<p><strong>ನವದೆಹಲಿ:</strong> ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ ಮತ್ತು ಅಸ್ಸಾಂನಲ್ಲಿ ಕ್ಷೇತ್ರ ಮರುವಿಂಗಡಣೆ ಕಾರ್ಯವನ್ನು ನಡೆಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮೂರು ತಿಂಗಳ ಗಡುವು ನೀಡಿದೆ.</p>.<p>ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ನೇತೃತ್ವದ ಪೀಠವು ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿದೆ.</p>.<p>ಈ ರಾಜ್ಯಗಳಲ್ಲಿ ಮರುವಿಂಗಡಣೆ ಕಾರ್ಯವನ್ನು ಮುಂದೂಡಿದ್ದನ್ನು ರದ್ದುಪಡಿಸಿ ರಾಷ್ಟ್ರಪತಿ 2020ರಲ್ಲಿ ಆದೇಶ ಹೊರಡಿಸಿದ್ದರು. ಹೀಗಿದ್ದರೂ ಮರುವಿಂಗಡಣೆ ಕಾರ್ಯದಲ್ಲಿ ವಿಳಂಬ ಆಗಿರುವುದಕ್ಕೆ ಕೋರ್ಟ್ ಈ ಹಿಂದೆ ಕಳವಳ ವ್ಯಕ್ತಪಡಿಸಿತ್ತು.</p>.<p class="bodytext">‘ಮರುವಿಂಗಡಣೆ ಮುಂದೂಡಿದ್ದನ್ನು ರದ್ದುಪಡಿಸಿ ರಾಷ್ಟ್ರಪತಿ ಆದೇಶಿಸಿದರೆ ಕೆಲಸ ಆರಂಭಿಸಲು ಅಷ್ಟೇ ಸಾಕಾಗುತ್ತದೆ. ಇಲ್ಲಿ ಸರ್ಕಾರಕ್ಕೆ ಏನು ಕೆಲಸ’ ಎಂದು ಪೀಠವು ಪ್ರಶ್ನಿಸಿತು.</p>.<p class="bodytext">ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನ ಕ್ಷೇತ್ರ ಮರುವಿಂಗಡಣೆ ವಿಚಾರವಾಗಿ ಸಮಾಲೋಚನೆ ನಡೆಯುತ್ತಿದೆ. ಆದರೆ ಮಣಿಪುರದಲ್ಲಿ ಹಿಂಸಾಚಾರದ ಕಾರಣದಿಂದಾಗಿ ಪರಿಸ್ಥಿತಿ ಅನುಕೂಲಕರವಾಗಿ ಇಲ್ಲ ಎಂದು ಕೇಂದ್ರ ಸರ್ಕಾರ ವಿವರಿಸಿತು.</p>.<p class="bodytext">ಪ್ರಜಾ ಪ್ರಾತಿನಿಧ್ಯ ಕಾಯ್ದೆ – 1950ರ ಅಡಿಯಲ್ಲಿ ಕ್ಷೇತ್ರ ಮರುವಿಂಗಡಣೆ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದಿಂದ ನಿರ್ದಿಷ್ಟ ಸೂಚನೆ ಬರಬೇಕು ಎಂದು ಚುನಾವಣಾ ಆಯೋಗ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ ಮತ್ತು ಅಸ್ಸಾಂನಲ್ಲಿ ಕ್ಷೇತ್ರ ಮರುವಿಂಗಡಣೆ ಕಾರ್ಯವನ್ನು ನಡೆಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮೂರು ತಿಂಗಳ ಗಡುವು ನೀಡಿದೆ.</p>.<p>ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ನೇತೃತ್ವದ ಪೀಠವು ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿದೆ.</p>.<p>ಈ ರಾಜ್ಯಗಳಲ್ಲಿ ಮರುವಿಂಗಡಣೆ ಕಾರ್ಯವನ್ನು ಮುಂದೂಡಿದ್ದನ್ನು ರದ್ದುಪಡಿಸಿ ರಾಷ್ಟ್ರಪತಿ 2020ರಲ್ಲಿ ಆದೇಶ ಹೊರಡಿಸಿದ್ದರು. ಹೀಗಿದ್ದರೂ ಮರುವಿಂಗಡಣೆ ಕಾರ್ಯದಲ್ಲಿ ವಿಳಂಬ ಆಗಿರುವುದಕ್ಕೆ ಕೋರ್ಟ್ ಈ ಹಿಂದೆ ಕಳವಳ ವ್ಯಕ್ತಪಡಿಸಿತ್ತು.</p>.<p class="bodytext">‘ಮರುವಿಂಗಡಣೆ ಮುಂದೂಡಿದ್ದನ್ನು ರದ್ದುಪಡಿಸಿ ರಾಷ್ಟ್ರಪತಿ ಆದೇಶಿಸಿದರೆ ಕೆಲಸ ಆರಂಭಿಸಲು ಅಷ್ಟೇ ಸಾಕಾಗುತ್ತದೆ. ಇಲ್ಲಿ ಸರ್ಕಾರಕ್ಕೆ ಏನು ಕೆಲಸ’ ಎಂದು ಪೀಠವು ಪ್ರಶ್ನಿಸಿತು.</p>.<p class="bodytext">ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನ ಕ್ಷೇತ್ರ ಮರುವಿಂಗಡಣೆ ವಿಚಾರವಾಗಿ ಸಮಾಲೋಚನೆ ನಡೆಯುತ್ತಿದೆ. ಆದರೆ ಮಣಿಪುರದಲ್ಲಿ ಹಿಂಸಾಚಾರದ ಕಾರಣದಿಂದಾಗಿ ಪರಿಸ್ಥಿತಿ ಅನುಕೂಲಕರವಾಗಿ ಇಲ್ಲ ಎಂದು ಕೇಂದ್ರ ಸರ್ಕಾರ ವಿವರಿಸಿತು.</p>.<p class="bodytext">ಪ್ರಜಾ ಪ್ರಾತಿನಿಧ್ಯ ಕಾಯ್ದೆ – 1950ರ ಅಡಿಯಲ್ಲಿ ಕ್ಷೇತ್ರ ಮರುವಿಂಗಡಣೆ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದಿಂದ ನಿರ್ದಿಷ್ಟ ಸೂಚನೆ ಬರಬೇಕು ಎಂದು ಚುನಾವಣಾ ಆಯೋಗ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>