<p><strong>ನವದೆಹಲಿ</strong>: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೈದರಾಬಾದ್ ಮೂಲದ ಉದ್ಯಮಿ ಅಭಿಷೇಕ್ ಬೋಯಿನಪಲ್ಲಿ ಅವರ ಮಧ್ಯಂತರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಸ್ತರಿಸಿದೆ.</p>.<p>ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರನ್ನು ಒಳಗೊಂಡ ನ್ಯಾಯಪೀಠವು, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು ಲಭ್ಯವಿರದ ಕಾರಣ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿತು.</p>.<p>ಈ ಸಂದರ್ಭದಲ್ಲಿ, ಪಾಸ್ಪೋರ್ಟ್ ಸಲ್ಲಿಸುವಂತೆ ಮತ್ತು ಹೈದರಾಬಾದ್ ಭೇಟಿ ಹೊರತಾಗಿ ರಾಷ್ಟ್ರ ರಾಜಧಾನಿ ದೆಹಲಿಯನ್ನು ತೊರೆಯದಂತೆ ಬೋಯಿನಪಲ್ಲಿ ಅವರಿಗೆ ಕೋರ್ಟ್ ಸೂಚನೆ ನೀಡಿತು.</p>.<p>ಬೋಯಿನಪಲ್ಲಿ ಅವರ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ‘ಅರ್ಜಿದಾರರನ್ನು 2022 ಅಕ್ಟೋಬರ್ನಲ್ಲಿ ಬಂಧಿಸಲಾಗಿದೆ’ ಎಂದು ಕೋರ್ಟ್ಗೆ ತಿಳಿಸಿದರು. ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಪ್ರಕರಣವನ್ನು ಉಲ್ಲೇಖಿಸಿದರು.</p>.<p>ಕಳೆದ ಮಾರ್ಚ್ 20ರಂದು ಸುಪ್ರೀಂಕೋರ್ಟ್ ಬೋಯಿನಪಲ್ಲಿ ಅವರಿಗೆ ಐದು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ನಂತರ ಹಲವು ಬಾರಿ ಜಾಮೀನು ಅವಧಿಯನ್ನು ವಿಸ್ತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೈದರಾಬಾದ್ ಮೂಲದ ಉದ್ಯಮಿ ಅಭಿಷೇಕ್ ಬೋಯಿನಪಲ್ಲಿ ಅವರ ಮಧ್ಯಂತರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಸ್ತರಿಸಿದೆ.</p>.<p>ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರನ್ನು ಒಳಗೊಂಡ ನ್ಯಾಯಪೀಠವು, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು ಲಭ್ಯವಿರದ ಕಾರಣ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿತು.</p>.<p>ಈ ಸಂದರ್ಭದಲ್ಲಿ, ಪಾಸ್ಪೋರ್ಟ್ ಸಲ್ಲಿಸುವಂತೆ ಮತ್ತು ಹೈದರಾಬಾದ್ ಭೇಟಿ ಹೊರತಾಗಿ ರಾಷ್ಟ್ರ ರಾಜಧಾನಿ ದೆಹಲಿಯನ್ನು ತೊರೆಯದಂತೆ ಬೋಯಿನಪಲ್ಲಿ ಅವರಿಗೆ ಕೋರ್ಟ್ ಸೂಚನೆ ನೀಡಿತು.</p>.<p>ಬೋಯಿನಪಲ್ಲಿ ಅವರ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ‘ಅರ್ಜಿದಾರರನ್ನು 2022 ಅಕ್ಟೋಬರ್ನಲ್ಲಿ ಬಂಧಿಸಲಾಗಿದೆ’ ಎಂದು ಕೋರ್ಟ್ಗೆ ತಿಳಿಸಿದರು. ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಪ್ರಕರಣವನ್ನು ಉಲ್ಲೇಖಿಸಿದರು.</p>.<p>ಕಳೆದ ಮಾರ್ಚ್ 20ರಂದು ಸುಪ್ರೀಂಕೋರ್ಟ್ ಬೋಯಿನಪಲ್ಲಿ ಅವರಿಗೆ ಐದು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ನಂತರ ಹಲವು ಬಾರಿ ಜಾಮೀನು ಅವಧಿಯನ್ನು ವಿಸ್ತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>