<p><strong>ನವದೆಹಲಿ:</strong> ನ್ಯಾಯಮಂಡಳಿ ಸುಧಾರಣೆಗಳು (ಸರಳೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ಐವರು ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಬೇಕು ಎಂದು ಕೋರಿದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗುರುವಾರ ಸಿಟ್ಟಿಗೆದ್ದಿತು.</p>.<p>‘ಕೇಂದ್ರ ಸರ್ಕಾರದ ಇಂಥ ತಂತ್ರಗಳನ್ನು ನಾವು ಒಪ್ಪುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಪೀಠವು ಎಚ್ಚರಿಕೆ ನೀಡಿತು. ‘ಈ ಅರ್ಜಿಗಳ ವಿಚಾರಣೆಯನ್ನು ನಮ್ಮ ಈ ಪೀಠ ನಡೆಸುವುದು ಕೇಂದ್ರ ಸರ್ಕಾರಕ್ಕೆ ಇಷ್ಟವಿದ್ದಂತೆ ಇಲ್ಲ. ಆದ್ದರಿಂದ ನಮ್ಮನ್ನು ತಪ್ಪಿಸಿ ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಕೇಳುತ್ತಿದೆ’ ಎಂದು ಸಿಜಿಐ ಅಭಿಪ್ರಾಯಪಟ್ಟರು.</p>.<p>‘ಬೇರೆ ಪ್ರಕರಣಗಳಲ್ಲಿ ಅಟಾರ್ನಿ ಜನರಲ್ ಅವರು ವ್ಯಸ್ತರಾಗಿದ್ದಾರೆ. ಆದ್ದರಿಂದ ವಿಚಾರಣೆಯನ್ನು ಮುಂದೂಡಿ’ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಪೀಠಕ್ಕೆ ಮನವಿ ಮಾಡಿದರು. ‘ಈ ರೀತಿಯ ವರ್ತನೆ ಸರಿಯಲ್ಲ. ನಾವು ಅವರಿಗೆ ಸಾಕಷ್ಟು ಸಮಯ ನೀಡಿದ್ದೇವೆ’ ಎಂದು ಸಿಜೆಐ ಹೇಳಿದರು.</p>.<p>2021ರಂದು ಜಾರಿಗೊಂಡ ಈ ಕಾಯ್ದೆಯ ಅನ್ವಯ, ಹಲವು ರೀತಿಯ ನ್ಯಾಯಮಂಡಳಿಗಳು ರದ್ದಾಗಿವೆ. ಈ ನ್ಯಾಯಮಂಡಳಿಗಳ ನ್ಯಾಯಾಂಗ ಮತ್ತು ಇತರ ಸದಸ್ಯರ ನೇಮಕ ಮತ್ತು ಕಾರ್ಯಾವಧಿಯಲ್ಲಿ ಹಲವು ಬದಲಾವಣೆಗಳನ್ನು ಈ ಕಾಯ್ದೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನ್ಯಾಯಮಂಡಳಿ ಸುಧಾರಣೆಗಳು (ಸರಳೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ಐವರು ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಬೇಕು ಎಂದು ಕೋರಿದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗುರುವಾರ ಸಿಟ್ಟಿಗೆದ್ದಿತು.</p>.<p>‘ಕೇಂದ್ರ ಸರ್ಕಾರದ ಇಂಥ ತಂತ್ರಗಳನ್ನು ನಾವು ಒಪ್ಪುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಪೀಠವು ಎಚ್ಚರಿಕೆ ನೀಡಿತು. ‘ಈ ಅರ್ಜಿಗಳ ವಿಚಾರಣೆಯನ್ನು ನಮ್ಮ ಈ ಪೀಠ ನಡೆಸುವುದು ಕೇಂದ್ರ ಸರ್ಕಾರಕ್ಕೆ ಇಷ್ಟವಿದ್ದಂತೆ ಇಲ್ಲ. ಆದ್ದರಿಂದ ನಮ್ಮನ್ನು ತಪ್ಪಿಸಿ ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಕೇಳುತ್ತಿದೆ’ ಎಂದು ಸಿಜಿಐ ಅಭಿಪ್ರಾಯಪಟ್ಟರು.</p>.<p>‘ಬೇರೆ ಪ್ರಕರಣಗಳಲ್ಲಿ ಅಟಾರ್ನಿ ಜನರಲ್ ಅವರು ವ್ಯಸ್ತರಾಗಿದ್ದಾರೆ. ಆದ್ದರಿಂದ ವಿಚಾರಣೆಯನ್ನು ಮುಂದೂಡಿ’ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಪೀಠಕ್ಕೆ ಮನವಿ ಮಾಡಿದರು. ‘ಈ ರೀತಿಯ ವರ್ತನೆ ಸರಿಯಲ್ಲ. ನಾವು ಅವರಿಗೆ ಸಾಕಷ್ಟು ಸಮಯ ನೀಡಿದ್ದೇವೆ’ ಎಂದು ಸಿಜೆಐ ಹೇಳಿದರು.</p>.<p>2021ರಂದು ಜಾರಿಗೊಂಡ ಈ ಕಾಯ್ದೆಯ ಅನ್ವಯ, ಹಲವು ರೀತಿಯ ನ್ಯಾಯಮಂಡಳಿಗಳು ರದ್ದಾಗಿವೆ. ಈ ನ್ಯಾಯಮಂಡಳಿಗಳ ನ್ಯಾಯಾಂಗ ಮತ್ತು ಇತರ ಸದಸ್ಯರ ನೇಮಕ ಮತ್ತು ಕಾರ್ಯಾವಧಿಯಲ್ಲಿ ಹಲವು ಬದಲಾವಣೆಗಳನ್ನು ಈ ಕಾಯ್ದೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>