<p><strong>ನವದೆಹಲಿ :</strong> ಪತ್ರಕರ್ತರ ವಿರುದ್ಧದ ಆಕ್ಷೇಪಾರ್ಹ ಪೋಸ್ಟ್ಗೆ ಸಂಬಂಧಿಸಿದಂತೆ ತಮಿಳು ಚಿತ್ರನಟ, ರಾಜಕಾರಣಿ ಎಸ್.ವಿ.ಶೇಖರ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ‘ಅವರು ಮಹಿಳೆಯರ ವಿರುದ್ಧ ಕೆಟ್ಟದಾಗಿ ಅಭಿಯಾನ ನಡೆಸಿದ್ದಾರೆ’ ಎಂದು ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್.ಕೋಟಿಶ್ವರ್ ಸಿಂಗ್ ಅವರಿದ್ದ ಪೀಠ, ‘ನಟ ತನ್ನ ನಡೆಗಾಗಿ ಕ್ಷಮೆ ಕೋರಿಲ್ಲ’ ಎಂಬುದನ್ನು ಗಮನಕ್ಕೆ ತೆಗೆದುಕೊಂಡಿತು. ಪ್ರಕರಣದ ಮುಂದಿನ ವಿಚಾರಣೆಯವರೆಗೆ ಶರಣಾಗದಂತೆ ಆರೋಪಿಗೆ ವಿನಾಯಿತಿ ನೀಡಿತು.</p>.<p class="title">‘ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ನೀವು ಮಹಿಳೆಯ ಘನತೆ, ವ್ಯಕ್ತಿತ್ವದ ಮೇಲೆ ನೇರವಾಗಿ, ಕಟುವಾಗಿ ಅನುಚಿತ ಕ್ರಮದಲ್ಲಿ ದಾಳಿ ನಡೆಸಿದ್ದೀರಿ’ ಎಂದು ಪೀಠವು ಕಟುವಾಗಿ ಹೇಳಿತು.</p>.<p>‘ಈ ನಟ ಬಹುಶಃ ಇತರೆ ಮಹಿಳೆಗೂ ಕಿರುಕುಳ ನೀಡಿರಬಹುದು. ಈ ಬಾರಿ ಪತ್ರಕರ್ತರ ಸಂಘದ ಜೊತೆಗೇ ಸಂಘರ್ಷ ನಡೆಸಿದ್ದಾರೆ’ ಎಂದು ನಟ, ರಾಜಕಾರಣಿ ಪ್ರತಿನಿಧಿಸಿದ್ದ ವಕೀಲ ಬಾಲಾಜಿ ಶ್ರೀನಿವಾಸನ್ ಅವರಿಗೆ ಪೀಠ ಹೇಳಿತು.</p>.<p>ಆಕ್ಷೇಪಾರ್ಹ ಪೋಸ್ಟ್ ಸಂಬಂಧ ಕೆಳಹಂತದ ಕೋರ್ಟ್ ಒಂದು ತಿಂಗಳು ಸಜೆ ವಿಧಿಸಿತ್ತು. ಮದ್ರಾಸ್ ಹೈಕೋರ್ಟ್ ಇದನ್ನು ಎತ್ತಿ ಹಿಡಿದಿತ್ತು. ಆದರೆ, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿ, 90 ದಿನ ಆದೇಶ ಜಾರಿಗೆ ತಡೆ ನೀಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ :</strong> ಪತ್ರಕರ್ತರ ವಿರುದ್ಧದ ಆಕ್ಷೇಪಾರ್ಹ ಪೋಸ್ಟ್ಗೆ ಸಂಬಂಧಿಸಿದಂತೆ ತಮಿಳು ಚಿತ್ರನಟ, ರಾಜಕಾರಣಿ ಎಸ್.ವಿ.ಶೇಖರ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ‘ಅವರು ಮಹಿಳೆಯರ ವಿರುದ್ಧ ಕೆಟ್ಟದಾಗಿ ಅಭಿಯಾನ ನಡೆಸಿದ್ದಾರೆ’ ಎಂದು ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್.ಕೋಟಿಶ್ವರ್ ಸಿಂಗ್ ಅವರಿದ್ದ ಪೀಠ, ‘ನಟ ತನ್ನ ನಡೆಗಾಗಿ ಕ್ಷಮೆ ಕೋರಿಲ್ಲ’ ಎಂಬುದನ್ನು ಗಮನಕ್ಕೆ ತೆಗೆದುಕೊಂಡಿತು. ಪ್ರಕರಣದ ಮುಂದಿನ ವಿಚಾರಣೆಯವರೆಗೆ ಶರಣಾಗದಂತೆ ಆರೋಪಿಗೆ ವಿನಾಯಿತಿ ನೀಡಿತು.</p>.<p class="title">‘ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ನೀವು ಮಹಿಳೆಯ ಘನತೆ, ವ್ಯಕ್ತಿತ್ವದ ಮೇಲೆ ನೇರವಾಗಿ, ಕಟುವಾಗಿ ಅನುಚಿತ ಕ್ರಮದಲ್ಲಿ ದಾಳಿ ನಡೆಸಿದ್ದೀರಿ’ ಎಂದು ಪೀಠವು ಕಟುವಾಗಿ ಹೇಳಿತು.</p>.<p>‘ಈ ನಟ ಬಹುಶಃ ಇತರೆ ಮಹಿಳೆಗೂ ಕಿರುಕುಳ ನೀಡಿರಬಹುದು. ಈ ಬಾರಿ ಪತ್ರಕರ್ತರ ಸಂಘದ ಜೊತೆಗೇ ಸಂಘರ್ಷ ನಡೆಸಿದ್ದಾರೆ’ ಎಂದು ನಟ, ರಾಜಕಾರಣಿ ಪ್ರತಿನಿಧಿಸಿದ್ದ ವಕೀಲ ಬಾಲಾಜಿ ಶ್ರೀನಿವಾಸನ್ ಅವರಿಗೆ ಪೀಠ ಹೇಳಿತು.</p>.<p>ಆಕ್ಷೇಪಾರ್ಹ ಪೋಸ್ಟ್ ಸಂಬಂಧ ಕೆಳಹಂತದ ಕೋರ್ಟ್ ಒಂದು ತಿಂಗಳು ಸಜೆ ವಿಧಿಸಿತ್ತು. ಮದ್ರಾಸ್ ಹೈಕೋರ್ಟ್ ಇದನ್ನು ಎತ್ತಿ ಹಿಡಿದಿತ್ತು. ಆದರೆ, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿ, 90 ದಿನ ಆದೇಶ ಜಾರಿಗೆ ತಡೆ ನೀಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>