<p><strong>ನವದೆಹಲಿ:</strong> ಶಾಸಕ ಅಬ್ಬಾಸ್ ಅನ್ಸಾರಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಾದ ಪ್ರಕರಣದ ತನಿಖೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಶುಕ್ರವಾರ ನಿರ್ದೇಶನ ನೀಡಿದೆ.</p>.<p>ಪ್ರಕರಣದ ತನಿಖೆ ಮುಗಿದ ನಂತರ ಅನ್ಸಾರಿ ಅವರ ಜಾಮೀನು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವುದಾಗಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರಿದ್ದ ಪೀಠ ತಿಳಿಸಿದೆ.</p>.<p>ಅನ್ಸಾರಿ ಮತ್ತು ಇತರ ಕೆಲವರು ಗ್ಯಾಂಗ್ ರಚಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ 2024ರ ಆಗಸ್ಟ್ 31ರಂದು ಚಿತ್ರಕೂಟ ಜಿಲ್ಲೆಯ ಕೊತ್ವಾಲಿ ಕಾರ್ವಿ ಪೊಲೀಸ್ ಠಾಣೆಯಲ್ಲಿ ದರೋಡೆಕೋರರು ಮತ್ತು ಸಮಾಜವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1986ರ ಸೆಕ್ಷನ್ 2, 3ರ ಅಡಿಯಲ್ಲಿ ಅನ್ಸಾರಿ, ನವನೀತ್ ಸಚನ್, ನಿಯಾಜ್ ಅನ್ಸಾರಿ , ಫರಾಜ್ ಖಾನ್ ಮತ್ತು ಶಹಬಾಜ್ ಆಲಂ ಖಾನ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಇವರ ವಿರುದ್ಧ ಸುಲಿಗೆ ಮತ್ತು ಹಲ್ಲೆ ಆರೋಪ ಹೊರಿಸಲಾಗಿತ್ತು. </p>.<p>ಈ ಸಂಬಂಧ 2024ರ ಸೆಪ್ಟೆಂಬರ್ 6ರಂದು ಅನ್ಸಾರಿ ಅವರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ಜಾಮೀನು ಕೋರಿ ಅವರು ಸಲ್ಲಿಸಲಾದ ಅರ್ಜಿಯನ್ನು ಡಿಸೆಂಬರ್ 18ರಂದು, ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿತು. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದೂ ಕೋರ್ಟ್ ಹೇಳಿತ್ತು.</p> .ಹಣ ಅಕ್ರಮ ವರ್ಗಾವಣೆ: ಶಾಸಕ ಅಬ್ಬಾಸ್ ಅನ್ಸಾರಿಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಶಾಸಕ ಅಬ್ಬಾಸ್ ಅನ್ಸಾರಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಾದ ಪ್ರಕರಣದ ತನಿಖೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಶುಕ್ರವಾರ ನಿರ್ದೇಶನ ನೀಡಿದೆ.</p>.<p>ಪ್ರಕರಣದ ತನಿಖೆ ಮುಗಿದ ನಂತರ ಅನ್ಸಾರಿ ಅವರ ಜಾಮೀನು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವುದಾಗಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರಿದ್ದ ಪೀಠ ತಿಳಿಸಿದೆ.</p>.<p>ಅನ್ಸಾರಿ ಮತ್ತು ಇತರ ಕೆಲವರು ಗ್ಯಾಂಗ್ ರಚಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ 2024ರ ಆಗಸ್ಟ್ 31ರಂದು ಚಿತ್ರಕೂಟ ಜಿಲ್ಲೆಯ ಕೊತ್ವಾಲಿ ಕಾರ್ವಿ ಪೊಲೀಸ್ ಠಾಣೆಯಲ್ಲಿ ದರೋಡೆಕೋರರು ಮತ್ತು ಸಮಾಜವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1986ರ ಸೆಕ್ಷನ್ 2, 3ರ ಅಡಿಯಲ್ಲಿ ಅನ್ಸಾರಿ, ನವನೀತ್ ಸಚನ್, ನಿಯಾಜ್ ಅನ್ಸಾರಿ , ಫರಾಜ್ ಖಾನ್ ಮತ್ತು ಶಹಬಾಜ್ ಆಲಂ ಖಾನ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಇವರ ವಿರುದ್ಧ ಸುಲಿಗೆ ಮತ್ತು ಹಲ್ಲೆ ಆರೋಪ ಹೊರಿಸಲಾಗಿತ್ತು. </p>.<p>ಈ ಸಂಬಂಧ 2024ರ ಸೆಪ್ಟೆಂಬರ್ 6ರಂದು ಅನ್ಸಾರಿ ಅವರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ಜಾಮೀನು ಕೋರಿ ಅವರು ಸಲ್ಲಿಸಲಾದ ಅರ್ಜಿಯನ್ನು ಡಿಸೆಂಬರ್ 18ರಂದು, ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿತು. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದೂ ಕೋರ್ಟ್ ಹೇಳಿತ್ತು.</p> .ಹಣ ಅಕ್ರಮ ವರ್ಗಾವಣೆ: ಶಾಸಕ ಅಬ್ಬಾಸ್ ಅನ್ಸಾರಿಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>