ಈ ಪ್ರಕರಣ ಡಿ. 31, 2017ರಲ್ಲಿ ಪುಣೆಯಲ್ಲಿ ನಡೆದಿದ್ದ ಎಲ್ಗಾರ್ ಪರಿಷತ್ ಸಭೆಗೆ ಸಂಬಂಧಿಸಿದ್ದಾಗಿದೆ. ಪೊಲೀಸರ ಪ್ರಕಾರ, ಈ ಸಭೆಗೆ ಮಾವೋವಾದಿಗಳು ಹಣಕಾಸು ನೆರವು ನೀಡಿದ್ದರು. ಸಭೆಯಲ್ಲಿ ಮಾಡಲಾಗಿದ್ದ ಪ್ರಚೋದನಕಾರಿ ಭಾಷಣದಿಂದಾಗಿ ಭೀಮಾ–ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಮಾರನೆ ದಿನ ಹಿಂಸಾತ್ಮಕ ಕೃತ್ಯಗಳು ನಡೆದವು ಎಂದೂ ಪೊಲೀಸರು ಆರೋಪಿಸಿದ್ದರು.