<p><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿಯ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಜಾಮೀನು ನೀಡಲು ಜಾರಿ ನಿರ್ದೇಶನಾಲಯ (ಇ.ಡಿ) ಯಾವುದೇ ಆಕ್ಷೇಪ ವ್ಯಕ್ತಪಡಿಸಲಿಲ್ಲ.</p><p>ಜಾಮೀನು ಕೋರಿ ಸಿಂಗ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪಿ.ಬಿ.ವರಾಳೆ ಅವರ ಪೀಠವು, ಆರು ತಿಂಗಳಿಂದ ಜೈಲಿನಲ್ಲಿರುವ ಸಿಂಗ್ ಅವರಿಗೆ ಜಾಮೀನಿನ ಮೇಲೆ ಬಿಡುಗಡೆಗೆ ನಿರ್ದೇಶನ ನೀಡಿತು.</p><p>‘ಸಿಂಗ್ ಅವರು ತಮ್ಮ ರಾಜಕೀಯ ಚಟುವಟಿಕೆ ಮುಂದುವರಿಸಬಹುದು. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಗಳನ್ನು ನೀಡುವಂತಿಲ್ಲ’ ಎಂದು ಪೀಠ ಈ ವೇಳೆ ಸೂಚಿಸಿತು.</p><p>ಜಾಮೀನಿಗೆ ಸಂಬಂಧಿಸಿದ ನಿಯಮಗಳು ಮತ್ತು ಷರತ್ತುಗಳನ್ನು ವಿಶೇಷ ನ್ಯಾಯಾಲಯ ನಿಗದಿಪಡಿಸುತ್ತದೆ ಎಂದ ಪೀಠವು, ಸಿಂಗ್ ಅವರಿಗೆ ನೀಡಲಾದ ಜಾಮೀನು ಆದೇಶವನ್ನು ಪೂರ್ವ ನಿದರ್ಶನ ಎಂದು ಪರಿಗಣಿಸಲು ಆಗುವುದಿಲ್ಲ ಎಂದೂ ಹೇಳಿತು.</p><p>ಇದಕ್ಕೂ ಮುನ್ನ, ಸಿಂಗ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದಕ್ಕೆ ತನಿಖಾ ಸಂಸ್ಥೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಜಾರಿ ನಿರ್ದೇಶನಾಲಯದ ಪರ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು ಪೀಠಕ್ಕೆ ತಿಳಿಸಿದರು.</p><p>ಆದಾಗ್ಯೂ ಸಿಂಗ್ ಅವರ ಬಳಿ ಯಾವುದೇ ಹಣ ಪತ್ತೆಯಾಗಿಲ್ಲವಲ್ಲ ಎಂದು ಪ್ರಶ್ನಿಸಿದ ಪೀಠವು, ಅವರ ವಿರುದ್ಧದ ₹ 2 ಕೋಟಿ ಲಂಚದ ಆರೋಪವನ್ನು ವಿಚಾರಣೆ ವೇಳೆ ಪರಿಶೀಲಿಸಬಹುದು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರಿಗೆ ಸೂಚಿಸಿತು.</p><p>ಸಿಂಗ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಾಡಿದರು. ಸಿಂಗ್ ಅವರನ್ನು ಇ.ಡಿ ಕಳೆದ ವರ್ಷದ ಅಕ್ಟೋಬರ್ 4ರಂದು ಬಂಧಿಸಿತ್ತು. </p><p>ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಎಎಪಿ ನಾಯಕನಿಗೆ ಜಾಮೀನು ದೊರೆತಿರುವುದು ಪಕ್ಷದ ನಾಯಕರು, ಕಾರ್ಯಕರ್ತರನ್ನು ಕೊಂಚ ನಿರಾಳರನ್ನಾಗಿಸಿದೆ. ಆದರೆ, ಈ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಅವರ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇನ್ನೂ ತಿಹಾರ್ ಜೈಲಿನಲ್ಲಿದ್ದಾರೆ.</p><p>ಸತ್ಯಮೇವ ಜಯತೆ: ಸಂಜಯ್ ಸಿಂಗ್ ಅವರಿಗೆ ಜಾಮೀನು ಸಿಕ್ಕ ನಂತರ ದೆಹಲಿ ಸಚಿವೆ ಆತಿಶಿ ಅವರು ತಮ್ಮ ‘ಎಕ್ಸ್’ನಲ್ಲಿ ‘ಸತ್ಯಮೇವ ಜಯತೆ’ ಎಂದು ಪ್ರತಿಕ್ರಿಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿಯ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಜಾಮೀನು ನೀಡಲು ಜಾರಿ ನಿರ್ದೇಶನಾಲಯ (ಇ.ಡಿ) ಯಾವುದೇ ಆಕ್ಷೇಪ ವ್ಯಕ್ತಪಡಿಸಲಿಲ್ಲ.</p><p>ಜಾಮೀನು ಕೋರಿ ಸಿಂಗ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪಿ.ಬಿ.ವರಾಳೆ ಅವರ ಪೀಠವು, ಆರು ತಿಂಗಳಿಂದ ಜೈಲಿನಲ್ಲಿರುವ ಸಿಂಗ್ ಅವರಿಗೆ ಜಾಮೀನಿನ ಮೇಲೆ ಬಿಡುಗಡೆಗೆ ನಿರ್ದೇಶನ ನೀಡಿತು.</p><p>‘ಸಿಂಗ್ ಅವರು ತಮ್ಮ ರಾಜಕೀಯ ಚಟುವಟಿಕೆ ಮುಂದುವರಿಸಬಹುದು. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಗಳನ್ನು ನೀಡುವಂತಿಲ್ಲ’ ಎಂದು ಪೀಠ ಈ ವೇಳೆ ಸೂಚಿಸಿತು.</p><p>ಜಾಮೀನಿಗೆ ಸಂಬಂಧಿಸಿದ ನಿಯಮಗಳು ಮತ್ತು ಷರತ್ತುಗಳನ್ನು ವಿಶೇಷ ನ್ಯಾಯಾಲಯ ನಿಗದಿಪಡಿಸುತ್ತದೆ ಎಂದ ಪೀಠವು, ಸಿಂಗ್ ಅವರಿಗೆ ನೀಡಲಾದ ಜಾಮೀನು ಆದೇಶವನ್ನು ಪೂರ್ವ ನಿದರ್ಶನ ಎಂದು ಪರಿಗಣಿಸಲು ಆಗುವುದಿಲ್ಲ ಎಂದೂ ಹೇಳಿತು.</p><p>ಇದಕ್ಕೂ ಮುನ್ನ, ಸಿಂಗ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದಕ್ಕೆ ತನಿಖಾ ಸಂಸ್ಥೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಜಾರಿ ನಿರ್ದೇಶನಾಲಯದ ಪರ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು ಪೀಠಕ್ಕೆ ತಿಳಿಸಿದರು.</p><p>ಆದಾಗ್ಯೂ ಸಿಂಗ್ ಅವರ ಬಳಿ ಯಾವುದೇ ಹಣ ಪತ್ತೆಯಾಗಿಲ್ಲವಲ್ಲ ಎಂದು ಪ್ರಶ್ನಿಸಿದ ಪೀಠವು, ಅವರ ವಿರುದ್ಧದ ₹ 2 ಕೋಟಿ ಲಂಚದ ಆರೋಪವನ್ನು ವಿಚಾರಣೆ ವೇಳೆ ಪರಿಶೀಲಿಸಬಹುದು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರಿಗೆ ಸೂಚಿಸಿತು.</p><p>ಸಿಂಗ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಾಡಿದರು. ಸಿಂಗ್ ಅವರನ್ನು ಇ.ಡಿ ಕಳೆದ ವರ್ಷದ ಅಕ್ಟೋಬರ್ 4ರಂದು ಬಂಧಿಸಿತ್ತು. </p><p>ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಎಎಪಿ ನಾಯಕನಿಗೆ ಜಾಮೀನು ದೊರೆತಿರುವುದು ಪಕ್ಷದ ನಾಯಕರು, ಕಾರ್ಯಕರ್ತರನ್ನು ಕೊಂಚ ನಿರಾಳರನ್ನಾಗಿಸಿದೆ. ಆದರೆ, ಈ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಅವರ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇನ್ನೂ ತಿಹಾರ್ ಜೈಲಿನಲ್ಲಿದ್ದಾರೆ.</p><p>ಸತ್ಯಮೇವ ಜಯತೆ: ಸಂಜಯ್ ಸಿಂಗ್ ಅವರಿಗೆ ಜಾಮೀನು ಸಿಕ್ಕ ನಂತರ ದೆಹಲಿ ಸಚಿವೆ ಆತಿಶಿ ಅವರು ತಮ್ಮ ‘ಎಕ್ಸ್’ನಲ್ಲಿ ‘ಸತ್ಯಮೇವ ಜಯತೆ’ ಎಂದು ಪ್ರತಿಕ್ರಿಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>