<p><strong>ನವದೆಹಲಿ: </strong>ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿರುವ ವೈಎಸ್ಆರ್ ಕಾಂಗ್ರೆಸ್ನ ಬಂಡಾಯ ಸಂಸದ ಕೆ. ರಘು ರಾಮಕೃಷ್ಣ ರಾಜು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ತೆಲಂಗಾಣದ ಸಿಕಂದರಾಬಾದ್ನ ಸೇನಾ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಸುಪ್ರೀಂ ಕೋರ್ಟ್ ಸೋಮವಾರ ಆದೇಶ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಬಿ.ಆರ್. ಗವಾಯಿ ಅವರನ್ನೊಳಗೊಂಡ ರಜಾಕಾಲದ ಪೀಠವು ರಾಜು ಅವರನ್ನು ಮುಂದಿನ ಆದೇಶದವರೆಗೆ ಸಿಕಂದರಾಬಾದ್ನ ಸೇನಾ ಆಸ್ಪತ್ರೆಯಲ್ಲಿರಿಸಬೇಕೆಂದು ನಿರ್ದೇಶನ ನೀಡಿದೆ.</p>.<p>ತೆಲಂಗಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯವರಿಂದ ನೇಮಕವಾಗಿರುವ ನ್ಯಾಯಾಂಗ ಅಧಿಕಾರಿಯ ಸಮ್ಮುಖದಲ್ಲೇ ರಾಜು ಅವರ ವೈದ್ಯಕೀಯ ಪರೀಕ್ಷೆ ನಡೆಯಬೇಕೆಂದೂ ನ್ಯಾಯಪೀಠವು ಆದೇಶಿಸಿದೆ.</p>.<p>ಸೇನಾ ಆಸ್ಪತ್ರೆಯ ಮುಖ್ಯಸ್ಥರ ನೇತೃತ್ವದಲ್ಲಿ ಮೂವರು ವೈದ್ಯರ ಮಂಡಳಿಯು ರಾಜು ಅವರ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಿದೆ. ವೈದ್ಯಕೀಯ ಪರೀಕ್ಷೆಯ ವಿಡಿಯೊ ಚಿತ್ರೀಕರಣ ಮಾಡಿ ಅದರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ತಲುಪಿಸಬೇಕೆಂದು ನ್ಯಾಯಾಲಯವು ನಿರ್ದೇಶಿಸಿದೆ.</p>.<p>ದೆಹಲಿ ಹೈಕೋರ್ಟ್ ನಿರ್ದೇಶನದಂತೆ ರಾಜು ಅವರಿಗೆ ವೈ ಶ್ರೇಣಿಯ ಭದ್ರತೆಯನ್ನು ಒದಗಿಸಬೇಕೆಂದು ಸುಪ್ರೀಂ ಕೋರ್ಟ್ ತಿಳಿಸಿದೆ. </p>.<p>ತಮಗೆ ವೈ ಶ್ರೇಣಿಯ ಭದ್ರತೆ ಒದಗಿಸಬೇಕೆಂದು ಕೋರಿ ರಾಜು ಅವರು ಕಳೆದ ವರ್ಷ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿರುವ ವೈಎಸ್ಆರ್ ಕಾಂಗ್ರೆಸ್ನ ಬಂಡಾಯ ಸಂಸದ ಕೆ. ರಘು ರಾಮಕೃಷ್ಣ ರಾಜು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ತೆಲಂಗಾಣದ ಸಿಕಂದರಾಬಾದ್ನ ಸೇನಾ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಸುಪ್ರೀಂ ಕೋರ್ಟ್ ಸೋಮವಾರ ಆದೇಶ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಬಿ.ಆರ್. ಗವಾಯಿ ಅವರನ್ನೊಳಗೊಂಡ ರಜಾಕಾಲದ ಪೀಠವು ರಾಜು ಅವರನ್ನು ಮುಂದಿನ ಆದೇಶದವರೆಗೆ ಸಿಕಂದರಾಬಾದ್ನ ಸೇನಾ ಆಸ್ಪತ್ರೆಯಲ್ಲಿರಿಸಬೇಕೆಂದು ನಿರ್ದೇಶನ ನೀಡಿದೆ.</p>.<p>ತೆಲಂಗಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯವರಿಂದ ನೇಮಕವಾಗಿರುವ ನ್ಯಾಯಾಂಗ ಅಧಿಕಾರಿಯ ಸಮ್ಮುಖದಲ್ಲೇ ರಾಜು ಅವರ ವೈದ್ಯಕೀಯ ಪರೀಕ್ಷೆ ನಡೆಯಬೇಕೆಂದೂ ನ್ಯಾಯಪೀಠವು ಆದೇಶಿಸಿದೆ.</p>.<p>ಸೇನಾ ಆಸ್ಪತ್ರೆಯ ಮುಖ್ಯಸ್ಥರ ನೇತೃತ್ವದಲ್ಲಿ ಮೂವರು ವೈದ್ಯರ ಮಂಡಳಿಯು ರಾಜು ಅವರ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಿದೆ. ವೈದ್ಯಕೀಯ ಪರೀಕ್ಷೆಯ ವಿಡಿಯೊ ಚಿತ್ರೀಕರಣ ಮಾಡಿ ಅದರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ತಲುಪಿಸಬೇಕೆಂದು ನ್ಯಾಯಾಲಯವು ನಿರ್ದೇಶಿಸಿದೆ.</p>.<p>ದೆಹಲಿ ಹೈಕೋರ್ಟ್ ನಿರ್ದೇಶನದಂತೆ ರಾಜು ಅವರಿಗೆ ವೈ ಶ್ರೇಣಿಯ ಭದ್ರತೆಯನ್ನು ಒದಗಿಸಬೇಕೆಂದು ಸುಪ್ರೀಂ ಕೋರ್ಟ್ ತಿಳಿಸಿದೆ. </p>.<p>ತಮಗೆ ವೈ ಶ್ರೇಣಿಯ ಭದ್ರತೆ ಒದಗಿಸಬೇಕೆಂದು ಕೋರಿ ರಾಜು ಅವರು ಕಳೆದ ವರ್ಷ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>