<p><strong>ನವದೆಹಲಿ:</strong> ದೇಶದಲ್ಲಿ ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಕಡಿವಾಣ ಹಾಕುವ ಕ್ರಮಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಸ್ವಯಂಪ್ರೇರಿತವಾಗಿ ನಿರ್ಧರಿಸಿತು.</p>.<p>ವಿಶೇಷ ತನಿಖಾ ತಂಡಗಳಿಗೆ ಇಂಥ ಕೃತ್ಯಗಳ ತನಿಖೆಯನ್ನು ಒಪ್ಪಿಸುವುದು ಹಾಗೂ ಪ್ರಕರಣಗಳ ವಿಚಾರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷ ಕೋರ್ಟ್ಗಳನ್ನು ಸ್ಥಾಪಿಸುವ ಕ್ರಮಗಳನ್ನು ಕುರಿತು ಸುಪ್ರೀಂ ಕೋರ್ಟ್ ಚಿಂತನೆ ನಡೆಸಿದೆ.</p>.<p>ಇದಕ್ಕೆ ಪೂರಕವಾಗಿ ಮಾರ್ಗದರ್ಶಿಸೂತ್ರಗಳನ್ನು ರಚಿಸಲು ಹಿರಿಯ ವಕೀಲ ವಿ. ಗಿರಿ ಅವರನ್ನು ನ್ಯಾಯಾಲಯದ ಸಹಾಯಕರಾಗಿ (ಅಮಿಕಸ್ ಕ್ಯೂರಿ) ಆಗಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ, ಅನಿರುದ್ಧ ಬೋಸ್ ಅವರಿದ್ದ ನ್ಯಾಯಪೀಠವು ನೇಮಕ ಮಾಡಿತು.</p>.<p>ಪತ್ರಿಕಾ ವರದಿಯ ಆಧಾರದಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿದ ಕೋರ್ಟ್, ಈ ಸಂಬಂಧ ವರದಿ ಸಲ್ಲಿಸುವಂತೆ ಹೈಕೋರ್ಟ್ಗಳಿಗೂ ಸೂಚಿಸಿತು. ಇಂಥ ಕೃತ್ಯಗಳ ವಿರುದ್ಧ ಸಮಗ್ರ ಮತ್ತು ಸ್ಪಷ್ಟವಾದ ರಾಷ್ಟ್ರೀಯ ನಿಲುವು ರೂಪಿಸುವ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗುವುದು ಎಂದು ಸ್ಪಷ್ಟಪಡಿಸಿತು.</p>.<p>ದೇಶದಾದ್ಯಂತ ಈ ವರ್ಷದ ಜ.1ರಿಂದ ಜೂನ್ 30ರವರೆಗೂ ಒಟ್ಟು 24,212 ಎಫ್ಐಆರ್ಗಳು ದಾಖಲಾಗಿವೆ. ಇದುವರೆಗೆ ಕೇವಲ 911 ಪ್ರಕರಣ ಪ್ರರಣಗಳಷ್ಟೇ ಇತ್ಯರ್ಥಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಕಡಿವಾಣ ಹಾಕುವ ಕ್ರಮಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಸ್ವಯಂಪ್ರೇರಿತವಾಗಿ ನಿರ್ಧರಿಸಿತು.</p>.<p>ವಿಶೇಷ ತನಿಖಾ ತಂಡಗಳಿಗೆ ಇಂಥ ಕೃತ್ಯಗಳ ತನಿಖೆಯನ್ನು ಒಪ್ಪಿಸುವುದು ಹಾಗೂ ಪ್ರಕರಣಗಳ ವಿಚಾರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷ ಕೋರ್ಟ್ಗಳನ್ನು ಸ್ಥಾಪಿಸುವ ಕ್ರಮಗಳನ್ನು ಕುರಿತು ಸುಪ್ರೀಂ ಕೋರ್ಟ್ ಚಿಂತನೆ ನಡೆಸಿದೆ.</p>.<p>ಇದಕ್ಕೆ ಪೂರಕವಾಗಿ ಮಾರ್ಗದರ್ಶಿಸೂತ್ರಗಳನ್ನು ರಚಿಸಲು ಹಿರಿಯ ವಕೀಲ ವಿ. ಗಿರಿ ಅವರನ್ನು ನ್ಯಾಯಾಲಯದ ಸಹಾಯಕರಾಗಿ (ಅಮಿಕಸ್ ಕ್ಯೂರಿ) ಆಗಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ, ಅನಿರುದ್ಧ ಬೋಸ್ ಅವರಿದ್ದ ನ್ಯಾಯಪೀಠವು ನೇಮಕ ಮಾಡಿತು.</p>.<p>ಪತ್ರಿಕಾ ವರದಿಯ ಆಧಾರದಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿದ ಕೋರ್ಟ್, ಈ ಸಂಬಂಧ ವರದಿ ಸಲ್ಲಿಸುವಂತೆ ಹೈಕೋರ್ಟ್ಗಳಿಗೂ ಸೂಚಿಸಿತು. ಇಂಥ ಕೃತ್ಯಗಳ ವಿರುದ್ಧ ಸಮಗ್ರ ಮತ್ತು ಸ್ಪಷ್ಟವಾದ ರಾಷ್ಟ್ರೀಯ ನಿಲುವು ರೂಪಿಸುವ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗುವುದು ಎಂದು ಸ್ಪಷ್ಟಪಡಿಸಿತು.</p>.<p>ದೇಶದಾದ್ಯಂತ ಈ ವರ್ಷದ ಜ.1ರಿಂದ ಜೂನ್ 30ರವರೆಗೂ ಒಟ್ಟು 24,212 ಎಫ್ಐಆರ್ಗಳು ದಾಖಲಾಗಿವೆ. ಇದುವರೆಗೆ ಕೇವಲ 911 ಪ್ರಕರಣ ಪ್ರರಣಗಳಷ್ಟೇ ಇತ್ಯರ್ಥಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>