<p><strong>ನವದೆಹಲಿ: </strong>ಭಾರತ ರಾಷ್ಟ್ರ ಸಮಿತಿ (ಈ ಹಿಂದಿನ ಟಿಆರ್ಎಸ್) ಪಕ್ಷದ ಶಾಸಕರ ಖರೀದಿ ಯತ್ನ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ವಹಿಸಲು ಅನುಮತಿ ನೀಡಿದ್ದ ತೆಲಂಗಾಣ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.</p>.<p>ಹೈಕೋರ್ಟ್ ಆದೇಶ ಪ್ರಶ್ನಿಸಿ ಆರೋಪಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ವಿಕ್ರಂ ನಾಥ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ ‘ತೆಲಂಗಾಣ ಹೈಕೋರ್ಟ್ನ ವಿಭಾಗೀಯ ಪೀಠವು ನವೆಂಬರ್ 15ರಂದು ನೀಡಿದ್ದ ತೀರ್ಪು ಕಾನೂನಿನಡಿ ಸಮರ್ಥನೀಯವಲ್ಲ’ ಎಂದು ಹೇಳಿತು.</p>.<p>‘ಸಾಧ್ಯವಾದಷ್ಟು ಬೇಗ ಅಂದರೆ ಮುಂದಿನ ನಾಲ್ಕು ವಾರಗಳ ಒಳಗೆಪ್ರಕರಣದ ವಿಚಾರಣೆ ನಡೆಸಿ’ ಎಂದು ನ್ಯಾಯಪೀಠವು ಹೈಕೋರ್ಟ್ಗೆ ತಾಕೀತು ಮಾಡಿತು.</p>.<p>‘ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠವು ಪ್ರಕರಣದ ವಿಚಾರಣೆಯನ್ನು ನವೆಂಬರ್ 29ರಂದು ನಿಗದಿಪಡಿಸಿದೆ. ತನ್ನ ಈ ನಿರ್ಧಾರವನ್ನು ಮರುಪರಿಷ್ಕರಿಸಬೇಕು. ಈ ಪ್ರಕರಣದ ವಿಚಾರದಲ್ಲಿ ಏಕಸದಸ್ಯ ನ್ಯಾಯಪೀಠ ಕೈಗೊಂಡಿರುವ ನಿಲುವು ಅಸಮರ್ಥನೀಯವಾದುದು’ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ತಿಳಿಸಿದೆ.</p>.<p>ಪ್ರಕರಣದ ಮೂವರು ಆರೋಪಿಗಳು ಶರಣಾಗತರಾಗಬೇಕು ಎಂದು ಹೈಕೋರ್ಟ್ ನಿರ್ದೇಶಿಸಿರುವುದಕ್ಕೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಏಕಸದಸ್ಯ ನ್ಯಾಯಪೀಠವು ತನ್ನ ತೀರ್ಪಿನ ವೇಳೆ 2014ರಲ್ಲಿ ಅರ್ಣೇಶ್ಕುಮಾರ್ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದನ್ನು ಉಲ್ಲೇಖಿಸಿದೆ. ಆ ತೀರ್ಪನ್ನು ಈ ಪ್ರಕರಣಕ್ಕೆ ಅನ್ವಯಿಸಿರುವುದು ಅಸಮಂಜಸ. ಇಂತಹ ಉಲ್ಲೇಖ ಅನಗತ್ಯವಾದುದು’ ಎಂದೂ ನ್ಯಾಯಪೀಠ ತಿಳಿಸಿದೆ.</p>.<p>‘ರಾಮಚಂದ್ರ ಭಾರತಿ ಅಲಿಯಾಸ್ ವಿ.ಕೆ.ಶರ್ಮಾ ಸೇರಿದಂತೆ ಪ್ರಕರಣದ ಇತರೆ ಆರೋಪಿಗಳು 22 ದಿನಗಳಿಂದ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿಯನ್ನು ಸಾಧ್ಯವಾದಷ್ಟು ಬೇಗ ಪರಿಗಣಿಸಿ’ ಎಂದು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠಕ್ಕೆ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭಾರತ ರಾಷ್ಟ್ರ ಸಮಿತಿ (ಈ ಹಿಂದಿನ ಟಿಆರ್ಎಸ್) ಪಕ್ಷದ ಶಾಸಕರ ಖರೀದಿ ಯತ್ನ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ವಹಿಸಲು ಅನುಮತಿ ನೀಡಿದ್ದ ತೆಲಂಗಾಣ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.</p>.<p>ಹೈಕೋರ್ಟ್ ಆದೇಶ ಪ್ರಶ್ನಿಸಿ ಆರೋಪಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ವಿಕ್ರಂ ನಾಥ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ ‘ತೆಲಂಗಾಣ ಹೈಕೋರ್ಟ್ನ ವಿಭಾಗೀಯ ಪೀಠವು ನವೆಂಬರ್ 15ರಂದು ನೀಡಿದ್ದ ತೀರ್ಪು ಕಾನೂನಿನಡಿ ಸಮರ್ಥನೀಯವಲ್ಲ’ ಎಂದು ಹೇಳಿತು.</p>.<p>‘ಸಾಧ್ಯವಾದಷ್ಟು ಬೇಗ ಅಂದರೆ ಮುಂದಿನ ನಾಲ್ಕು ವಾರಗಳ ಒಳಗೆಪ್ರಕರಣದ ವಿಚಾರಣೆ ನಡೆಸಿ’ ಎಂದು ನ್ಯಾಯಪೀಠವು ಹೈಕೋರ್ಟ್ಗೆ ತಾಕೀತು ಮಾಡಿತು.</p>.<p>‘ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠವು ಪ್ರಕರಣದ ವಿಚಾರಣೆಯನ್ನು ನವೆಂಬರ್ 29ರಂದು ನಿಗದಿಪಡಿಸಿದೆ. ತನ್ನ ಈ ನಿರ್ಧಾರವನ್ನು ಮರುಪರಿಷ್ಕರಿಸಬೇಕು. ಈ ಪ್ರಕರಣದ ವಿಚಾರದಲ್ಲಿ ಏಕಸದಸ್ಯ ನ್ಯಾಯಪೀಠ ಕೈಗೊಂಡಿರುವ ನಿಲುವು ಅಸಮರ್ಥನೀಯವಾದುದು’ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ತಿಳಿಸಿದೆ.</p>.<p>ಪ್ರಕರಣದ ಮೂವರು ಆರೋಪಿಗಳು ಶರಣಾಗತರಾಗಬೇಕು ಎಂದು ಹೈಕೋರ್ಟ್ ನಿರ್ದೇಶಿಸಿರುವುದಕ್ಕೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಏಕಸದಸ್ಯ ನ್ಯಾಯಪೀಠವು ತನ್ನ ತೀರ್ಪಿನ ವೇಳೆ 2014ರಲ್ಲಿ ಅರ್ಣೇಶ್ಕುಮಾರ್ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದನ್ನು ಉಲ್ಲೇಖಿಸಿದೆ. ಆ ತೀರ್ಪನ್ನು ಈ ಪ್ರಕರಣಕ್ಕೆ ಅನ್ವಯಿಸಿರುವುದು ಅಸಮಂಜಸ. ಇಂತಹ ಉಲ್ಲೇಖ ಅನಗತ್ಯವಾದುದು’ ಎಂದೂ ನ್ಯಾಯಪೀಠ ತಿಳಿಸಿದೆ.</p>.<p>‘ರಾಮಚಂದ್ರ ಭಾರತಿ ಅಲಿಯಾಸ್ ವಿ.ಕೆ.ಶರ್ಮಾ ಸೇರಿದಂತೆ ಪ್ರಕರಣದ ಇತರೆ ಆರೋಪಿಗಳು 22 ದಿನಗಳಿಂದ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿಯನ್ನು ಸಾಧ್ಯವಾದಷ್ಟು ಬೇಗ ಪರಿಗಣಿಸಿ’ ಎಂದು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠಕ್ಕೆ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>