<p><strong>ನವದೆಹಲಿ:</strong> ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ನೋಯ್ಡಾ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಯಾದವ್ ಸಿಂಗ್ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ಗುರುವಾರ ಆದೇಶಿಸಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಈಗಾಗಲೇ ಪೂರಕ ಆರೋಪ ಪಟ್ಟಿ ಸಲ್ಲಿಸಿದ್ದು, ಆರೋಪಿ ವಿರುದ್ದ ಜಾಮೀನು ನೀಡಬಹುದಾದ ಬಂಧನ ವಾರಂಟ್ ಜಾರಿಗೊಳಿಸಲಾಗಿದೆ ಎಂದು ಯಾದವ್ ಸಿಂಗ್ ಪರ ಹಾಜರಿದ್ದ ಹಿರಿಯ ವಕೀಲ ಎನ್.ಕೆ.ಕೌಲ್ ವಾದವನ್ನು ಪರಿಗಣಿಸಿ, ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಹಾಗೂ ಪ್ರಶಾಂತಕುಮಾರ್ ಮಿಶ್ರಾ ಅವರಿದ್ದ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿತು.</p>.<p>2011ರ ಡಿಸೆಂಬರ್ನಲ್ಲಿ ₹954 ಕೋಟಿ ಮೊತ್ತದ 1,280 ನಿರ್ವಹಣಾ ಗುತ್ತಿಗೆಗಳನ್ನು ಎಂಟೇ ದಿನಗಳಲ್ಲಿ ಹಂಚಿಕೆ ಮಾಡಿರುವುದಕ್ಕೆ ಸಂಬಂಧಿಸಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆರೋಪವನ್ನು ಯಾದವ್ ಸಿಂಗ್ ಎದುರಿಸುತ್ತಿದ್ದಾರೆ.</p>.<p>‘ಪ್ರಕರಣಕ್ಕೆ ಸಂಬಂಧಿಸಿ ನನ್ನ ಕಕ್ಷಿದಾರ ಯಾದವ್ ಸಿಂಗ್ ಈಗಾಗಲೇ ಮೂರು ವರ್ಷ ಸೆರೆವಾಸ ಅನುಭವಿಸಿದ್ದಾರೆ. ಸಿಬಿಐ ಪೂರಕ ಆರೋಪಪಟ್ಟಿ ಸಲ್ಲಿಸಿರುವ ಕಾರಣ, ಸಿಂಗ್ ಈಗ ಮತ್ತೆ ಬಂಧನದ ಭೀತಿ ಎದುರಿಸುತ್ತಿದ್ದಾರೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತರಲಾಯಿತು ಎಂದು ಕೌಲ್ ಹೇಳಿದ್ದಾರೆ.</p>.<p>‘ಸಿಂಗ್ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು’ ಎಂಬುದಾಗಿ ಸೂಚಿಸಿದ ನ್ಯಾಯಪೀಠ, ಸಿಂಗ್ ಸಲ್ಲಿಸಿರುವ ಜಾಮೀನು ಅರ್ಜಿ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ನೋಟಿಸ್ ನೀಡಿದೆ. ನಾಲ್ಕು ವಾರಗಳ ನಂತರ ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ನೋಯ್ಡಾ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಯಾದವ್ ಸಿಂಗ್ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ಗುರುವಾರ ಆದೇಶಿಸಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಈಗಾಗಲೇ ಪೂರಕ ಆರೋಪ ಪಟ್ಟಿ ಸಲ್ಲಿಸಿದ್ದು, ಆರೋಪಿ ವಿರುದ್ದ ಜಾಮೀನು ನೀಡಬಹುದಾದ ಬಂಧನ ವಾರಂಟ್ ಜಾರಿಗೊಳಿಸಲಾಗಿದೆ ಎಂದು ಯಾದವ್ ಸಿಂಗ್ ಪರ ಹಾಜರಿದ್ದ ಹಿರಿಯ ವಕೀಲ ಎನ್.ಕೆ.ಕೌಲ್ ವಾದವನ್ನು ಪರಿಗಣಿಸಿ, ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಹಾಗೂ ಪ್ರಶಾಂತಕುಮಾರ್ ಮಿಶ್ರಾ ಅವರಿದ್ದ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿತು.</p>.<p>2011ರ ಡಿಸೆಂಬರ್ನಲ್ಲಿ ₹954 ಕೋಟಿ ಮೊತ್ತದ 1,280 ನಿರ್ವಹಣಾ ಗುತ್ತಿಗೆಗಳನ್ನು ಎಂಟೇ ದಿನಗಳಲ್ಲಿ ಹಂಚಿಕೆ ಮಾಡಿರುವುದಕ್ಕೆ ಸಂಬಂಧಿಸಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆರೋಪವನ್ನು ಯಾದವ್ ಸಿಂಗ್ ಎದುರಿಸುತ್ತಿದ್ದಾರೆ.</p>.<p>‘ಪ್ರಕರಣಕ್ಕೆ ಸಂಬಂಧಿಸಿ ನನ್ನ ಕಕ್ಷಿದಾರ ಯಾದವ್ ಸಿಂಗ್ ಈಗಾಗಲೇ ಮೂರು ವರ್ಷ ಸೆರೆವಾಸ ಅನುಭವಿಸಿದ್ದಾರೆ. ಸಿಬಿಐ ಪೂರಕ ಆರೋಪಪಟ್ಟಿ ಸಲ್ಲಿಸಿರುವ ಕಾರಣ, ಸಿಂಗ್ ಈಗ ಮತ್ತೆ ಬಂಧನದ ಭೀತಿ ಎದುರಿಸುತ್ತಿದ್ದಾರೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತರಲಾಯಿತು ಎಂದು ಕೌಲ್ ಹೇಳಿದ್ದಾರೆ.</p>.<p>‘ಸಿಂಗ್ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು’ ಎಂಬುದಾಗಿ ಸೂಚಿಸಿದ ನ್ಯಾಯಪೀಠ, ಸಿಂಗ್ ಸಲ್ಲಿಸಿರುವ ಜಾಮೀನು ಅರ್ಜಿ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ನೋಟಿಸ್ ನೀಡಿದೆ. ನಾಲ್ಕು ವಾರಗಳ ನಂತರ ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>