<p><strong>ನವದೆಹಲಿ</strong>: ಜಮ್ಮು ಮತ್ತು ಕಾಶ್ಮೀರದ ಕುಟುಂಬದ ಆರು ಮಂದಿಯ ಪೌರತ್ವದ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರನ್ನು ಪಾಕಿಸ್ತಾನಕ್ಕೆ ಗಡೀಪಾರು ಮಾಡದಂತೆ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.</p>.<p>ವೀಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ವಾಸವಿರುವ ಆರೋಪ ಅವರ ಮೇಲಿದೆ.</p>.<p>ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಎನ್.ಕೋಟೀಶ್ವರ ಸಿಂಗ್ ಅವರು, ಯಾವುದೇ ಕಾಲಮಿತಿ ನಿಗದಿ ಮಾಡದೆ, ಆ ಕುಟುಂಬದ ಪಾಸ್ಪೋರ್ಟ್, ಆಧಾರ್, ಪಾನ್ ಕಾರ್ಡ್ ಮತ್ತಿತರ ಗುರುತಿನ ದಾಖಲೆಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ನಿರ್ದಿಷ್ಟ ನಿರ್ಧಾರ ಕೈಗೊಳ್ಳುವವರೆಗೂ ಅಧಿಕಾರಿಗಳು ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ. ಅರ್ಜಿದಾರರು ಅಂತಿಮ ತೀರ್ಪಿನಿಂದ ಅತೃಪ್ತರಾದಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಕ್ ಹೈಕೋರ್ಟ್ ಮೊರೆ ಹೋಗಬಹುದು ಎಂದು ನ್ಯಾಯಪೀಠ ತಿಳಿಸಿತು.</p>.<p>ಪಹಲ್ಗಾಮ್ ದಾಳಿ ನಂತರ ಕಾಶ್ಮೀರದಲ್ಲಿ ನೆಲಸಿರುವ ಕುಟುಂಬವು ಗಡೀಪಾರು ಸವಾಲು ಎದುರಿಸುತ್ತಿದೆ. ಕುಟುಂಬದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ.</p>.<p>ಭಾರತೀಯ ದಾಖಲೆಗಳಿದ್ದರೂ ಬಂಧಿಸಿ ಗಡೀಪಾರು ಮಾಡಲು ವಾಘಾ ಗಡಿಗೆ ಕೊಂಡೊಯ್ದಿದ್ದಾಗಿ ಅಹ್ಮದ್ ತಾರೀಕ್ ಭಟ್ ಮತ್ತು ಅವರ ಕುಟುಂಬದ ಐದು ಮಂದಿ ಆರೋಪಿಸಿ, ಕೋರ್ಟ್ ಮೆಟ್ಟಿಲೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜಮ್ಮು ಮತ್ತು ಕಾಶ್ಮೀರದ ಕುಟುಂಬದ ಆರು ಮಂದಿಯ ಪೌರತ್ವದ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರನ್ನು ಪಾಕಿಸ್ತಾನಕ್ಕೆ ಗಡೀಪಾರು ಮಾಡದಂತೆ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.</p>.<p>ವೀಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ವಾಸವಿರುವ ಆರೋಪ ಅವರ ಮೇಲಿದೆ.</p>.<p>ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಎನ್.ಕೋಟೀಶ್ವರ ಸಿಂಗ್ ಅವರು, ಯಾವುದೇ ಕಾಲಮಿತಿ ನಿಗದಿ ಮಾಡದೆ, ಆ ಕುಟುಂಬದ ಪಾಸ್ಪೋರ್ಟ್, ಆಧಾರ್, ಪಾನ್ ಕಾರ್ಡ್ ಮತ್ತಿತರ ಗುರುತಿನ ದಾಖಲೆಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ನಿರ್ದಿಷ್ಟ ನಿರ್ಧಾರ ಕೈಗೊಳ್ಳುವವರೆಗೂ ಅಧಿಕಾರಿಗಳು ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ. ಅರ್ಜಿದಾರರು ಅಂತಿಮ ತೀರ್ಪಿನಿಂದ ಅತೃಪ್ತರಾದಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಕ್ ಹೈಕೋರ್ಟ್ ಮೊರೆ ಹೋಗಬಹುದು ಎಂದು ನ್ಯಾಯಪೀಠ ತಿಳಿಸಿತು.</p>.<p>ಪಹಲ್ಗಾಮ್ ದಾಳಿ ನಂತರ ಕಾಶ್ಮೀರದಲ್ಲಿ ನೆಲಸಿರುವ ಕುಟುಂಬವು ಗಡೀಪಾರು ಸವಾಲು ಎದುರಿಸುತ್ತಿದೆ. ಕುಟುಂಬದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ.</p>.<p>ಭಾರತೀಯ ದಾಖಲೆಗಳಿದ್ದರೂ ಬಂಧಿಸಿ ಗಡೀಪಾರು ಮಾಡಲು ವಾಘಾ ಗಡಿಗೆ ಕೊಂಡೊಯ್ದಿದ್ದಾಗಿ ಅಹ್ಮದ್ ತಾರೀಕ್ ಭಟ್ ಮತ್ತು ಅವರ ಕುಟುಂಬದ ಐದು ಮಂದಿ ಆರೋಪಿಸಿ, ಕೋರ್ಟ್ ಮೆಟ್ಟಿಲೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>