ಪರಮ್ವೀರ್ ಸಿಂಗ್ ಅವರು ತಾವು ಮುಂಬೈ ಪೊಲೀಸ್ ಕಮಿಷನರ್ ಆಗಿದ್ದ ವೇಳೆ, ಗೃಹ ಸಚಿವರಾಗಿದ್ದ ಅನಿಲ್ ದೇಶಮುಖ್ ಅವರು ಹಣ ವಸೂಲಿಗೆ ಸೂಚಿಸಿದ್ದರು ಹಾಗೂ ಭ್ರಷ್ಟಾಚಾರ ಎಸಗಿದ್ದರು ಎಂದು ಆರೋಪ ಮಾಡಿದ್ದರು. ನಂತರ ಮಾರ್ಚ್ 17ರಂದು ಸಿಂಗ್ ಅವರನ್ನು ಕಮಿಷನರ್ ಹುದ್ದೆಯಿಂದ ತೆಗೆದು ಹಾಕಿದ್ದ ಮಹಾರಾಷ್ಟ್ರ ಸರ್ಕಾರ, ಅವರನ್ನು ಗೃಹರಕ್ಷಕ ದಳದ ಜನರಲ್ ಕಮಾಂಡರ್ ಹುದ್ದೆಗೆ ವರ್ಗಾಯಿಸಿತ್ತು.