<p><strong>ನವದೆಹಲಿ:</strong> 2020ರ ಡಿಸೆಂಬರ್ನಲ್ಲಿ ಪತ್ರಿಕಾಗೋಷ್ಠಿಯೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಎಲ್. ಮುರುಗನ್ ಅವರ ವಿರುದ್ಧ ಚೆನ್ನೈನ ಮುರಸೋಳಿ ಟ್ರಸ್ಟ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಪಡಿಸಿದೆ. </p>.<p>ಟ್ರಸ್ಟ್ನ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶವು ಮುರುಗನ್ ಅವರಿಗೆ ಇರಲಿಲ್ಲ ಎಂದು ಅವರ ಪರ ವಕೀಲರು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರು ಇರುವ ವಿಭಾಗೀಯ ಪೀಠಕ್ಕೆ ಸ್ಪಷ್ಟಪಡಿಸಿದರು. ಈ ಹೇಳಿಕೆಯನ್ನು ಆಲಿಸಿದ ಪೀಠವು, ಮೊಕದ್ದಮೆಯನ್ನು ರದ್ದುಪಡಿಸಿತು.</p>.<p>ಟ್ರಸ್ಟ್ಗೆ ಹಾನಿ ಉಂಟುಮಾಡುವ ಉದ್ದೇಶ ತಮಗೆ ಇರಲಿಲ್ಲ ಎಂಬುದನ್ನು ಮುರುಗನ್ ಅವರು ಸ್ಪಷ್ಟಪಡಿಸಿರುವ ಕಾರಣ, ಮಾನನಷ್ಟ ಮೊಕದ್ದಮೆಯನ್ನು ಮುಂದುವರಿಸುವ ಉದ್ದೇಶ ತಮಗೆ ಇಲ್ಲ ಎಂದು ಟ್ರಸ್ಟ್ ಪರ ವಕೀಲರು ಬಹಳ ಘನತೆಯಿಂದ ಹೇಳಿದ್ದಾರೆ ಎಂಬುದನ್ನು ಪೀಠವು ದಾಖಲಿಸಿದೆ.</p>.<p>‘ಪ್ರತಿವಾದಿ ಟ್ರಸ್ಟ್ನವರು ತೋರಿದ ಘನತೆಗೆ ನಮ್ಮ ಮೆಚ್ಚುಗೆಯನ್ನು ದಾಖಲಿಸುತ್ತಿದ್ದೇವೆ’ ಎಂದು ಪೀಠವು ಹೇಳಿದೆ.</p>.<p>ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸಲು ನಿರಾಕರಿಸಿದ ಮದ್ರಾಸ್ ಹೈಕೋರ್ಟ್ನ ಕ್ರಮವನ್ನು ಸುಪ್ರೀಂ ಕೋರ್ಟ್ ಅಸಿಂಧುಗೊಳಿಸಿದೆ. ಜೊತೆಗೆ, ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸಿದೆ.</p>.<p>ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಮುರುಗನ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2020ರ ಡಿಸೆಂಬರ್ನಲ್ಲಿ ಪತ್ರಿಕಾಗೋಷ್ಠಿಯೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಎಲ್. ಮುರುಗನ್ ಅವರ ವಿರುದ್ಧ ಚೆನ್ನೈನ ಮುರಸೋಳಿ ಟ್ರಸ್ಟ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಪಡಿಸಿದೆ. </p>.<p>ಟ್ರಸ್ಟ್ನ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶವು ಮುರುಗನ್ ಅವರಿಗೆ ಇರಲಿಲ್ಲ ಎಂದು ಅವರ ಪರ ವಕೀಲರು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರು ಇರುವ ವಿಭಾಗೀಯ ಪೀಠಕ್ಕೆ ಸ್ಪಷ್ಟಪಡಿಸಿದರು. ಈ ಹೇಳಿಕೆಯನ್ನು ಆಲಿಸಿದ ಪೀಠವು, ಮೊಕದ್ದಮೆಯನ್ನು ರದ್ದುಪಡಿಸಿತು.</p>.<p>ಟ್ರಸ್ಟ್ಗೆ ಹಾನಿ ಉಂಟುಮಾಡುವ ಉದ್ದೇಶ ತಮಗೆ ಇರಲಿಲ್ಲ ಎಂಬುದನ್ನು ಮುರುಗನ್ ಅವರು ಸ್ಪಷ್ಟಪಡಿಸಿರುವ ಕಾರಣ, ಮಾನನಷ್ಟ ಮೊಕದ್ದಮೆಯನ್ನು ಮುಂದುವರಿಸುವ ಉದ್ದೇಶ ತಮಗೆ ಇಲ್ಲ ಎಂದು ಟ್ರಸ್ಟ್ ಪರ ವಕೀಲರು ಬಹಳ ಘನತೆಯಿಂದ ಹೇಳಿದ್ದಾರೆ ಎಂಬುದನ್ನು ಪೀಠವು ದಾಖಲಿಸಿದೆ.</p>.<p>‘ಪ್ರತಿವಾದಿ ಟ್ರಸ್ಟ್ನವರು ತೋರಿದ ಘನತೆಗೆ ನಮ್ಮ ಮೆಚ್ಚುಗೆಯನ್ನು ದಾಖಲಿಸುತ್ತಿದ್ದೇವೆ’ ಎಂದು ಪೀಠವು ಹೇಳಿದೆ.</p>.<p>ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸಲು ನಿರಾಕರಿಸಿದ ಮದ್ರಾಸ್ ಹೈಕೋರ್ಟ್ನ ಕ್ರಮವನ್ನು ಸುಪ್ರೀಂ ಕೋರ್ಟ್ ಅಸಿಂಧುಗೊಳಿಸಿದೆ. ಜೊತೆಗೆ, ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸಿದೆ.</p>.<p>ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಮುರುಗನ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>