<p><strong>ನವದೆಹಲಿ:</strong> ಸೂಕ್ಷ್ಮ ಎನ್ನಲಾಗಿದ್ದ ವಿಡಿಯೊ ಅಪ್ಲೋಡ್ಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ದಾಖಲಿಸಲು ಸೂಚಿಸಿ ಟ್ವಿಟರ್ನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಅನ್ನು ಜಾರಿ ಮಾಡಿತು</p>.<p class="bodytext">ತನಿಖೆಗೆ ವ್ಯಕ್ತಿಗತವಾಗಿ ಹಾಜರಾಗಬೇಕು ಎಂದು ಸೂಚಿಸಿ ಹೊರಡಿಸಿದ್ದ ತನ್ನ ಆದೇಶವನ್ನು ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ನ ನಿರ್ಧಾರ ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿತ್ತು.</p>.<p class="bodytext">ಮುಖ್ಯ ನ್ಯಾಯಮೂರ್ತಿ ಎನ್.ವಿರಮಣ ನೇತೃತ್ವದ ಪೀಠವು, ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲ್ಲಿಸಿದ್ದ ಪ್ರತಿಕ್ರಿಯೆಯನ್ನು ಪರಿಗಣಿಸಿತು. ಮನೀಶ್ ಮಹೇಶ್ವರಿ ಅವರನ್ನು ಟ್ವಿಟರ್ ಆಡಳಿತವು ಇದೇ ವರ್ಷದ ಆಗಸ್ಟ್ ತಿಂಗಳಲ್ಲಿ ಅಮೆರಿಕಕ್ಕೆ ವರ್ಗಾವಣೆ ಮಾಡಿತ್ತು.</p>.<p class="bodytext">ನಾವು ನೋಟಿಸ್ ನೀಡುತ್ತೇವೆ. ಪ್ರಕರಣದ ವಿಚಾರಣೆ ಆಗಬೇಕಾಗಿದೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರೂ ಇದ್ದ ಪೀಠ ಅಭಿಪ್ರಾಯಪಟ್ಟಿತು.</p>.<p class="bodytext">ಈ ಹಿಂದೆ ಉತ್ತರ ಪ್ರದೇಶದ ಸರ್ಕಾರವು ಗಾಜಿಯಾಬಾದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮೂಲಕ ಪ್ರಕರಣದ ತುರ್ತು ವಿಚಾರಣೆ ಕೋರಿ ಅರ್ಜಿಯನ್ನು ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸೂಕ್ಷ್ಮ ಎನ್ನಲಾಗಿದ್ದ ವಿಡಿಯೊ ಅಪ್ಲೋಡ್ಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ದಾಖಲಿಸಲು ಸೂಚಿಸಿ ಟ್ವಿಟರ್ನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಅನ್ನು ಜಾರಿ ಮಾಡಿತು</p>.<p class="bodytext">ತನಿಖೆಗೆ ವ್ಯಕ್ತಿಗತವಾಗಿ ಹಾಜರಾಗಬೇಕು ಎಂದು ಸೂಚಿಸಿ ಹೊರಡಿಸಿದ್ದ ತನ್ನ ಆದೇಶವನ್ನು ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ನ ನಿರ್ಧಾರ ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿತ್ತು.</p>.<p class="bodytext">ಮುಖ್ಯ ನ್ಯಾಯಮೂರ್ತಿ ಎನ್.ವಿರಮಣ ನೇತೃತ್ವದ ಪೀಠವು, ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲ್ಲಿಸಿದ್ದ ಪ್ರತಿಕ್ರಿಯೆಯನ್ನು ಪರಿಗಣಿಸಿತು. ಮನೀಶ್ ಮಹೇಶ್ವರಿ ಅವರನ್ನು ಟ್ವಿಟರ್ ಆಡಳಿತವು ಇದೇ ವರ್ಷದ ಆಗಸ್ಟ್ ತಿಂಗಳಲ್ಲಿ ಅಮೆರಿಕಕ್ಕೆ ವರ್ಗಾವಣೆ ಮಾಡಿತ್ತು.</p>.<p class="bodytext">ನಾವು ನೋಟಿಸ್ ನೀಡುತ್ತೇವೆ. ಪ್ರಕರಣದ ವಿಚಾರಣೆ ಆಗಬೇಕಾಗಿದೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರೂ ಇದ್ದ ಪೀಠ ಅಭಿಪ್ರಾಯಪಟ್ಟಿತು.</p>.<p class="bodytext">ಈ ಹಿಂದೆ ಉತ್ತರ ಪ್ರದೇಶದ ಸರ್ಕಾರವು ಗಾಜಿಯಾಬಾದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮೂಲಕ ಪ್ರಕರಣದ ತುರ್ತು ವಿಚಾರಣೆ ಕೋರಿ ಅರ್ಜಿಯನ್ನು ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>