<p><strong>ನವದೆಹಲಿ</strong>: ದಿವಂಗತ ಗ್ಯಾಂಗ್ಸ್ಟರ್ ಮತ್ತು ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಮಗ ಉಮರ್ ಅನ್ಸಾರಿಗೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.</p><p>ಈ ಸಂಬಂಧ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪಿ.ಕೆ. ಮಿಶ್ರಾ ಅವರನ್ನೊಳಗೊಂಡ ಪೀಠ ಹೇಳಿದೆ.</p><p>ಜನವರಿ 25ರಂದು ಉಮರ್ ಅವರನ್ನು ಬಂಧಿಸದಂತೆ ನ್ಯಾಯಾಲಯ ಮಧ್ಯಂತರ ರಕ್ಷಣೆ ಒದಗಿಸಿತ್ತು.</p><p>ಕಳೆದ ವರ್ಷ ಡಿಸೆಂಬರ್ 19ರಂದು ಅನ್ಸಾರಿಗೆ ಜಾಮೀನು ನಿರಾಕರಿಸಿದ್ದ ಅಲಹಾಬಾದ್ ಹೈಕೋರ್ಟ್, ಸತ್ಯಾಂಶಗಳು ಮತ್ತು ಸಂದರ್ಭಗಳನ್ನು ಗಮನಿಸಿದರೆ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದು ಕಂಡುಬರುತ್ತಿದೆ ಎಂದು ಹೇಳಿತ್ತು.</p><p>ನೀತಿ ಸಂಹಿತೆಗೆ ಉಲ್ಲಂಘನೆಗೆ ಸಂಬಂಧಿಸಿದಂತೆ ಅಬ್ಬಾಸ್ ಅನ್ಸಾರಿ, ಉಮರ್ ಅನ್ಸಾರಿ ಮತ್ತು ಇತರೆ 150 ಮಂದಿ ವಿರುದ್ಧ 2022ರ ಮಾರ್ಚ್ 4ರಂದು ಉತ್ತರ ಪ್ರದೇಶದ ಮೌ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿತ್ತು.</p><p>ಜೈಲಿನಲ್ಲಿದ್ದ ಉಮರ್ ಅನ್ಸಾರಿ ತಂದೆ ಮುಖ್ತಾರ್ ಅನ್ಸಾರಿ ಇತ್ತೀಚೆಗೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದಿವಂಗತ ಗ್ಯಾಂಗ್ಸ್ಟರ್ ಮತ್ತು ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಮಗ ಉಮರ್ ಅನ್ಸಾರಿಗೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.</p><p>ಈ ಸಂಬಂಧ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪಿ.ಕೆ. ಮಿಶ್ರಾ ಅವರನ್ನೊಳಗೊಂಡ ಪೀಠ ಹೇಳಿದೆ.</p><p>ಜನವರಿ 25ರಂದು ಉಮರ್ ಅವರನ್ನು ಬಂಧಿಸದಂತೆ ನ್ಯಾಯಾಲಯ ಮಧ್ಯಂತರ ರಕ್ಷಣೆ ಒದಗಿಸಿತ್ತು.</p><p>ಕಳೆದ ವರ್ಷ ಡಿಸೆಂಬರ್ 19ರಂದು ಅನ್ಸಾರಿಗೆ ಜಾಮೀನು ನಿರಾಕರಿಸಿದ್ದ ಅಲಹಾಬಾದ್ ಹೈಕೋರ್ಟ್, ಸತ್ಯಾಂಶಗಳು ಮತ್ತು ಸಂದರ್ಭಗಳನ್ನು ಗಮನಿಸಿದರೆ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದು ಕಂಡುಬರುತ್ತಿದೆ ಎಂದು ಹೇಳಿತ್ತು.</p><p>ನೀತಿ ಸಂಹಿತೆಗೆ ಉಲ್ಲಂಘನೆಗೆ ಸಂಬಂಧಿಸಿದಂತೆ ಅಬ್ಬಾಸ್ ಅನ್ಸಾರಿ, ಉಮರ್ ಅನ್ಸಾರಿ ಮತ್ತು ಇತರೆ 150 ಮಂದಿ ವಿರುದ್ಧ 2022ರ ಮಾರ್ಚ್ 4ರಂದು ಉತ್ತರ ಪ್ರದೇಶದ ಮೌ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿತ್ತು.</p><p>ಜೈಲಿನಲ್ಲಿದ್ದ ಉಮರ್ ಅನ್ಸಾರಿ ತಂದೆ ಮುಖ್ತಾರ್ ಅನ್ಸಾರಿ ಇತ್ತೀಚೆಗೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>