ಅಸ್ತಾನಾ ಸೇರಿ ಸಿಬಿಐನ ವಿವಿಧ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಆರೋಪಗಳ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಮತ್ತು ನ್ಯಾಯಾಲಯದ ಉಸ್ತುವಾರಿಯಲ್ಲಿ ಈ ತನಿಖೆ ನಡೆಯಬೇಕು ಎಂದುಕಾಮನ್ ಕಾಸ್ ಎನ್ಜಿಒ ಸಲ್ಲಿಸಿದ ಅರ್ಜಿಯನ್ನೂ ಪೀಠವು ವಿಚಾರಣೆಗೆ ಎತ್ತಿಕೊಂಡಿದೆ. ನವೆಂಬರ್ 12 ರೊಳಗೆ ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ, ಸಿಬಿಐ, ಸಿವಿಸಿ, ಅಸ್ತಾನಾ, ಅಲೋಕ್ ಮತ್ತು ರಾವ್ ಅವರಿಗೆ ಪೀಠವು ನೋಟಿಸ್ ನೀಡಿದೆ.