<p><strong>ನವದೆಹಲಿ:</strong> ಅಶೋಕ ವಿಶ್ವವಿದ್ಯಾಲಯದ ಪ್ರೊ.ಅಲಿಖಾನ್ ಮಹಮೂದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.</p>.<p>ಆದರೆ, ಆಪರೇಷನ್ ಸಿಂಧೂರ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಬಂಧನಕ್ಕೊಳಗಾಗಿದ್ದ ಪ್ರೊಫೆಸರ್ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.</p>.<p>ಐಜಿ ಶ್ರೇಣಿಯ ಅಧಿಕಾರಿ ಮತ್ತು ಎಸ್ಪಿ ಶ್ರೇಣಿಯ ಮಹಿಳಾ ಅಧಿಕಾರಿ ಸೇರಿದಂತೆ ಮೂವರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) 24 ಗಂಟೆಗಳೊಳಗಾಗಿ ರಚಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟೇಶ್ವರ ಸಿಂಗ್ ಅವರನ್ನೊಳಗೊಂಡ ಪೀಠವು ಹರಿಯಾಣ ಡಿಜಿಪಿಗೆ ನಿರ್ದೇಶಿಸಿದೆ.</p>.<p>ಪ್ರೊಫೆಸರ್ ಅವರ ಪೋಸ್ಟ್ಗಳನ್ನು ಪರಾಮರ್ಶಿಸಿದ ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು. ಸಾಮಾಜಿಕ ಜಾಲತಾಣಗಳಲ್ಲಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಯಾವುದೇ ಸಂದೇಶ ಬರೆಯಕೂಡದು ಎಂದು ತಾಕೀತು ಮಾಡಿತು.</p>.<p>ಎಸ್ಐಟಿ ತನಿಖೆಗೆ ಸಹಕರಿಸುವಂತೆ ಸೂಚಿಸಿರುವ ನ್ಯಾಯಾಲಯವು ಪಾಸ್ಪೋರ್ಟ್ ಒಪ್ಪಿಸುವಂತೆ ನಿರ್ದೇಶಿಸಿದೆ.</p>.<p>ಅಲಿಖಾನ್ಗೆ ಸೋನಿಪತ್ನ ನ್ಯಾಯಾಲಯವು ಮಂಗಳವಾರ ಮೇ 27ರವರೆಗೂ ನ್ಯಾಯಾಂಗ ಬಂಧನ ವಿಧಿಸಿತ್ತು.</p>.<p>ಆಯೋಗದಿಂದ ನೋಟಿಸ್: ಪ್ರೊಫೆಸರ್ ಬಂಧನದ ಬಗ್ಗೆ ವಾರದೊಳಗೆ ವರದಿ ನೀಡುವಂತೆ ಹರಿಯಾಣ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ತಿಳಿಸಿದೆ.</p>.<p>ಮಾಧ್ಯಮ ವರದಿಗಳ ಆಧಾರದಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗಿರುವುದು ಕಂಡುಬಂದಿದ್ದು, ಸ್ವಯಂಪ್ರೇರಿತವಾಗಿ ಈ ಪ್ರಕರಣ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದೆ.</p>.<p><strong>ಸಮಾಧಾನಕರ</strong></p>.<p>ಸೋನಿಪತ್ (ಹರಿಯಾಣ): ಪ್ರೊಫೆಸರ್ಗೆ ಜಾಮೀನು ಸಿಕ್ಕಿದ್ದು ‘ಸಮಾಧಾನಕರ’ ಮತ್ತು ‘ಹೃದಯಸ್ಪರ್ಶಿ’ಯಾಗಿದೆ ಎಂದು ಅಶೋಕ ವಿಶ್ವವಿದ್ಯಾಲಯ ಹೇಳಿದೆ.</p>.<p>‘ಜಾಮೀನು ದೊರೆತಿದ್ದರಿಂದ ಅಲಿಖಾನ್ ಕುಟುಂಬಕ್ಕೆ ಹಾಗೂ ವಿಶ್ವವಿದ್ಯಾಲಯದ ನಮ್ಮೆಲ್ಲರಲ್ಲೂ ಸಮಾಧಾನ ಮೂಡಿದೆ’ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಶೋಕ ವಿಶ್ವವಿದ್ಯಾಲಯದ ಪ್ರೊ.ಅಲಿಖಾನ್ ಮಹಮೂದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.</p>.<p>ಆದರೆ, ಆಪರೇಷನ್ ಸಿಂಧೂರ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಬಂಧನಕ್ಕೊಳಗಾಗಿದ್ದ ಪ್ರೊಫೆಸರ್ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.</p>.<p>ಐಜಿ ಶ್ರೇಣಿಯ ಅಧಿಕಾರಿ ಮತ್ತು ಎಸ್ಪಿ ಶ್ರೇಣಿಯ ಮಹಿಳಾ ಅಧಿಕಾರಿ ಸೇರಿದಂತೆ ಮೂವರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) 24 ಗಂಟೆಗಳೊಳಗಾಗಿ ರಚಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟೇಶ್ವರ ಸಿಂಗ್ ಅವರನ್ನೊಳಗೊಂಡ ಪೀಠವು ಹರಿಯಾಣ ಡಿಜಿಪಿಗೆ ನಿರ್ದೇಶಿಸಿದೆ.</p>.<p>ಪ್ರೊಫೆಸರ್ ಅವರ ಪೋಸ್ಟ್ಗಳನ್ನು ಪರಾಮರ್ಶಿಸಿದ ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು. ಸಾಮಾಜಿಕ ಜಾಲತಾಣಗಳಲ್ಲಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಯಾವುದೇ ಸಂದೇಶ ಬರೆಯಕೂಡದು ಎಂದು ತಾಕೀತು ಮಾಡಿತು.</p>.<p>ಎಸ್ಐಟಿ ತನಿಖೆಗೆ ಸಹಕರಿಸುವಂತೆ ಸೂಚಿಸಿರುವ ನ್ಯಾಯಾಲಯವು ಪಾಸ್ಪೋರ್ಟ್ ಒಪ್ಪಿಸುವಂತೆ ನಿರ್ದೇಶಿಸಿದೆ.</p>.<p>ಅಲಿಖಾನ್ಗೆ ಸೋನಿಪತ್ನ ನ್ಯಾಯಾಲಯವು ಮಂಗಳವಾರ ಮೇ 27ರವರೆಗೂ ನ್ಯಾಯಾಂಗ ಬಂಧನ ವಿಧಿಸಿತ್ತು.</p>.<p>ಆಯೋಗದಿಂದ ನೋಟಿಸ್: ಪ್ರೊಫೆಸರ್ ಬಂಧನದ ಬಗ್ಗೆ ವಾರದೊಳಗೆ ವರದಿ ನೀಡುವಂತೆ ಹರಿಯಾಣ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ತಿಳಿಸಿದೆ.</p>.<p>ಮಾಧ್ಯಮ ವರದಿಗಳ ಆಧಾರದಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗಿರುವುದು ಕಂಡುಬಂದಿದ್ದು, ಸ್ವಯಂಪ್ರೇರಿತವಾಗಿ ಈ ಪ್ರಕರಣ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದೆ.</p>.<p><strong>ಸಮಾಧಾನಕರ</strong></p>.<p>ಸೋನಿಪತ್ (ಹರಿಯಾಣ): ಪ್ರೊಫೆಸರ್ಗೆ ಜಾಮೀನು ಸಿಕ್ಕಿದ್ದು ‘ಸಮಾಧಾನಕರ’ ಮತ್ತು ‘ಹೃದಯಸ್ಪರ್ಶಿ’ಯಾಗಿದೆ ಎಂದು ಅಶೋಕ ವಿಶ್ವವಿದ್ಯಾಲಯ ಹೇಳಿದೆ.</p>.<p>‘ಜಾಮೀನು ದೊರೆತಿದ್ದರಿಂದ ಅಲಿಖಾನ್ ಕುಟುಂಬಕ್ಕೆ ಹಾಗೂ ವಿಶ್ವವಿದ್ಯಾಲಯದ ನಮ್ಮೆಲ್ಲರಲ್ಲೂ ಸಮಾಧಾನ ಮೂಡಿದೆ’ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>