ಸುಪ್ರೀಂ ಕೋರ್ಟ್ ಶ್ರೀನಿವಾಸ್ ಅವರಿಗೆ ಮೇ 17ರಂದು ಬಂಧನದಿಂದ ರಕ್ಷಣೆ ಒದಗಿಸಿತ್ತು. ಶ್ರೀನಿವಾಸ್ ವಿರುದ್ಧ ದೂರು ದಾಖಲಿಸಿದ್ದ ಮಹಿಳೆಯು, ‘ಅಶ್ಲೀಲ ಮಾತುಗಳ ಮೂಲಕ ಶ್ರೀನಿವಾಸ್ ಅವರು ಕಳೆದ ಆರು ತಿಂಗಳುಗಳಿಂದ ಕಿರುಕುಳ ನೀಡುತ್ತಿದ್ದಾರೆ’ ಎಂದು ಹೇಳಿದ್ದರು. ಪಕ್ಷದ ಹಿರಿಯ ನಾಯಕರಿಗೆ ತಮ್ಮ ವಿರುದ್ಧ ದೂರು ಸಲ್ಲಿಸುತ್ತಿದ್ದರೆ ಪರಿಣಾಮ ಕೆಟ್ಟದ್ದಾಗಿರುತ್ತದೆ ಎಂಬುದಾಗಿ ಬೆದರಿಸುತ್ತಿದ್ದರು ಎಂದೂ ದೂರಿನಲ್ಲಿ ಹೇಳಿದ್ದರು.