<p><strong>ನವದೆಹಲಿ:</strong> ಸಂಸ್ಥೆಯ ಉಪಾಧ್ಯಕ್ಷರಾದ ಅಜಿತ್ ಮೋಹನ್ ಅವರಿಗೆ ಸಮನ್ಸ್ ನೀಡಿರುವುದನ್ನು ಪ್ರಶ್ನಿಸಿಫೇಸ್ಬುಕ್ ಇಂಡಿಯಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ದೆಹಲಿ ವಿಧಾನಸಭೆ ಕಾರ್ಯದರ್ಶಿಯವರಿಗೆ ಬುಧವಾರ ನೋಟಿಸ್ ನೀಡಿದೆ.</p>.<p>ಕಳೆದ ಫೆಬ್ರುವರಿಯಲ್ಲಿ ನಡೆದ ದೆಹಲಿ ಗಲಭೆಯಲ್ಲಿ ಫೇಸ್ಬುಕ್ ಕೂಡಾ ಶಾಮೀಲಾಗಿತ್ತು ಎನ್ನುವ ಆರೋಪದಡಿ ವಿಚಾರಣೆಗೆ ಹಾಜರಾಗಲು ಅಜಿತ್ ಮೋಹನ್ಗೆ ವಿಧಾನಸಭೆ ಕಾರ್ಯದರ್ಶಿಯವರು ಸೆ.18ರಂದು ಸೂಚಿಸಿದ್ದರು. ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲರಾದ ಹರೀಶ್ ಸಾಳ್ವೆ, ‘ಮಾತನಾಡುವಂತೆ ಅರ್ಜಿದಾರರ ಮೇಲೆ ಒತ್ತಡ ಹೇರಿದರೆ, ಸಂವಿಧಾನದ ವಿಧಿ 19 ಹಾಗೂ 21ರಡಿ ನೀಡಿರುವ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ. ವಾಕ್ಸ್ವಾಂತಂತ್ರ್ಯದಲ್ಲಿ ಮಾತನಾಡದೇ ಇರುವ ಹಕ್ಕನ್ನೂ ನೀಡಲಾಗಿದೆ’ ಎಂದರು.</p>.<p>ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಪರವಾಗಿ ವಾದಿಸಿದ ಹಿರಿಯ ವಕೀಲ ಎ.ಎಂ.ಸಿಂಘ್ವಿ, ‘ಪ್ರಕರಣದಲ್ಲಿ ನ್ಯಾಯಾಲಯವು ತೀರ್ಪು ಪ್ರಕಟಿಸುವವರೆಗೂ ಯಾವುದೇ ನಿರ್ಬಂಧದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ’ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರಿದ್ದ ಪೀಠಕ್ಕೆ ತಿಳಿಸಿದರು. ಜೊತೆಗೆ ‘ಫೇಸ್ಬುಕ್ ಅಧಿಕಾರಿಗೆ ಸಾಕ್ಷಿದಾರರಾಗಿ ನೋಟಿಸ್ ನೀಡಲಾಗಿದೆಯೇ ವಿನಃ ಆರೋಪಿಯಾಗಿ ಅಲ್ಲ’ ಎಂದು ಸಿಂಘ್ವಿ ಪೀಠಕ್ಕೆ ಸ್ಪಷ್ಟನೆ ನೀಡಿದರು.</p>.<p>ತಮ್ಮ ನಿಲುವಿನ ಕುರಿತು ಸ್ಪಷ್ಟನೆಯನ್ನು ಅಫಿಡಾವಿಟ್ ಮುಖಾಂತರ ಒಂದು ವಾರದೊಳಗೆ ಸಲ್ಲಿಸಲು ಸಿಂಘ್ವಿ ಅವರಿಗೆ ಸೂಚಿಸಿದ ಪೀಠ, ವಿಚಾರಣೆಯನ್ನು ಅ.15ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂಸ್ಥೆಯ ಉಪಾಧ್ಯಕ್ಷರಾದ ಅಜಿತ್ ಮೋಹನ್ ಅವರಿಗೆ ಸಮನ್ಸ್ ನೀಡಿರುವುದನ್ನು ಪ್ರಶ್ನಿಸಿಫೇಸ್ಬುಕ್ ಇಂಡಿಯಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ದೆಹಲಿ ವಿಧಾನಸಭೆ ಕಾರ್ಯದರ್ಶಿಯವರಿಗೆ ಬುಧವಾರ ನೋಟಿಸ್ ನೀಡಿದೆ.</p>.<p>ಕಳೆದ ಫೆಬ್ರುವರಿಯಲ್ಲಿ ನಡೆದ ದೆಹಲಿ ಗಲಭೆಯಲ್ಲಿ ಫೇಸ್ಬುಕ್ ಕೂಡಾ ಶಾಮೀಲಾಗಿತ್ತು ಎನ್ನುವ ಆರೋಪದಡಿ ವಿಚಾರಣೆಗೆ ಹಾಜರಾಗಲು ಅಜಿತ್ ಮೋಹನ್ಗೆ ವಿಧಾನಸಭೆ ಕಾರ್ಯದರ್ಶಿಯವರು ಸೆ.18ರಂದು ಸೂಚಿಸಿದ್ದರು. ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲರಾದ ಹರೀಶ್ ಸಾಳ್ವೆ, ‘ಮಾತನಾಡುವಂತೆ ಅರ್ಜಿದಾರರ ಮೇಲೆ ಒತ್ತಡ ಹೇರಿದರೆ, ಸಂವಿಧಾನದ ವಿಧಿ 19 ಹಾಗೂ 21ರಡಿ ನೀಡಿರುವ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ. ವಾಕ್ಸ್ವಾಂತಂತ್ರ್ಯದಲ್ಲಿ ಮಾತನಾಡದೇ ಇರುವ ಹಕ್ಕನ್ನೂ ನೀಡಲಾಗಿದೆ’ ಎಂದರು.</p>.<p>ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಪರವಾಗಿ ವಾದಿಸಿದ ಹಿರಿಯ ವಕೀಲ ಎ.ಎಂ.ಸಿಂಘ್ವಿ, ‘ಪ್ರಕರಣದಲ್ಲಿ ನ್ಯಾಯಾಲಯವು ತೀರ್ಪು ಪ್ರಕಟಿಸುವವರೆಗೂ ಯಾವುದೇ ನಿರ್ಬಂಧದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ’ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರಿದ್ದ ಪೀಠಕ್ಕೆ ತಿಳಿಸಿದರು. ಜೊತೆಗೆ ‘ಫೇಸ್ಬುಕ್ ಅಧಿಕಾರಿಗೆ ಸಾಕ್ಷಿದಾರರಾಗಿ ನೋಟಿಸ್ ನೀಡಲಾಗಿದೆಯೇ ವಿನಃ ಆರೋಪಿಯಾಗಿ ಅಲ್ಲ’ ಎಂದು ಸಿಂಘ್ವಿ ಪೀಠಕ್ಕೆ ಸ್ಪಷ್ಟನೆ ನೀಡಿದರು.</p>.<p>ತಮ್ಮ ನಿಲುವಿನ ಕುರಿತು ಸ್ಪಷ್ಟನೆಯನ್ನು ಅಫಿಡಾವಿಟ್ ಮುಖಾಂತರ ಒಂದು ವಾರದೊಳಗೆ ಸಲ್ಲಿಸಲು ಸಿಂಘ್ವಿ ಅವರಿಗೆ ಸೂಚಿಸಿದ ಪೀಠ, ವಿಚಾರಣೆಯನ್ನು ಅ.15ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>