<p><strong>ನವದೆಹಲಿ</strong>: 1988ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 104 ವರ್ಷ ವಯಸ್ಸಿನ ರಸಿಕ್ ಚಂದ್ರ ಮೊಂಡಲ್ ಎನ್ನುವ ವ್ಯಕ್ತಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.</p>.<p>ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರು ಇರುವ ವಿಭಾಗೀಯ ಪೀಠವು ಶುಕ್ರವಾರ ಜಾಮೀನು ನೀಡಿದೆ.</p>.<p>ವಯಸ್ಸಿಗೆ ಸಂಬಂಧಿಸಿದ ಕೆಲವು ಆರೋಗ್ಯ ಸಮಸ್ಯೆಗಳನ್ನು ಹೊರತುಪಡಿಸಿದರೆ ಮೊಂಡಲ್ ಸ್ಥಿರವಾಗಿ ಇದ್ದಾನೆ ಎಂದು ಪಶ್ಚಿಮ ಬಂಗಾಳ ಸರ್ಕಾರದ ಪರ ವಕೀಲರು ಪೀಠಕ್ಕೆ ತಿಳಿಸಿದರು. ಮೊಂಡಲ್ಗೆ ವಯಸ್ಸಾಗಿದೆ ಎಂಬುದನ್ನು ಪರಿಗಣಿಸಿದ ಪೀಠವು, ಆತನಿಗೆ ಮಧ್ಯಂತರ ಜಾಮೀನು ನೀಡಿತು.</p>.<p>1988ರಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ಮೊಂಡಲ್ಗೆ 1994ರಲ್ಲಿ ಶಿಕ್ಷೆ ವಿಧಿಸಲಾಗಿದೆ. ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ಮೊಂಡಲ್ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತ ಹೈಕೋರ್ಟ್ 2018ರಲ್ಲಿ ವಜಾಗೊಳಿಸಿತ್ತು. ನಂತರ ಈತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ. ಸುಪ್ರೀಂ ಕೋರ್ಟ್ ಕೂಡ ಈತನ ಅರ್ಜಿಯನ್ನು ವಜಾಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 1988ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 104 ವರ್ಷ ವಯಸ್ಸಿನ ರಸಿಕ್ ಚಂದ್ರ ಮೊಂಡಲ್ ಎನ್ನುವ ವ್ಯಕ್ತಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.</p>.<p>ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರು ಇರುವ ವಿಭಾಗೀಯ ಪೀಠವು ಶುಕ್ರವಾರ ಜಾಮೀನು ನೀಡಿದೆ.</p>.<p>ವಯಸ್ಸಿಗೆ ಸಂಬಂಧಿಸಿದ ಕೆಲವು ಆರೋಗ್ಯ ಸಮಸ್ಯೆಗಳನ್ನು ಹೊರತುಪಡಿಸಿದರೆ ಮೊಂಡಲ್ ಸ್ಥಿರವಾಗಿ ಇದ್ದಾನೆ ಎಂದು ಪಶ್ಚಿಮ ಬಂಗಾಳ ಸರ್ಕಾರದ ಪರ ವಕೀಲರು ಪೀಠಕ್ಕೆ ತಿಳಿಸಿದರು. ಮೊಂಡಲ್ಗೆ ವಯಸ್ಸಾಗಿದೆ ಎಂಬುದನ್ನು ಪರಿಗಣಿಸಿದ ಪೀಠವು, ಆತನಿಗೆ ಮಧ್ಯಂತರ ಜಾಮೀನು ನೀಡಿತು.</p>.<p>1988ರಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ಮೊಂಡಲ್ಗೆ 1994ರಲ್ಲಿ ಶಿಕ್ಷೆ ವಿಧಿಸಲಾಗಿದೆ. ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ಮೊಂಡಲ್ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತ ಹೈಕೋರ್ಟ್ 2018ರಲ್ಲಿ ವಜಾಗೊಳಿಸಿತ್ತು. ನಂತರ ಈತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ. ಸುಪ್ರೀಂ ಕೋರ್ಟ್ ಕೂಡ ಈತನ ಅರ್ಜಿಯನ್ನು ವಜಾಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>