2022ರ ನ. 7ರಂದು ಸುಪ್ರೀಂ ಕೋರ್ಟ್ನ ಐವರು ನ್ಯಾಯಮೂರ್ತಿಗಳ ಪೀಠವು ವಿಭಿನ್ನ ತರ್ಕದೊಂದಿಗೆ ನಾಲ್ಕು ಪ್ರತ್ಯೇಕ ತೀರ್ಪುಗಳನ್ನು ನೀಡಿತ್ತು. ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ಬೇಲಾ ತ್ರಿವೇದಿ ಮತ್ತು ನ್ಯಾಯಮೂರ್ತಿ ಜೆ.ಪಿ. ಪಾರ್ದೀವಾಲಾ ಅವರು ಮೂರು ಪ್ರತ್ಯೇಕ ತೀರ್ಪುಗಳಲ್ಲಿ 103ನೇ ತಿದ್ದುಪಡಿಯನ್ನು ಎತ್ತಿ ಹಿಡಿದಿದ್ದರು. ಆದರೆ, ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಮತ್ತು ನ್ಯಾಯಮೂರ್ತಿ ಎಸ್. ರವೀಂದ್ರ ಭಟ್ ಅವರ ನೇತೃತ್ವದ ನ್ಯಾಯಪೀಠವು ಅಲ್ಪಸಂಖ್ಯಾತರ ತೀರ್ಪಿನಲ್ಲಿ ಸಂವಿಧಾನ 103ನೇ ತಿದ್ದುಪಡಿಯನ್ನು ರದ್ದುಗೊಳಿಸಿತ್ತು.