಟಿಪಿ ಹೊಂದಿರುವ ವಾಹನಗಳಿಗೆ ತಮಿಳುನಾಡಿನಲ್ಲಿ ಸಂಚರಿಸಲು ಯಾವುದೇ ಅಡ್ಡಿ ಉಂಟುಮಾಡುವಂತಿಲ್ಲ’ ಎಂದು ಪೀಠವು ಮಧ್ಯಂತರ ಆದೇಶದಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>