<p><strong>ನವದೆಹಲಿ:</strong> 2021ರಲ್ಲೇ ನಡೆಯಬೇಕಿದ್ದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ‘ಸಿಬ್ಬಂದಿ ಶ್ರೇಣಿ ಪರಿಶೀಲನಾ’ ಕಾರ್ಯವನ್ನು ಆರು ತಿಂಗಳಲ್ಲಿ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.</p>.<p>ಇದರ ಅನ್ವಯ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಾದ ಐಟಿಬಿಪಿ, ಬಿಎಸ್ಎಫ್, ಸಿಆರ್ಪಿಎಫ್, ಸಿಐಎಸ್ಎಫ್ ಮತ್ತು ಎಸ್ಎಸ್ಬಿಯ ‘ಸಿಬ್ಬಂದಿ ಶ್ರೇಣಿ ಪರಿಶೀಲನಾ’ ಕಾರ್ಯ ನಡೆಯಬೇಕಿದೆ.</p>.<p>ಸಿಬ್ಬಂದಿ ಶ್ರೇಣಿ ಪರಿಶೀಲನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಕ್ರಮ ಕೈಗೊಂಡ ವರದಿ ನೀಡಿದ ಮೂರು ತಿಂಗಳಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ, ಈಗ ಜಾರಿಯಲ್ಲಿರುವ ಸೇವಾ ನಿಯಮಗಳು ಮತ್ತು ನೇಮಕಾತಿ ನಿಯಮಗಳ ಬಗ್ಗೆ ಅವಲೋಕನ ನಡೆಸಬೇಕಿದೆ.</p>.<p class="title">ದೇಶದ ಗಡಿಗಳಲ್ಲಿ ಭದ್ರತೆಯನ್ನು ಕಾಪಾಡುವಲ್ಲಿ ಹಾಗೂ ಆಂತರಿಕ ಭದ್ರತೆಗೆ ಸಂಬಂಧಿಸಿದ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸಿಎಪಿಎಫ್ನ ಹೊಣೆಯು ಮಹತ್ವದ್ದು ಎಂದು ನ್ಯಾಯಾಲಯ ಹೇಳಿದೆ.</p>.<p class="title">ಸಿಎಪಿಎಫ್ ಸಿಬ್ಬಂದಿಯು ಬಹಳ ಸವಾಲಿನ ಪರಿಸ್ಥಿತಿಗಳಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಆದರೆ, ಉನ್ನತ ಶ್ರೇಣಿಗಳಿಗೆ ಅಧಿಕಾರಿಗಳನ್ನು ಬೇರೆ ಕಡೆಗಳಿಂದ ನೇರವಾಗಿ ನೇಮಕ ಮಾಡಿಕೊಳ್ಳುವುದರ ಪರಿಣಾಮವಾಗಿ ತಮಗೆ ಸಕಾಲದಲ್ಲಿ ಬಡ್ತಿ ಸಿಗುತ್ತಿಲ್ಲ ಎಂಬ ಆಕ್ಷೇಪ ಸಿಎಪಿಎಫ್ ಸಿಬ್ಬಂದಿಯದ್ದಾಗಿದೆ ಎಂದು ಅದು ಹೇಳಿದೆ.</p>.<p class="title">‘ಈ ಸಶಸ್ತ್ರ ಪಡೆಗಳ ಸಿಬ್ಬಂದಿಯ ಸ್ಥಿತಿ ನಿಂತ ನೀರಿನಂತೆ ಆಗಿದೆ. ಇದು ಅವರ ನೈತಿಕ ಸ್ಥೈರ್ಯದ ಮೇಲೆ ಪರಿಣಾಮ ಉಂಟುಮಾಡಬಹುದು’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2021ರಲ್ಲೇ ನಡೆಯಬೇಕಿದ್ದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ‘ಸಿಬ್ಬಂದಿ ಶ್ರೇಣಿ ಪರಿಶೀಲನಾ’ ಕಾರ್ಯವನ್ನು ಆರು ತಿಂಗಳಲ್ಲಿ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.</p>.<p>ಇದರ ಅನ್ವಯ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಾದ ಐಟಿಬಿಪಿ, ಬಿಎಸ್ಎಫ್, ಸಿಆರ್ಪಿಎಫ್, ಸಿಐಎಸ್ಎಫ್ ಮತ್ತು ಎಸ್ಎಸ್ಬಿಯ ‘ಸಿಬ್ಬಂದಿ ಶ್ರೇಣಿ ಪರಿಶೀಲನಾ’ ಕಾರ್ಯ ನಡೆಯಬೇಕಿದೆ.</p>.<p>ಸಿಬ್ಬಂದಿ ಶ್ರೇಣಿ ಪರಿಶೀಲನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಕ್ರಮ ಕೈಗೊಂಡ ವರದಿ ನೀಡಿದ ಮೂರು ತಿಂಗಳಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ, ಈಗ ಜಾರಿಯಲ್ಲಿರುವ ಸೇವಾ ನಿಯಮಗಳು ಮತ್ತು ನೇಮಕಾತಿ ನಿಯಮಗಳ ಬಗ್ಗೆ ಅವಲೋಕನ ನಡೆಸಬೇಕಿದೆ.</p>.<p class="title">ದೇಶದ ಗಡಿಗಳಲ್ಲಿ ಭದ್ರತೆಯನ್ನು ಕಾಪಾಡುವಲ್ಲಿ ಹಾಗೂ ಆಂತರಿಕ ಭದ್ರತೆಗೆ ಸಂಬಂಧಿಸಿದ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸಿಎಪಿಎಫ್ನ ಹೊಣೆಯು ಮಹತ್ವದ್ದು ಎಂದು ನ್ಯಾಯಾಲಯ ಹೇಳಿದೆ.</p>.<p class="title">ಸಿಎಪಿಎಫ್ ಸಿಬ್ಬಂದಿಯು ಬಹಳ ಸವಾಲಿನ ಪರಿಸ್ಥಿತಿಗಳಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಆದರೆ, ಉನ್ನತ ಶ್ರೇಣಿಗಳಿಗೆ ಅಧಿಕಾರಿಗಳನ್ನು ಬೇರೆ ಕಡೆಗಳಿಂದ ನೇರವಾಗಿ ನೇಮಕ ಮಾಡಿಕೊಳ್ಳುವುದರ ಪರಿಣಾಮವಾಗಿ ತಮಗೆ ಸಕಾಲದಲ್ಲಿ ಬಡ್ತಿ ಸಿಗುತ್ತಿಲ್ಲ ಎಂಬ ಆಕ್ಷೇಪ ಸಿಎಪಿಎಫ್ ಸಿಬ್ಬಂದಿಯದ್ದಾಗಿದೆ ಎಂದು ಅದು ಹೇಳಿದೆ.</p>.<p class="title">‘ಈ ಸಶಸ್ತ್ರ ಪಡೆಗಳ ಸಿಬ್ಬಂದಿಯ ಸ್ಥಿತಿ ನಿಂತ ನೀರಿನಂತೆ ಆಗಿದೆ. ಇದು ಅವರ ನೈತಿಕ ಸ್ಥೈರ್ಯದ ಮೇಲೆ ಪರಿಣಾಮ ಉಂಟುಮಾಡಬಹುದು’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>